<p><strong>ಚಾಮರಾಜನಗರ:</strong> ಉಪ್ಪಾರ ಸಮುದಾಯದ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಘಟನೆ ಸಂಬಂಧ, ತಾಲ್ಲೂಕಿನ ಲಿಂಗರಾಜಪುರಕ್ಕೆ ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಶುಕ್ರವಾರ ಭೇಟಿ ನೀಡಿ, ಸಂತ್ರಸ್ತರು ಹಾಗೂ 16 ಗ್ರಾಮಗಳ ಕಟ್ಟೆಗಡಿ ಯಜಮಾನರ ಜೊತೆಗೆ ಸಭೆ ನಡೆಸಿದರು.</p>.<p>‘ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ಧತಿ ಆಚರಣೆ ಕಾನೂನು ಪ್ರಕರಣ ಶಿಕ್ಷಾರ್ಹ ಅಪರಾಧ. ಇಂತಹ ಘಟನೆಗಳು ಮುಂದೆ ನಡೆಯಬಾರದು’ ಎಂದು 16 ಗ್ರಾಮಗಳ ಮುಖಂಡರಿಗೆ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಎಚ್ಚರಿಕೆ ನೀಡಿದರು.</p>.<p>‘ಮೂರು ತಿಂಗಳ ಗಡುವು ನೀಡಿದ ಅವರು, ಗ್ರಾಮಗಳ ಮುಖಂಡರು ಮನಸ್ಥಿತಿ ಬದಲಾಯಿಸಿಕೊಳ್ಳದಿದ್ದರೆ, ಬಹಿಷ್ಕಾರ ಆಚರಿಸುವುದು ಕಂಡುಬಂದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ’ ಎಂದರು.</p>.<p>‘ಸಮಾಜದಲ್ಲಿ ಎಲ್ಲರೂ ಸಮಾನರು. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅಧಿಕಾರವಿಲ್ಲ. ಸಂವಿಧಾನಕ್ಕೆ ವಿರುದ್ಧವಾಗಿ ಬಹಿಷ್ಕಾರ ಹಾಕುವುದು, ದಂಡ ವಿಧಿಸುವುದಕ್ಕೆ ಅವಕಾಶವಿಲ್ಲ. ಕಾನೂನಿನಡಿ ಎಲ್ಲರೂ ಬದುಕಬೇಕು’ ಎಂದರು.</p>.<p>‘ಬಹಿಷ್ಕಾರದಂತಹ ಘಟನೆಗಳು ಮರುಕಳಿಸುವುದಿಲ್ಲ, ಅನಿಷ್ಟ ಪದ್ಧತಿ ಆಚರಣೆಗೆ ಮುಂದಾಗುವುದಿಲ್ಲ ಎಂದು ಮುಖಂಡರು ಲಿಖಿತ ಹೇಳಿಕೆ ನೀಡಿದರು’ ಎಂದು ಸಂತ್ರಸ್ತರು ತಿಳಿಸಿದರು.</p>.<p>ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್, ಉಪವಿಭಾಗಾಧಿಕಾರಿ ಮಹೇಶ್, ವಕೀಲ ಮಹಾಲಿಂಗ ಗಿರ್ಗಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಉಪ್ಪಾರ ಸಮುದಾಯದ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಘಟನೆ ಸಂಬಂಧ, ತಾಲ್ಲೂಕಿನ ಲಿಂಗರಾಜಪುರಕ್ಕೆ ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಶುಕ್ರವಾರ ಭೇಟಿ ನೀಡಿ, ಸಂತ್ರಸ್ತರು ಹಾಗೂ 16 ಗ್ರಾಮಗಳ ಕಟ್ಟೆಗಡಿ ಯಜಮಾನರ ಜೊತೆಗೆ ಸಭೆ ನಡೆಸಿದರು.</p>.<p>‘ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಠ ಪದ್ಧತಿ ಆಚರಣೆ ಕಾನೂನು ಪ್ರಕರಣ ಶಿಕ್ಷಾರ್ಹ ಅಪರಾಧ. ಇಂತಹ ಘಟನೆಗಳು ಮುಂದೆ ನಡೆಯಬಾರದು’ ಎಂದು 16 ಗ್ರಾಮಗಳ ಮುಖಂಡರಿಗೆ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಎಚ್ಚರಿಕೆ ನೀಡಿದರು.</p>.<p>‘ಮೂರು ತಿಂಗಳ ಗಡುವು ನೀಡಿದ ಅವರು, ಗ್ರಾಮಗಳ ಮುಖಂಡರು ಮನಸ್ಥಿತಿ ಬದಲಾಯಿಸಿಕೊಳ್ಳದಿದ್ದರೆ, ಬಹಿಷ್ಕಾರ ಆಚರಿಸುವುದು ಕಂಡುಬಂದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ’ ಎಂದರು.</p>.<p>‘ಸಮಾಜದಲ್ಲಿ ಎಲ್ಲರೂ ಸಮಾನರು. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅಧಿಕಾರವಿಲ್ಲ. ಸಂವಿಧಾನಕ್ಕೆ ವಿರುದ್ಧವಾಗಿ ಬಹಿಷ್ಕಾರ ಹಾಕುವುದು, ದಂಡ ವಿಧಿಸುವುದಕ್ಕೆ ಅವಕಾಶವಿಲ್ಲ. ಕಾನೂನಿನಡಿ ಎಲ್ಲರೂ ಬದುಕಬೇಕು’ ಎಂದರು.</p>.<p>‘ಬಹಿಷ್ಕಾರದಂತಹ ಘಟನೆಗಳು ಮರುಕಳಿಸುವುದಿಲ್ಲ, ಅನಿಷ್ಟ ಪದ್ಧತಿ ಆಚರಣೆಗೆ ಮುಂದಾಗುವುದಿಲ್ಲ ಎಂದು ಮುಖಂಡರು ಲಿಖಿತ ಹೇಳಿಕೆ ನೀಡಿದರು’ ಎಂದು ಸಂತ್ರಸ್ತರು ತಿಳಿಸಿದರು.</p>.<p>ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್, ಉಪವಿಭಾಗಾಧಿಕಾರಿ ಮಹೇಶ್, ವಕೀಲ ಮಹಾಲಿಂಗ ಗಿರ್ಗಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>