<p><strong>ಚಾಮರಾಜನಗರ:</strong> ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿರ್ವಾಣ ದಿನವನ್ನು ಜಿಲ್ಲೆಯಾದ್ಯಂತ ಮಂಗಳವಾರ ಆಚರಿಸಲಾಯಿತು.</p>.<p>ಜಿಲ್ಲಾಡಳಿತ, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳು, ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಮೊಂಬತ್ತಿ ಹಿಡಿದು ಗೌರವ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ ಅಂಬೇಡ್ಕರ್ ಸ್ಮರಣಾರ್ಥ ಮೊಂಬತ್ತಿ ಮೆರವಣಿಗೆಯೂ ನಡೆಯಿತು.</p>.<p>ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪ್ರಧಾನ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಮುಖಂಡರು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿದರು.</p>.<p>ನಂತರ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ ವೇದಿಕೆ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ‘ನಮ್ಮ ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅಪಾರವಾಗಿದ್ದು, ಅವರ ಉದಾತ್ತ ಚಿಂತನೆಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>‘ಮಾನವ ಜನಾಂಗದ ಏಳಿಗೆಗಾಗಿ ತಮ್ಮ ಜೀವನವನ್ನು ಅವರು ಮುಡುಪಾಗಿಟ್ಟಿದ್ದರು. ಅವರ ಆದರ್ಶ ಚಿಂತನೆಗಳನ್ನು ಮರೆಯಬಾರದು. ದೇಶ ಸಮಾಜದ ಸುಧಾರಣೆ ಹಾಗೂ ಒಳ್ಳೆಯ ದಾರಿಯಲ್ಲಿ ನಡೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>‘ಯಾರೂ ಬಲಹೀನರಾಗಬಾರದು. ಪ್ರತಿಯೊಬ್ಬರಲ್ಲೂ ತಮ್ಮದೇ ಆದ ಶಕ್ತಿ ಇರುತ್ತದೆ. ನಮ್ಮಲ್ಲಿ ನಾವೇ ಶಕ್ತಿ ತುಂಬುವಂತಹ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಪ್ರತಿಪಾದಿಸಿದ ವಿಚಾರ ಆಲೋಚನೆ ಆದರ್ಶಗಳನ್ನು ಪಾಲಿಸಬೇಕು. ಇದಕ್ಕಾಗಿ ಪ್ರತಿಯೊಬ್ಬರು ಶಪಥ ಮಾಡಬೇಕು’ ಎಂದರು.</p>.<p>‘ಅಂಬೇಡ್ಕರ್ ಅವರ ಮಹತ್ತರ ಧ್ಯೇಯೊದ್ದೇಶಗಳನ್ನು ಸ್ಮರಿಸಬೇಕು. ಶಾಂತಿ, ಆರೋಗ್ಯಯುತ ಸಮಾಜ ನಿರ್ಮಾಣದ ಗುರಿ ಹೊಂದಬೇಕು. ಅರ್ಥಪೂರ್ಣ ಬದುಕು ಹಾಗೂ ಸರಿಯಾದ ದಾರಿಯಲ್ಲಿ ಮುನ್ನಡೆಯಲು ಅಂಬೇಡ್ಕರ್ ಅವರ ಮಾದರಿ ಅನುಸರಿಸಬೇಕು’ ಎಂದು ರಮೇಶ್ ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕಲಾವಿದರಾದ ಸಿ.ಎಂ.ನರಸಿಂಹಮೂರ್ತಿ, ಮಹೇಶ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತ ಗೀತೆಗಳನ್ನು ಹಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಇದ್ದರು.</p>.<p class="Briefhead"><strong>ಎಸ್ಪಿ ವಿರುದ್ಧ ಮುಖಂಡರ ಅಸಮಾಧಾನ</strong></p>.<p>ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ವೇದಿಕೆ ಕಾರ್ಯಕ್ರಮಕ್ಕೆ ಬಾರದೆ ಕಚೇರಿಗೆ ತೆರಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅವರ ನಡೆಗೆ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.</p>.<p>ಅಂಬೇಡ್ಕರ್ ಅವರ ಮೇಲೆ ಎಸ್ಪಿ ಅವರಿಗೆ ಗೌರವವಿಲ್ಲವೇ? ಬರೀ ಮಾಲಾರ್ಪಣೆ ಮಾಡಿ ತೆರಳಿದರೇ ಸಾಕೇ? ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಷ್ಪನಮನ ಸಲ್ಲಿಸಿ ಹೋಗಬಹುದಿತ್ತಲ್ಲವೇ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೇ ಕಾರ್ಯಕ್ರಮಕ್ಕೆ ಎಸ್ಪಿಯವರು ಬರಲೇಬೇಕು ಎಂದು ಆಗ್ರಹಿಸಿದರು.</p>.<p>ಆ ನಂತರ, ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಬಂದರು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಮುಖಂಡರಲ್ಲಿ ಕ್ಷಮೆ ಕೋರಿದ ಅವರು, ಸ್ಪಷ್ಟನೆಯನ್ನೂ ನೀಡಿದರು.</p>.<p>‘ಅಪರಾಧ ಪ್ರಕರಣಗಳ ಕುರಿತ ಸಭೆ ಹಾಗೂ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ ನೀಡುತ್ತಿರುವುದರಿಂದ ಪೊಲೀಸ್ ಅಧಿಕಾರಿಗಳ ಜತೆ ಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ’ ಎಂದು ಹೇಳಿದರು.</p>.<p>‘ಅಂಬೇಡ್ಕರ್ ಅವರು ಸರ್ವ ಜನರ ಸಮಾನತೆಗೆ ಶ್ರಮಿಸಿದವರು. ಮಾನವೀಯ ಚಿಂತನೆಗಳನ್ನು ಹೊಂದಿದ್ದ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿರ್ವಾಣ ದಿನವನ್ನು ಜಿಲ್ಲೆಯಾದ್ಯಂತ ಮಂಗಳವಾರ ಆಚರಿಸಲಾಯಿತು.</p>.<p>ಜಿಲ್ಲಾಡಳಿತ, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳು, ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಮೊಂಬತ್ತಿ ಹಿಡಿದು ಗೌರವ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ ಅಂಬೇಡ್ಕರ್ ಸ್ಮರಣಾರ್ಥ ಮೊಂಬತ್ತಿ ಮೆರವಣಿಗೆಯೂ ನಡೆಯಿತು.</p>.<p>ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪ್ರಧಾನ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಮುಖಂಡರು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿದರು.</p>.<p>ನಂತರ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ ವೇದಿಕೆ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ‘ನಮ್ಮ ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅಪಾರವಾಗಿದ್ದು, ಅವರ ಉದಾತ್ತ ಚಿಂತನೆಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>‘ಮಾನವ ಜನಾಂಗದ ಏಳಿಗೆಗಾಗಿ ತಮ್ಮ ಜೀವನವನ್ನು ಅವರು ಮುಡುಪಾಗಿಟ್ಟಿದ್ದರು. ಅವರ ಆದರ್ಶ ಚಿಂತನೆಗಳನ್ನು ಮರೆಯಬಾರದು. ದೇಶ ಸಮಾಜದ ಸುಧಾರಣೆ ಹಾಗೂ ಒಳ್ಳೆಯ ದಾರಿಯಲ್ಲಿ ನಡೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>‘ಯಾರೂ ಬಲಹೀನರಾಗಬಾರದು. ಪ್ರತಿಯೊಬ್ಬರಲ್ಲೂ ತಮ್ಮದೇ ಆದ ಶಕ್ತಿ ಇರುತ್ತದೆ. ನಮ್ಮಲ್ಲಿ ನಾವೇ ಶಕ್ತಿ ತುಂಬುವಂತಹ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಪ್ರತಿಪಾದಿಸಿದ ವಿಚಾರ ಆಲೋಚನೆ ಆದರ್ಶಗಳನ್ನು ಪಾಲಿಸಬೇಕು. ಇದಕ್ಕಾಗಿ ಪ್ರತಿಯೊಬ್ಬರು ಶಪಥ ಮಾಡಬೇಕು’ ಎಂದರು.</p>.<p>‘ಅಂಬೇಡ್ಕರ್ ಅವರ ಮಹತ್ತರ ಧ್ಯೇಯೊದ್ದೇಶಗಳನ್ನು ಸ್ಮರಿಸಬೇಕು. ಶಾಂತಿ, ಆರೋಗ್ಯಯುತ ಸಮಾಜ ನಿರ್ಮಾಣದ ಗುರಿ ಹೊಂದಬೇಕು. ಅರ್ಥಪೂರ್ಣ ಬದುಕು ಹಾಗೂ ಸರಿಯಾದ ದಾರಿಯಲ್ಲಿ ಮುನ್ನಡೆಯಲು ಅಂಬೇಡ್ಕರ್ ಅವರ ಮಾದರಿ ಅನುಸರಿಸಬೇಕು’ ಎಂದು ರಮೇಶ್ ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕಲಾವಿದರಾದ ಸಿ.ಎಂ.ನರಸಿಂಹಮೂರ್ತಿ, ಮಹೇಶ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತ ಗೀತೆಗಳನ್ನು ಹಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಇದ್ದರು.</p>.<p class="Briefhead"><strong>ಎಸ್ಪಿ ವಿರುದ್ಧ ಮುಖಂಡರ ಅಸಮಾಧಾನ</strong></p>.<p>ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ವೇದಿಕೆ ಕಾರ್ಯಕ್ರಮಕ್ಕೆ ಬಾರದೆ ಕಚೇರಿಗೆ ತೆರಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅವರ ನಡೆಗೆ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.</p>.<p>ಅಂಬೇಡ್ಕರ್ ಅವರ ಮೇಲೆ ಎಸ್ಪಿ ಅವರಿಗೆ ಗೌರವವಿಲ್ಲವೇ? ಬರೀ ಮಾಲಾರ್ಪಣೆ ಮಾಡಿ ತೆರಳಿದರೇ ಸಾಕೇ? ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಷ್ಪನಮನ ಸಲ್ಲಿಸಿ ಹೋಗಬಹುದಿತ್ತಲ್ಲವೇ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೇ ಕಾರ್ಯಕ್ರಮಕ್ಕೆ ಎಸ್ಪಿಯವರು ಬರಲೇಬೇಕು ಎಂದು ಆಗ್ರಹಿಸಿದರು.</p>.<p>ಆ ನಂತರ, ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಬಂದರು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಮುಖಂಡರಲ್ಲಿ ಕ್ಷಮೆ ಕೋರಿದ ಅವರು, ಸ್ಪಷ್ಟನೆಯನ್ನೂ ನೀಡಿದರು.</p>.<p>‘ಅಪರಾಧ ಪ್ರಕರಣಗಳ ಕುರಿತ ಸಭೆ ಹಾಗೂ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ ನೀಡುತ್ತಿರುವುದರಿಂದ ಪೊಲೀಸ್ ಅಧಿಕಾರಿಗಳ ಜತೆ ಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ’ ಎಂದು ಹೇಳಿದರು.</p>.<p>‘ಅಂಬೇಡ್ಕರ್ ಅವರು ಸರ್ವ ಜನರ ಸಮಾನತೆಗೆ ಶ್ರಮಿಸಿದವರು. ಮಾನವೀಯ ಚಿಂತನೆಗಳನ್ನು ಹೊಂದಿದ್ದ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>