ಮೈಸೂರು ವಲಯ, ವಿಭಾಗ, ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಗಳನ್ನು ಪುನರ್ರಚಿಸಲು ಗುರುವಾರ (ಸೆ.5) ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಪುರಭವನದಲ್ಲಿ ಪಕ್ಷದ ಸಭೆ ಕರೆಯಲಾಗಿದೆ. ಕರ್ನಾಟಕದ ಮುಖ್ಯ ಸಂಯೋಜಕ ಎಂ.ಎಲ್.ತೋಮರ್, ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಮತ್ತು ರಾಜ್ಯ ಘಟಕದ ನೂತನ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ.