<p><strong>ಚಾಮರಾಜನಗರ: </strong>ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕರಿ ಚಿರತೆ ಮತ್ತೆ ಕಂಡು ಬಂದಿದೆ.</p>.<p>ಈ ಹಿಂದೆ 2010ರ ಆಗಸ್ಟ್ನಲ್ಲಿ ಬಿಆರ್ಟಿಯ ಬೈಲೂರು ವಲಯದಲ್ಲಿ ಕಪ್ಪು ಚಿರತೆ ಕ್ಯಾಮೆರಾ ಟ್ರ್ಯಾಪ್ನಲ್ಲಿ ಸೆರೆಯಾಗಿತ್ತು. ಅದೇ ವರ್ಷದ ಡಿಸೆಂಬರ್ನಲ್ಲಿ ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯದಲ್ಲೂ ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್ನಲ್ಲಿ ಕರಿ ಚಿರತೆ ಕಂಡು ಬಂದಿತ್ತು.</p>.<p>ಈಗ ಹೊಳೆಮತ್ತಿ ನೇಚರ್ ಫೌಂಡೇಶನ್ ಡಾ.ಸಂಜಯ್ ಗುಬ್ಬಿ ಮತ್ತು ತಂಡದವರು ಬಿಳಿಗಿರಿರಂಗನಬೆಟ್ಟದಲ್ಲಿ ಚಿರತೆಗಳಿಗೆ ಸಂಬಂಧಿತ ಅಧ್ಯಯನಕ್ಕಾಗಿ ನಡೆಸಿದ್ದ ಕ್ಯಾಮರಾ ಟ್ರ್ಯಾಪ್ನಲ್ಲಿ ಮತ್ತೆ ಗೋಚರಿಸಿದೆ. ಡಿಸೆಂಬರ್ 2020ರಲ್ಲಿ ಇದೇ ಗಂಡು ಚಿರತೆ ಮಲೈ ಮಹದೇಶ್ವರ ವನ್ಯಜೀವಿಧಾಮದ ಪಿ.ಜಿ.ಪಾಳ್ಯ ವಲಯದಲ್ಲಿ ಕಾಣಿಸಿಕೊಂಡಿತ್ತು. ಈ ಗಂಡು ಚಿರತೆಗೆ ಆರು ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.</p>.<p class="Subhead"><strong>ಕಾರಿಡಾರ್ ಸಂರಕ್ಷಣೆ ಅಗತ್ಯ:</strong> ‘ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮಗಳ ನಡುವೆ 1.6 ಕಿ.ಮೀ ಅಗಲದ ವನ್ಯಜೀವಿ ಕಾರಿಡಾರ್ ಇದೆ. ಈ ಎರಡೂ ವನ್ಯಧಾಮಗಳಲ್ಲಿ ಈ ಚಿರತೆಯ ಚಲನವಲನ ದಾಖಲಾಗಿರುವುದು ಈ ಕಾರಿಡಾರ್ನ ಮಹತ್ವವನ್ನು ಎತ್ತಿ ತೋರಿಸುತ್ತದೆ. ಈ ಕಾರಿಡಾರ್ನ ಸಂರಕ್ಷಿಸುವ ಅಗತ್ಯವಿದೆ. ಈ ಕಿರಿದಾದ ಕಾರಿಡಾರ್ ಮೂಲಕ ಕೊಳ್ಳೇಗಾಲ-ಹಾಸನೂರು ರಸ್ತೆ (ರಾಜ್ಯ ಹೆದ್ದಾರಿ-38) ಹಾದು ಹೋಗುತ್ತದೆ ಮತ್ತು ತಸ್ತೆಯಲ್ಲಿನ ವಾಹನ ದಟ್ಟಣೆ ವನ್ಯಜೀವಿಗಳ ಓಡಾಟಕ್ಕೆ ಅಡ್ಡಿಯಾಗಿದೆ’ ಎಂದು ಹೊಳೆಮತ್ತಿ ನೇಚರ್ ಫೌಂಡೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕರಿ ಚಿರತೆ ಮತ್ತೆ ಕಂಡು ಬಂದಿದೆ.</p>.<p>ಈ ಹಿಂದೆ 2010ರ ಆಗಸ್ಟ್ನಲ್ಲಿ ಬಿಆರ್ಟಿಯ ಬೈಲೂರು ವಲಯದಲ್ಲಿ ಕಪ್ಪು ಚಿರತೆ ಕ್ಯಾಮೆರಾ ಟ್ರ್ಯಾಪ್ನಲ್ಲಿ ಸೆರೆಯಾಗಿತ್ತು. ಅದೇ ವರ್ಷದ ಡಿಸೆಂಬರ್ನಲ್ಲಿ ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯದಲ್ಲೂ ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್ನಲ್ಲಿ ಕರಿ ಚಿರತೆ ಕಂಡು ಬಂದಿತ್ತು.</p>.<p>ಈಗ ಹೊಳೆಮತ್ತಿ ನೇಚರ್ ಫೌಂಡೇಶನ್ ಡಾ.ಸಂಜಯ್ ಗುಬ್ಬಿ ಮತ್ತು ತಂಡದವರು ಬಿಳಿಗಿರಿರಂಗನಬೆಟ್ಟದಲ್ಲಿ ಚಿರತೆಗಳಿಗೆ ಸಂಬಂಧಿತ ಅಧ್ಯಯನಕ್ಕಾಗಿ ನಡೆಸಿದ್ದ ಕ್ಯಾಮರಾ ಟ್ರ್ಯಾಪ್ನಲ್ಲಿ ಮತ್ತೆ ಗೋಚರಿಸಿದೆ. ಡಿಸೆಂಬರ್ 2020ರಲ್ಲಿ ಇದೇ ಗಂಡು ಚಿರತೆ ಮಲೈ ಮಹದೇಶ್ವರ ವನ್ಯಜೀವಿಧಾಮದ ಪಿ.ಜಿ.ಪಾಳ್ಯ ವಲಯದಲ್ಲಿ ಕಾಣಿಸಿಕೊಂಡಿತ್ತು. ಈ ಗಂಡು ಚಿರತೆಗೆ ಆರು ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.</p>.<p class="Subhead"><strong>ಕಾರಿಡಾರ್ ಸಂರಕ್ಷಣೆ ಅಗತ್ಯ:</strong> ‘ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮಗಳ ನಡುವೆ 1.6 ಕಿ.ಮೀ ಅಗಲದ ವನ್ಯಜೀವಿ ಕಾರಿಡಾರ್ ಇದೆ. ಈ ಎರಡೂ ವನ್ಯಧಾಮಗಳಲ್ಲಿ ಈ ಚಿರತೆಯ ಚಲನವಲನ ದಾಖಲಾಗಿರುವುದು ಈ ಕಾರಿಡಾರ್ನ ಮಹತ್ವವನ್ನು ಎತ್ತಿ ತೋರಿಸುತ್ತದೆ. ಈ ಕಾರಿಡಾರ್ನ ಸಂರಕ್ಷಿಸುವ ಅಗತ್ಯವಿದೆ. ಈ ಕಿರಿದಾದ ಕಾರಿಡಾರ್ ಮೂಲಕ ಕೊಳ್ಳೇಗಾಲ-ಹಾಸನೂರು ರಸ್ತೆ (ರಾಜ್ಯ ಹೆದ್ದಾರಿ-38) ಹಾದು ಹೋಗುತ್ತದೆ ಮತ್ತು ತಸ್ತೆಯಲ್ಲಿನ ವಾಹನ ದಟ್ಟಣೆ ವನ್ಯಜೀವಿಗಳ ಓಡಾಟಕ್ಕೆ ಅಡ್ಡಿಯಾಗಿದೆ’ ಎಂದು ಹೊಳೆಮತ್ತಿ ನೇಚರ್ ಫೌಂಡೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>