‘ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ, ಸಿಬಿಐ ಸ್ವಾಯತ್ವ ಸಂಸ್ಥೆಗಳಾಗಿದ್ದು, ಯಾವುದೇ ಸರ್ಕಾರ ಇವುಗಳ ಕಾರ್ಯನಿರ್ವಹಣೆ ಮೇಲೆ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಬಂಧನದ ವಿರುದ್ಧ ಪ್ರತಿಭಟನೆ ಮಾಡುತ್ತಾ, ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡುತ್ತಾ ಕಾಂಗ್ರೆಸ್ ಮತ್ತು ಜೆಡಿಎಸ್ ಅವಿವೇಕಿತನ ಪ್ರದರ್ಶಿಸುತ್ತಿವೆ. ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಆರೋಪಿಸಿದರು.