ನಗರಸಭಾ ಸಿಆರ್ಪಿ ನರ್ಗೀಸ್ ಬಾನು ಮಾತನಾಡಿ, ‘ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಸಮರ್ಥ ನಾಯಕರನ್ನು ಆಯ್ಕೆಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಮತದಾನ ಎಂಬುದು ಎಲ್ಲರ ಸಾರ್ವಭೌಮ ಹಕ್ಕು. ಅದನ್ನು ಪ್ರತಿಯೊಬ್ಬರೂ ಚಲಾಯಿಸುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆಮಾಡುವ ಮೂಲಕ ಸದೃಢ ಭಾರತ ನಿರ್ಮಾಣ ಮಾಡುವುದು ಎಲ್ಲರ ಕರ್ತವ್ಯ’ ಎಂದರು.