<p><strong>ಚಾಮರಾಜನಗರ:</strong> ತಾಲ್ಲೂಕಿನ ಅರಕಲವಾಡಿ, ವಡ್ಗಲ್ಪುರ, ಸಾಸಿವೆ ಹಳ್ಳ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಹುಲಿಯನ್ನು ಕಾಡಿಗೆ ಅಟ್ಟುವುದಕ್ಕಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ಮೂರು ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿದರು.</p>.<p>40 ಸಿಬ್ಬಂದಿ ಮೂರು ತಂಡಗಳಾಗಿ ಶುಕ್ರವಾರ ವ್ಯಾಘ್ರನಿಗಾಗಿ ಹುಡುಕಾಟ ನಡೆಸಿದರು. ಕೆ.ಗುಡಿಯ ಶಿಬಿರದ ಗಜೇಂದ್ರ, ಬಂಡೀಪುರದ ಸಾಕಾನೆಗಳಾದ ಲಕ್ಷ್ಮಿ ಹಾಗೂ ಪಾರ್ಥಸಾರಥಿಯನ್ನು ಬಳಸಿಕೊಂಡು ಶೋಧ ಕಾರ್ಯಾಚರಣೆ ನಡೆಸಲಾಯಿತು.</p>.<p>ಬೆಳಿಗ್ಗೆ ಚೆನ್ನಪ್ಪನಪುರ ವ್ಯಾಪ್ತಿಯಲ್ಲಿ ಮಧ್ಯಾಹ್ನದ ಬಳಿಕ ವಡ್ಗಲ್ಪುರದ ಬಳಿ ಸಿಬ್ಬಂದಿ ಹುಡುಕಾಟ ನಡೆಸಿದರು. ಒಂದು ವೇಳೆ ಹುಲಿ ಅವಿತು ಕುಳಿತಿದ್ದರೆ, ಅದನ್ನು ಓಡಿಸುವುದಕ್ಕಾಗಿ ಪಟಾಕಿಯನ್ನೂ ಸಿಡಿಸಿದರು. ಸಂಜೆಯವರೆಗೂ ಹುಲಿ ಕಂಡು ಬರಲಿಲ್ಲ ಎಂದು ಗೊತ್ತಾಗಿದೆ.</p>.<p>ಅರಕಲವಾಡಿ, ವಡ್ಗಲ್ಪುರ ಭಾಗದಲ್ಲಿ ಮೂರ್ನಾಲ್ಕು ದಿನಗಳಿಂದ ಹುಲಿಯ ಹೆಜ್ಜೆ ಗುರುತು ಕಂಡು ಬರುತ್ತಿದೆ. ಹುಲಿ ಸೆರೆಗೆ ಇಲಾಖೆಯಿಂದ ಅನುಮತಿ ಬೇಕಾಗಿರುವುದರಿಂದ ಸದ್ಯ ಅಧಿಕಾರಿಗಳು ಅದನ್ನು ಕಾಡಿಗೆ ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ.</p>.<p>ಎರಡು ತಿಂಗಳ ಹಿಂದೆ ಸಾಸಿವೆ ಹಳ್ಳದ ಬಳಿ ಹುಲಿ ಕಂಡು ಬಂದಿತ್ತು. ಅದೇ ಹುಲಿಯೇ ಸುತ್ತಮುತ್ತಲಿನ ಪ್ರದೇಶದಲ್ಲಿ ಸುತ್ತಾಡುತ್ತಿರಬಹುದು ಎಂದು ಹೇಳಲಾಗುತ್ತಿದೆ.</p>.<p>‘ಕಾರ್ಯಾಚರಣೆ ಒಂದು ದಿನಕ್ಕೆ ನಿಲ್ಲುವುದಿಲ್ಲ. ಇನ್ನೂ ಮುಂದುವರಿಯಲಿದೆ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ಅರಕಲವಾಡಿ, ವಡ್ಗಲ್ಪುರ, ಸಾಸಿವೆ ಹಳ್ಳ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಹುಲಿಯನ್ನು ಕಾಡಿಗೆ ಅಟ್ಟುವುದಕ್ಕಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ಮೂರು ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿದರು.</p>.<p>40 ಸಿಬ್ಬಂದಿ ಮೂರು ತಂಡಗಳಾಗಿ ಶುಕ್ರವಾರ ವ್ಯಾಘ್ರನಿಗಾಗಿ ಹುಡುಕಾಟ ನಡೆಸಿದರು. ಕೆ.ಗುಡಿಯ ಶಿಬಿರದ ಗಜೇಂದ್ರ, ಬಂಡೀಪುರದ ಸಾಕಾನೆಗಳಾದ ಲಕ್ಷ್ಮಿ ಹಾಗೂ ಪಾರ್ಥಸಾರಥಿಯನ್ನು ಬಳಸಿಕೊಂಡು ಶೋಧ ಕಾರ್ಯಾಚರಣೆ ನಡೆಸಲಾಯಿತು.</p>.<p>ಬೆಳಿಗ್ಗೆ ಚೆನ್ನಪ್ಪನಪುರ ವ್ಯಾಪ್ತಿಯಲ್ಲಿ ಮಧ್ಯಾಹ್ನದ ಬಳಿಕ ವಡ್ಗಲ್ಪುರದ ಬಳಿ ಸಿಬ್ಬಂದಿ ಹುಡುಕಾಟ ನಡೆಸಿದರು. ಒಂದು ವೇಳೆ ಹುಲಿ ಅವಿತು ಕುಳಿತಿದ್ದರೆ, ಅದನ್ನು ಓಡಿಸುವುದಕ್ಕಾಗಿ ಪಟಾಕಿಯನ್ನೂ ಸಿಡಿಸಿದರು. ಸಂಜೆಯವರೆಗೂ ಹುಲಿ ಕಂಡು ಬರಲಿಲ್ಲ ಎಂದು ಗೊತ್ತಾಗಿದೆ.</p>.<p>ಅರಕಲವಾಡಿ, ವಡ್ಗಲ್ಪುರ ಭಾಗದಲ್ಲಿ ಮೂರ್ನಾಲ್ಕು ದಿನಗಳಿಂದ ಹುಲಿಯ ಹೆಜ್ಜೆ ಗುರುತು ಕಂಡು ಬರುತ್ತಿದೆ. ಹುಲಿ ಸೆರೆಗೆ ಇಲಾಖೆಯಿಂದ ಅನುಮತಿ ಬೇಕಾಗಿರುವುದರಿಂದ ಸದ್ಯ ಅಧಿಕಾರಿಗಳು ಅದನ್ನು ಕಾಡಿಗೆ ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ.</p>.<p>ಎರಡು ತಿಂಗಳ ಹಿಂದೆ ಸಾಸಿವೆ ಹಳ್ಳದ ಬಳಿ ಹುಲಿ ಕಂಡು ಬಂದಿತ್ತು. ಅದೇ ಹುಲಿಯೇ ಸುತ್ತಮುತ್ತಲಿನ ಪ್ರದೇಶದಲ್ಲಿ ಸುತ್ತಾಡುತ್ತಿರಬಹುದು ಎಂದು ಹೇಳಲಾಗುತ್ತಿದೆ.</p>.<p>‘ಕಾರ್ಯಾಚರಣೆ ಒಂದು ದಿನಕ್ಕೆ ನಿಲ್ಲುವುದಿಲ್ಲ. ಇನ್ನೂ ಮುಂದುವರಿಯಲಿದೆ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>