‘ಹೊಯ್ಸಳ ದೊರೆ ವಿಷ್ಣುವರ್ಧನ ಈ ದೇವಸ್ಥಾನ ನಿರ್ಮಿಸಿದ್ದ ಎಂದು ಹೇಳಲಾಗುತ್ತಿದೆ. ವಿಜಯನಾರಾಯಣ ಸ್ವಾಮಿ ದೇವಾಲಯ ತಾಲ್ಲೂಕಿನ ಮುಕುಟಪ್ರಾಯ. ಇಂತಹ ಪರಂಪರೆ ಹೊಂದಿರುವ ದೇವಸ್ಥಾನಕ್ಕೆ ಚ್ಯುತಿ ಬರದಂತೆ ಸಂರಕ್ಷಣೆ ಮಾಡಬೇಕಾದದ್ದು ಎಲ್ಲರ ಕರ್ತವ್ಯ. ಆದರೆ ಪುರಸಭೆಯ ಅಧಿಕಾರಿಗಳು ಶಾಮೀಲಾಗಿಯೋ ಅಥವಾ ರಾಜಕೀಯ ಪ್ರಭಾವದಿಂದಲೋ ಗೊತ್ತಿಲ್ಲ, ಸದ್ದಿಲ್ಲದೆ ದೇವಸ್ಥಾನದ ಗೋಪುರಕ್ಕಿಂತ ಎತ್ತರಕ್ಕೆ ಕಟ್ಟಡಗಳ ನಿರ್ಮಾಣವಾಗುತ್ತಿದೆ’ ಎಂದು ಪಟ್ಟಣದ ರಾಜೇಶ್ ಭಟ್ಟ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.