<p>ಚಾಮರಾಜನಗರ: ಮೋದಿ ನೇತೃತ್ವದ ಕೇಂದ್ರ ಸರ್ಕಾರ 10 ವರ್ಷಗಳ ಅವಧಿಯಲ್ಲಿ ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್ ಹೇಳಿದರು.</p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನರೇಂದ್ರಮೋದಿ ಅವರು ರೈತರಿಗೆ ಏನೂ ಮಾಡಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ, ರೈತರಿಗಾಗಿಜಾರಿಗೊಳಿಸಿದ ಯೋಜನೆಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ’ ಎಂದು ದೂರಿದರು.</p>.<p>‘ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ ರೈತರಿಗೆ ವರ್ಷಕ್ಕೆ ₹6000 ನೀಡುತ್ತದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಇದಕ್ಕೆ ಹೆಚ್ಚುವರಿಯಾಗಿ ₹4000 ಸೇರಿಸಿದ್ದರು. ಒಟ್ಟು ₹10 ಸಾವಿರ ಸಿಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ₹4000 ರಾಜ್ಯದ ಪಾಲನ್ನು ನಿಲ್ಲಿಸಿದೆ. ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹಧನ ಕೂಡ ನಿಲ್ಲಿಸಲಾಗಿದೆ’ ಎಂದರು.</p>.<p>‘ರೈತರು ತಮ್ಮ ಜಮೀನುಗಳಲ್ಲಿ ವಿದ್ಯುತ್ ಪರಿವರ್ತಕ ಹಾಕಿಸಿಕೊಳ್ಳಲು ಈ ಹಿಂದೆ ₹25 ಸಾವಿರ ಕಟ್ಟಬೇಕಿತ್ತು. ಆದರೆ, ಈಗ ₹1.50 ಲಕ್ಷ ಕಟ್ಟಬೇಕಿದೆ. ಸರಿಯಾಗಿ ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ. ಇದರಿಂದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ’ ಎಂದು ದೂರಿದರು.</p>.<p>‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತ ಮುಸ್ಲಿಂ ರಾಷ್ಟ್ರವಾಗಲಿದೆ. ಹಿಂದೂಗಳ ರಕ್ಷಣೆಗೆ ಬಿಜೆಪಿ ಬೆಂಬಲಿಸಬೇಕು’ ಎಂದು ರುದ್ರೇಶ್ ಮನವಿ ಮಾಡಿದರು.</p>.<p>ಸುದ್ದಿಗೋಷ್ಟಿಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎನ್ರಿಚ್ ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮುಖಂಡರಾದ ಹನುಮಂತಶೆಟ್ಟಿ, ಬಸವಣ್ಣ, ಮಲ್ಲೇಶ್, ಕಾಡಹಳ್ಳಿ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಮೋದಿ ನೇತೃತ್ವದ ಕೇಂದ್ರ ಸರ್ಕಾರ 10 ವರ್ಷಗಳ ಅವಧಿಯಲ್ಲಿ ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್ ಹೇಳಿದರು.</p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನರೇಂದ್ರಮೋದಿ ಅವರು ರೈತರಿಗೆ ಏನೂ ಮಾಡಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ, ರೈತರಿಗಾಗಿಜಾರಿಗೊಳಿಸಿದ ಯೋಜನೆಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ’ ಎಂದು ದೂರಿದರು.</p>.<p>‘ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ ರೈತರಿಗೆ ವರ್ಷಕ್ಕೆ ₹6000 ನೀಡುತ್ತದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಇದಕ್ಕೆ ಹೆಚ್ಚುವರಿಯಾಗಿ ₹4000 ಸೇರಿಸಿದ್ದರು. ಒಟ್ಟು ₹10 ಸಾವಿರ ಸಿಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ₹4000 ರಾಜ್ಯದ ಪಾಲನ್ನು ನಿಲ್ಲಿಸಿದೆ. ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹಧನ ಕೂಡ ನಿಲ್ಲಿಸಲಾಗಿದೆ’ ಎಂದರು.</p>.<p>‘ರೈತರು ತಮ್ಮ ಜಮೀನುಗಳಲ್ಲಿ ವಿದ್ಯುತ್ ಪರಿವರ್ತಕ ಹಾಕಿಸಿಕೊಳ್ಳಲು ಈ ಹಿಂದೆ ₹25 ಸಾವಿರ ಕಟ್ಟಬೇಕಿತ್ತು. ಆದರೆ, ಈಗ ₹1.50 ಲಕ್ಷ ಕಟ್ಟಬೇಕಿದೆ. ಸರಿಯಾಗಿ ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ. ಇದರಿಂದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ’ ಎಂದು ದೂರಿದರು.</p>.<p>‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತ ಮುಸ್ಲಿಂ ರಾಷ್ಟ್ರವಾಗಲಿದೆ. ಹಿಂದೂಗಳ ರಕ್ಷಣೆಗೆ ಬಿಜೆಪಿ ಬೆಂಬಲಿಸಬೇಕು’ ಎಂದು ರುದ್ರೇಶ್ ಮನವಿ ಮಾಡಿದರು.</p>.<p>ಸುದ್ದಿಗೋಷ್ಟಿಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎನ್ರಿಚ್ ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮುಖಂಡರಾದ ಹನುಮಂತಶೆಟ್ಟಿ, ಬಸವಣ್ಣ, ಮಲ್ಲೇಶ್, ಕಾಡಹಳ್ಳಿ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>