ಕೊಳ್ಳೇಗಾಲ: ತಾಲ್ಲೂಕಿನ ಧನಗೆರೆ ಗ್ರಾಮದ ಮುಖ್ಯರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾರೆ.
ಗ್ರಾಮದ ದ್ಯಾವರಸ ನಾಯಕ ಮೃತ ವ್ಯಕ್ತಿ. ಇವರು ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ರಸ್ತೆ ದಾಟುತ್ತಿದ್ದಾಗ ಎದುರುಗಡೆಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿದೆ.