<p><strong>ಕೊಳ್ಳೇಗಾಲ</strong>: ‘ಬಿಜೆಪಿಯಲ್ಲಿ ಬಂಡಾಯ ಇಲ್ಲ, ಎಲ್ಲ ನಾಯಕರು ಒಗ್ಗಟ್ಟಿನಿಂದ ಸರ್ಕಾರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವರಿಷ್ಠರನ್ನು ಭೇಟಿಯಾಗಲು ಯಾರು ಬೇಕಾದರೂ ದೆಹಲಿಗೆ ಹೋಗಬಹುದು. ಹಾಗೆಯೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಹಾಗೂ ಕೆಲವು ಶಾಸಕರು ದೆಹಲಿಗೆ ಹೋಗಿ ಬಂದಿದ್ದಾರೆ. ಇದರಲ್ಲಿ ಬಂಡಾಯ ಇಲ್ಲ’ ಎಂದರು.</p>.<p>‘ಪಕ್ಷದಲ್ಲಿರುವ ಸಣ್ಣ ಗೊಂದಲಗಳನ್ನು ನಾಯಕರು ಬಗೆಹರಿಸಿಕೊಳ್ಳಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು ಯಾರಾಗಬೇಕು ಎಂದು ಹೈಕಮಾಂಡ್ ತೀರ್ಮಾನಿಸುತ್ತದೆ. ಸದ್ಯ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದೇವೆ. ಮುಡಾ, ವಾಲ್ಮೀಕಿ ಹಗರಣಗಳ ವಿರುದ್ಧ ಹೋರಾಟ ಮಾಡಿ ಸಚಿವರು, ಶಾಸಕರನ್ನು ಜೈಲಿಗೆ ಕಳುಹಿಸಿದ್ದೇವೆ’ ಎಂದರು.</p>.<p><strong>ಕಾಂಗ್ರೆಸ್ನಲ್ಲಿ ಒಗ್ಗಟ್ಟು ಇಲ್ಲ:</strong> ‘ಎರಡೂವರೆ ವರ್ಷ ಒಗ್ಗಟ್ಟು ಪ್ರದರ್ಶಿಸದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಈಗ ಒಗ್ಗಟ್ಟಿನ ಜಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಒಡೆದ ಹಾಗೂ ಸುಡುವ ಮನೆಯಾಗಿದೆ. ಕಾಂಗ್ರೆಸ್ ಎಂಬ ಒಡೆದುಹೋದ ಕನ್ನಡಿ ಮರು ಜೋಡಿಸಲು ಸಾಧ್ಯವಿಲ್ಲ’ ಎಂದರು.</p>.<p>‘ಕಾಂಗ್ರೆಸ್ಲ್ಲಿ ಹೈಕಮಾಂಡ್ ಸತ್ತು ಹೋಗಿದೆ. ರಾಹುಲ್ ಗಾಂಧಿ ಮೆದುಳಿಗೂ ನಾಲಗೆಗೂ ಸಂಬಂಧ ಇಲ್ಲದಂತೆ ಮಾತನಾಡುತ್ತಾರೆ. ಹಿಂದೂಗಳನ್ನು ಹಿಂಸೆ ಎನ್ನುತ್ತಾರೆ, ರಾಹುಲ್ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು’ ಎಂದು ಟೀಕಿಸಿದರು.</p>.<p>‘ಡಿ.ಕೆ.ಶಿವಕುಮಾರ್ ಒಂದೇ ಪಕ್ಷದಲ್ಲಿದ್ದು, ಸಿದ್ಧಾಂತಗಳಿಗೆ ಬದ್ಧರಾಗಿದ್ದಾರೆ. ಆದರೆ, ಪಕ್ಷಾಂತರ ರಾಜಕಾರಣ ಮಾಡಿರುವ ಸಿದ್ದರಾಮಯ್ಯ ಸಿದ್ಧಾಂತಗಳಿಗೆ ಬದ್ಧರಾಗಿಲ್ಲ’ ಎಂದು ವಾಗ್ದಾಳಿ ನಡೆಸಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಿರಂಜನ್ ಕುಮಾರ್, ಮಾಜಿ ಶಾಸಕ ಎಸ್.ಬಾಲರಾಜು, ಪ್ರೊ.ಮಲ್ಲಿಕಾರ್ಜುನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ‘ಬಿಜೆಪಿಯಲ್ಲಿ ಬಂಡಾಯ ಇಲ್ಲ, ಎಲ್ಲ ನಾಯಕರು ಒಗ್ಗಟ್ಟಿನಿಂದ ಸರ್ಕಾರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.</p>.<p>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವರಿಷ್ಠರನ್ನು ಭೇಟಿಯಾಗಲು ಯಾರು ಬೇಕಾದರೂ ದೆಹಲಿಗೆ ಹೋಗಬಹುದು. ಹಾಗೆಯೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಹಾಗೂ ಕೆಲವು ಶಾಸಕರು ದೆಹಲಿಗೆ ಹೋಗಿ ಬಂದಿದ್ದಾರೆ. ಇದರಲ್ಲಿ ಬಂಡಾಯ ಇಲ್ಲ’ ಎಂದರು.</p>.<p>‘ಪಕ್ಷದಲ್ಲಿರುವ ಸಣ್ಣ ಗೊಂದಲಗಳನ್ನು ನಾಯಕರು ಬಗೆಹರಿಸಿಕೊಳ್ಳಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು ಯಾರಾಗಬೇಕು ಎಂದು ಹೈಕಮಾಂಡ್ ತೀರ್ಮಾನಿಸುತ್ತದೆ. ಸದ್ಯ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದೇವೆ. ಮುಡಾ, ವಾಲ್ಮೀಕಿ ಹಗರಣಗಳ ವಿರುದ್ಧ ಹೋರಾಟ ಮಾಡಿ ಸಚಿವರು, ಶಾಸಕರನ್ನು ಜೈಲಿಗೆ ಕಳುಹಿಸಿದ್ದೇವೆ’ ಎಂದರು.</p>.<p><strong>ಕಾಂಗ್ರೆಸ್ನಲ್ಲಿ ಒಗ್ಗಟ್ಟು ಇಲ್ಲ:</strong> ‘ಎರಡೂವರೆ ವರ್ಷ ಒಗ್ಗಟ್ಟು ಪ್ರದರ್ಶಿಸದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಈಗ ಒಗ್ಗಟ್ಟಿನ ಜಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಒಡೆದ ಹಾಗೂ ಸುಡುವ ಮನೆಯಾಗಿದೆ. ಕಾಂಗ್ರೆಸ್ ಎಂಬ ಒಡೆದುಹೋದ ಕನ್ನಡಿ ಮರು ಜೋಡಿಸಲು ಸಾಧ್ಯವಿಲ್ಲ’ ಎಂದರು.</p>.<p>‘ಕಾಂಗ್ರೆಸ್ಲ್ಲಿ ಹೈಕಮಾಂಡ್ ಸತ್ತು ಹೋಗಿದೆ. ರಾಹುಲ್ ಗಾಂಧಿ ಮೆದುಳಿಗೂ ನಾಲಗೆಗೂ ಸಂಬಂಧ ಇಲ್ಲದಂತೆ ಮಾತನಾಡುತ್ತಾರೆ. ಹಿಂದೂಗಳನ್ನು ಹಿಂಸೆ ಎನ್ನುತ್ತಾರೆ, ರಾಹುಲ್ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು’ ಎಂದು ಟೀಕಿಸಿದರು.</p>.<p>‘ಡಿ.ಕೆ.ಶಿವಕುಮಾರ್ ಒಂದೇ ಪಕ್ಷದಲ್ಲಿದ್ದು, ಸಿದ್ಧಾಂತಗಳಿಗೆ ಬದ್ಧರಾಗಿದ್ದಾರೆ. ಆದರೆ, ಪಕ್ಷಾಂತರ ರಾಜಕಾರಣ ಮಾಡಿರುವ ಸಿದ್ದರಾಮಯ್ಯ ಸಿದ್ಧಾಂತಗಳಿಗೆ ಬದ್ಧರಾಗಿಲ್ಲ’ ಎಂದು ವಾಗ್ದಾಳಿ ನಡೆಸಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಿರಂಜನ್ ಕುಮಾರ್, ಮಾಜಿ ಶಾಸಕ ಎಸ್.ಬಾಲರಾಜು, ಪ್ರೊ.ಮಲ್ಲಿಕಾರ್ಜುನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>