ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಐತಿಹಾಸಿಕ ಗೆಲುವಿಗೆ ಶ್ರಮಿಸಿ: ಫಣೀಶ್‌

Published : 16 ಫೆಬ್ರುವರಿ 2024, 2:35 IST
Last Updated : 16 ಫೆಬ್ರುವರಿ 2024, 2:35 IST
ಫಾಲೋ ಮಾಡಿ
Comments
ರಾಹುಲ್‌ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್‌ ಮುಖಂಡರು ದೇಶ ವಿಭಜನೆಯ ಮಾತನಾಡುತ್ತಿದ್ದಾರೆ
ಸಿ.ಎಸ್‌.ನಿರಂಜನ್‌ಕುಮಾರ್‌ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರವಾಗಬೇಕು ಎಂದು ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ದೇಶ ವಿಭಜನೆಗೆ ಬಿಜೆಪಿ ಅವಕಾಶ ಕೊಡುವುದಿಲ್ಲ
ಎನ್‌.ಮಹೇಶ್‌ ಬಿಜೆಪಿ ರಾಜ್ಯ ಉಪಾಧ್ಯಕ್ಷ
‘ವಿಕಸಿತ ಭಾರತಕ್ಕಾಗಿ ಮೋದಿ ಗೆಲ್ಲಬೇಕು’
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಮಾತನಾಡಿ ‘2047ಕ್ಕೆ ದೇಶ ಆತ್ಯಂತ ಅಭಿವೃದ್ಧಿ ಹೊಂದಿದ ರಾಷ್ಟ್ರ ಆಗಬೇಕು. ಆರ್ಥಿಕವಾಗಿ ನಂಬರ್‌ 1 ರಾಷ್ಟ್ರವಾಗಬೇಕು ಎಂಬುದು ಮೋದಿ ಕನಸು. ವಿಕಸಿತ ಭಾರತದ ಕಲ್ಪನೆ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಭಾರತವು ಜಗತ್ತಿಗೆ ಮಾರ್ಗದರ್ಶನ ಮಾಡುವಂತಹ ಮತ್ತು ಎಲ್ಲರಿಗೂ ಸಹಾಯ ಮಾಡುವಂತಹ ಮಟ್ಟಿಗೆ ಬೆಳೆಯಬೇಕು ಎಂದು ಘೋಷಣೆ ಮಾಡಿದ್ದಾರೆ’ ಎಂದರು.  ‘2014ರಲ್ಲಿ ಭಾರತವು ಜಗತ್ತಿನಲ್ಲಿ10ನೇ ಆರ್ಥಿಕ ಶಕ್ತಿಯಾಗಿತ್ತು. ಮೋದಿಯವರು 10 ವರ್ಷಗಳಲ್ಲಿ 5ನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. 2028ಕ್ಕೆ ಮೂರನೇ ಸ್ಥಾನಕ್ಕೆ ತರುವ ಗ್ಯಾರಂಟಿಯನ್ನು ಮೋದಿ ನೀಡಿದ್ದಾರೆ. 25 ಕೋಟಿ ಜನರು ಬಡತನದಿಂದ ಹೊರ ಬಂದಿದ್ದಾರೆ ಎಂದು ನೀತಿ ಆಯೋಗದ ವರದಿ ಹೇಳಿದೆ. ಇದನ್ನೆಲ್ಲ ನೋಡುತ್ತಿದ್ದರೆ 2047ರ ಹೊತ್ತಿಗೆ ಭಾರತ ಅತ್ಯಂತ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮುವುದರಲ್ಲಿ ಅನುಮಾನ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT