ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಧ್ಯಕ್ಷರು ಹಾಗೂ ಸದಸ್ಯರು ಸಾರ್ವಜನಿಕ ಪರಸ್ಪರ ಬೈದಾಡಿಕೊಂಡು ಜಿಲ್ಲಾಡಳಿತ ಭವನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿ ಅವರು ತಕ್ಷಣವೇ ಈ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ, ಜಿಲ್ಲಾ ಪಂಚಾಯಿತಿಯನ್ನು ಸೂಪರ್ ಸೀಡ್ ಮಾಡುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.