ಮಹಾಸಭಾದ ರಾಜ್ಯ ಉಪಾಧ್ಯಕ್ಷ ಮಹೇಂದ್ರ ಮಾಂಕಾಳೆ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅಂಬೇಡ್ಕರ್ ಅವರ ಸಂದೇಶವನ್ನು ಜನರಿಗೆ ಪ್ರಚುರ ಪಡಿಸುವುದಕ್ಕಾಗಿ ಮೈಸೂರಿನ ಲಲಿತ ಮಹಲ್ ಅರಮನೆ ಮೈದಾನದಲ್ಲಿ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9.30ಕ್ಕೆ ಮೈಸೂರು ಪುರಭವನದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ, ಅಂಬೇಡ್ಕರ್ ಅವರ ಮೊಮ್ಮಗ, ಭಾರತೀಯ ಬೌದ್ದ ಮಹಾಸಭಾ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಮಾಲಾರ್ಪಣೆ ಮಾಡಲಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯದ ಸಮತಾ ಸೈನಿಕ ದಳದವರಿಂದ ಪಥ ಸಂಚಲನ ನಡೆಯಲಿದೆ’ ಎಂದರು.