ಅಶ್ಲೀಲ ಪದಗಳಲ್ಲಿ ಬೈಯುತ್ತಿರುವ ಆಡಿಯೊ ವೈರಲ್ ಆಗಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ‘ಐದಾರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಚಿವ ಸುರೇಶ್ಕುಮಾರ್, ಆರು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ, ರಾಜ್ಯ ಹಾಗೂ ಕೇಂದ್ರ ಸಚಿವರಾಗಿ ಅನುಭವವುಳ್ಳ ಸಂಸದ ವಿ.ಶ್ರೀನಿವಾಸ ಪ್ರಸಾದ್, ಶಾಸಕರಾದ ಸಿ.ಎಸ್.ನಿರಂಜನಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಶಾಸಕ ಪುಟ್ಟರಂಗಶೆಟ್ಟಿ ಅವರು ಕ್ಷೇತ್ರದ ಜನರಿಗೆ ಅವಮಾನ ಮಾಡಿದ್ದಾರೆ. ಇಂತಹ ಮಾತುಗಳನ್ನು ಕೇಳಿ ಜನರು ನಾಚಿಕೆ ಪಡುವಂತಾಗಿದೆ’ ಎಂದರು.