ಎನ್.ಮಹೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾರ್ಚ್ 28ರಂದು ಕೊಳ್ಳೇಗಾಲದಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ನಂಜುಂಡಸ್ವಾಮಿ ಅವರು ನಮ್ಮ ಅಭ್ಯರ್ಥಿ ಬಾಲರಾಜ್ ಬಗ್ಗೆ ಕೆಟ್ಟದಾಗಿದೆ ಮಾತನಾಡಿದ್ದಾರೆ. ನನ್ನ ಬಗ್ಗೆಯೂ ಮಾತನಾಡಿದ್ದಾರೆ. ‘ಇಲ್ಲೊಬ್ಬ ಸಮಾಜಘಾತುಕ ಎನ್.ಮಹೇಶ್ ಇದ್ದಾರೆ. ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೆ ಏನು ಮಾಡಿಲ್ಲ ಎನ್ನುತ್ತಿದ್ದಾರೆ. ಮಹೇಶ್ ಶಿಕ್ಷಣ ಸಚಿವರಾದ್ದ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಕೊಡುವ ದುಡ್ಡಲ್ಲಿ ₹30 ಕೋಟಿ ಲೂಟಿ ಹೊಡೆದಿದ್ದಾರೆ. ಈಗ ಬಾಲರಾಜ್ ಅವರನ್ನು ಹಾಳು ಮಾಡಲು ಬಂದಿದ್ದೀರಿ’ ಎಂದು ಹೇಳಿದ್ದಾರೆ. ಇದು ಮಾಧ್ಯಮದಲ್ಲಿ ಸುದ್ದಿಯಾಗಿದೆ. ಇದು ನನ್ನ ಮಾನಹಾನಿ ಮಾಡುವಂತಹ ಮಾತು’ ಎಂದರು.