‘ಹಳೆಯ ಕೊಠಡಿಗಳನ್ನು ಕೆಡವಿ ಅವುಗಳ ತ್ಯಾಜ್ಯವನ್ನು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸುರಿಯಲಾಗಿದೆ. ಇದೇ ರಸ್ತೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿ ಸಫಾರಿ ಕೇಂದ್ರದಿಂದ ವಲಯ ಅರಣ್ಯಾಧಿಕಾರಿ ಕಚೇರಿವರೆಗೆ ಪ್ರತಿ ದಿನ ತಿರುಗಾಡಿದರೂ ಕಟ್ಟಡ ನಿರ್ಮಾಣದ ಬಗ್ಗೆ ಗಮನ ಹರಿಸದಿರುವುದು ಅನುಮಾನ ಹುಟ್ಟುಹಾಕುತ್ತಿದೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಪರಿಸರ ಪ್ರೇಮಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.