<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ)</strong>: ತಾಲ್ಲೂಕಿನ ಶಿವನಸಮುದ್ರದ ದರ್ಗಾ ಹಿಂಭಾಗದ ಕಾವೇರಿ ನದಿಯಲ್ಲಿ ಮಂಗಳವಾರ ಈಜಲು ಹೋಗಿ ಮೃತಪಟ್ಟ ವಿದ್ಯಾರ್ಥಿ ನಂದನ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಮಗನ ಸಾವು ಸಹಜವಲ್ಲ. ಚತುರ್, ತುಷಾರ್, ಪವನ್, ಪ್ರಪುಲ್ಲ, ತನೈ, ರಜತ್ ಸೇರಿ ಭರಚುಕ್ಕಿಗೆ ಕರೆದೊಯ್ದು ರ್ಯಾಗಿಂಗ್ ಮಾಡಿದ್ದಾರೆ. ಬಟ್ಟೆ ಬಿಚ್ಚಿಸಿ ನೀರಿನಲ್ಲಿ ಕೊಲೆ ಮಾಡಿದ್ದಾರೆ’ ಎಂದು ನಂದನ್ ತಂದೆ ಡಾ.ಶಿವಶಂಕರ್ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p><strong>ವಿವರ:</strong> ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ದಯಾನಂದ್ ಸಾಗರ ಮೆಡಿಕಲ್ ಕಾಲೇಜಿನ 7 ವಿದ್ಯಾರ್ಥಿಗಳು ಭರಚುಕ್ಕಿ ಸಹಿತ ತಾಲ್ಲೂಕಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜುವಾಗ ನೀರಿನ ಒತ್ತಡಕ್ಕೆ ಸಿಲುಕಿದ್ದರು. ಆರು ವಿದ್ಯಾರ್ಥಿಗಳು ಸುರಕ್ಷಿತವಾಗಿ ದಡ ಸೇರಿದರೆ, ನಂದನ್ ಕಣ್ಮರೆಯಾಗಿದ್ದರು.</p>.<p>ಬುಧವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ)</strong>: ತಾಲ್ಲೂಕಿನ ಶಿವನಸಮುದ್ರದ ದರ್ಗಾ ಹಿಂಭಾಗದ ಕಾವೇರಿ ನದಿಯಲ್ಲಿ ಮಂಗಳವಾರ ಈಜಲು ಹೋಗಿ ಮೃತಪಟ್ಟ ವಿದ್ಯಾರ್ಥಿ ನಂದನ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಮಗನ ಸಾವು ಸಹಜವಲ್ಲ. ಚತುರ್, ತುಷಾರ್, ಪವನ್, ಪ್ರಪುಲ್ಲ, ತನೈ, ರಜತ್ ಸೇರಿ ಭರಚುಕ್ಕಿಗೆ ಕರೆದೊಯ್ದು ರ್ಯಾಗಿಂಗ್ ಮಾಡಿದ್ದಾರೆ. ಬಟ್ಟೆ ಬಿಚ್ಚಿಸಿ ನೀರಿನಲ್ಲಿ ಕೊಲೆ ಮಾಡಿದ್ದಾರೆ’ ಎಂದು ನಂದನ್ ತಂದೆ ಡಾ.ಶಿವಶಂಕರ್ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p><strong>ವಿವರ:</strong> ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ದಯಾನಂದ್ ಸಾಗರ ಮೆಡಿಕಲ್ ಕಾಲೇಜಿನ 7 ವಿದ್ಯಾರ್ಥಿಗಳು ಭರಚುಕ್ಕಿ ಸಹಿತ ತಾಲ್ಲೂಕಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜುವಾಗ ನೀರಿನ ಒತ್ತಡಕ್ಕೆ ಸಿಲುಕಿದ್ದರು. ಆರು ವಿದ್ಯಾರ್ಥಿಗಳು ಸುರಕ್ಷಿತವಾಗಿ ದಡ ಸೇರಿದರೆ, ನಂದನ್ ಕಣ್ಮರೆಯಾಗಿದ್ದರು.</p>.<p>ಬುಧವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>