<p><strong>ಚಾಮರಾಜನಗರ: </strong>‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾವು ಟಿಕೆಟ್ ಆಕಾಂಕ್ಷಿಗಳು’ ಎಂದು ಬಿಜೆಪಿ ಮುಖಂಡರಾದ ಕೋಟೆ ಎಂ.ಶಿವಣ್ಣ, ಜಿ.ಎನ್.ನಂಜುಂಡಸ್ವಾಮಿ, ಸಿ.ರಮೇಶ್ ಮತ್ತು ಎಸ್.ಮಹದೇವಯ್ಯ ಅವರು ಬುಧವಾರ ಘೋಷಿಸಿದರು.</p>.<p>ಚಾಮರಾಜನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿರುವ ಅವರು, ‘ನಮ್ಮಲ್ಲಿ ಯಾರಿಗಾದರೂ ಟಿಕೆಟ್ ನೀಡಿದರೆ ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ’ ಎಂದು ಹೇಳಿದರು.</p>.<p>‘ನಾವು ಹಿರಿಯ ನಾಯಕರಾಗಿದ್ದೇವೆ. ಪಕ್ಷದ ಅನೇಕ ಜವಾಬ್ದಾರಿಗಳನ್ನು ಹೊತ್ತು ಪಕ್ಷ ಸಂಘಟನೆಗೆ ದುಡಿದಿದ್ದೇವೆ. ಅನೇಕ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಿದ್ದೇವೆ’ಎಂದು ಬಿಜೆಪಿ ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಹೇಳಿದರು.</p>.<p>‘ಪಕ್ಷದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುತ್ತಿದ್ದೇವೆ. ಅಲ್ಲದೆ, ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಘಟಕದ ಅಧ್ಯಕ್ಷರು ಕೊಟ್ಟಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದೇವೆ. ಈ ಎಲ್ಲ ಸಂದರ್ಭದಲ್ಲಿಯೂ ಪಕ್ಷದ ಸಂಘಟನೆಗಾಗಿ ಶ್ರಮಿಸಿದ್ದೇವೆ’ ಎಂದರು.</p>.<p>‘ಪಕ್ಷದ ಹೈಕಮಾಂಡ್ ಅಭ್ಯರ್ಥಿಯನ್ನು ನಿರ್ಧರಿಸುವ ಮೊದಲೇ, ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡುವುದು ಸರಿಯಲ್ಲ. ಇದರಿಂದ ಜನರಲ್ಲಿ ಗೊಂದಲ ಮೂಡಿಸಿದಂತೆ ಆಗುತ್ತದೆ’ ಎಂದು ಶಿವಣ್ಣ ಅವರು ಟಿಕೆಟ್ನ ಪ್ರಬಲ ಆಕಾಂಕ್ಷಿ ಕೆ.ಶಿವರಾಮ್ ಅವರ ಹೆಸರನ್ನು ಪ್ರಸ್ತಾಪಿಸದೆಯೇ ಹೇಳಿದರು.</p>.<p class="Briefhead"><strong>ಬಿಜೆಪಿ ಪರ ಒಲವು</strong><br />ಕಾಂಗ್ರೆಸ್, ಜೆಡಿಸ್ ಸಮ್ಮಿಶ್ರಸರ್ಕಾರದಲ್ಲಿಯೇ ಭಿನ್ನಮತ ಎದ್ದಿದೆ. ಇದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹೀಗಾಗಿ, ಜನರು ಬಿಜೆಪಿಯತ್ತ ಒಲವು ತೋರಿಸುತ್ತಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಜನ ಬೇಸತ್ತಿದ್ದಾರೆ ಎಂದು ಕೋಟೆ ಎಂ.ಶಿವಣ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾವು ಟಿಕೆಟ್ ಆಕಾಂಕ್ಷಿಗಳು’ ಎಂದು ಬಿಜೆಪಿ ಮುಖಂಡರಾದ ಕೋಟೆ ಎಂ.ಶಿವಣ್ಣ, ಜಿ.ಎನ್.ನಂಜುಂಡಸ್ವಾಮಿ, ಸಿ.ರಮೇಶ್ ಮತ್ತು ಎಸ್.ಮಹದೇವಯ್ಯ ಅವರು ಬುಧವಾರ ಘೋಷಿಸಿದರು.</p>.<p>ಚಾಮರಾಜನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿರುವ ಅವರು, ‘ನಮ್ಮಲ್ಲಿ ಯಾರಿಗಾದರೂ ಟಿಕೆಟ್ ನೀಡಿದರೆ ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ’ ಎಂದು ಹೇಳಿದರು.</p>.<p>‘ನಾವು ಹಿರಿಯ ನಾಯಕರಾಗಿದ್ದೇವೆ. ಪಕ್ಷದ ಅನೇಕ ಜವಾಬ್ದಾರಿಗಳನ್ನು ಹೊತ್ತು ಪಕ್ಷ ಸಂಘಟನೆಗೆ ದುಡಿದಿದ್ದೇವೆ. ಅನೇಕ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಿದ್ದೇವೆ’ಎಂದು ಬಿಜೆಪಿ ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಹೇಳಿದರು.</p>.<p>‘ಪಕ್ಷದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುತ್ತಿದ್ದೇವೆ. ಅಲ್ಲದೆ, ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಘಟಕದ ಅಧ್ಯಕ್ಷರು ಕೊಟ್ಟಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದೇವೆ. ಈ ಎಲ್ಲ ಸಂದರ್ಭದಲ್ಲಿಯೂ ಪಕ್ಷದ ಸಂಘಟನೆಗಾಗಿ ಶ್ರಮಿಸಿದ್ದೇವೆ’ ಎಂದರು.</p>.<p>‘ಪಕ್ಷದ ಹೈಕಮಾಂಡ್ ಅಭ್ಯರ್ಥಿಯನ್ನು ನಿರ್ಧರಿಸುವ ಮೊದಲೇ, ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡುವುದು ಸರಿಯಲ್ಲ. ಇದರಿಂದ ಜನರಲ್ಲಿ ಗೊಂದಲ ಮೂಡಿಸಿದಂತೆ ಆಗುತ್ತದೆ’ ಎಂದು ಶಿವಣ್ಣ ಅವರು ಟಿಕೆಟ್ನ ಪ್ರಬಲ ಆಕಾಂಕ್ಷಿ ಕೆ.ಶಿವರಾಮ್ ಅವರ ಹೆಸರನ್ನು ಪ್ರಸ್ತಾಪಿಸದೆಯೇ ಹೇಳಿದರು.</p>.<p class="Briefhead"><strong>ಬಿಜೆಪಿ ಪರ ಒಲವು</strong><br />ಕಾಂಗ್ರೆಸ್, ಜೆಡಿಸ್ ಸಮ್ಮಿಶ್ರಸರ್ಕಾರದಲ್ಲಿಯೇ ಭಿನ್ನಮತ ಎದ್ದಿದೆ. ಇದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹೀಗಾಗಿ, ಜನರು ಬಿಜೆಪಿಯತ್ತ ಒಲವು ತೋರಿಸುತ್ತಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಜನ ಬೇಸತ್ತಿದ್ದಾರೆ ಎಂದು ಕೋಟೆ ಎಂ.ಶಿವಣ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>