ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿಯೊಬ್ಬರೂ ಹಕ್ಕು ಚಲಾಯಿಸಿ: ರಾಮದಾಸ್

ಮೇಣದಬತ್ತಿ ಮೆರವಣಿಗೆ ಮೂಲಕ ಸಾರ್ವಜನಿಕರಿಗೆ ಮತದಾನದ ಅರಿವು ಮೂಡಿಸಲು ಪ್ರಯತ್ನ
Published 7 ಏಪ್ರಿಲ್ 2024, 16:32 IST
Last Updated 7 ಏಪ್ರಿಲ್ 2024, 16:32 IST
ಅಕ್ಷರ ಗಾತ್ರ

ಚಾಮರಾಜನಗರ: ಇದೇ 21ರಂದು ನಡೆಯಲಿರುವ ಮತದಾನದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಿ ಸದೃಢ ಭಾರತ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಎಂದು ನಗರಸಭೆ ಆಯುಕ್ತ ರಾಮದಾಸ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನಗರಸಭಾ ವ್ಯಾಪ್ತಿಯ 14ನೇ ವಾರ್ಡ್‌ನಲ್ಲಿ ಶನಿವಾರ ರಾತ್ರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು. 

‘ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. 26ಕ್ಕೆ ಮೊದಲ ಹಂತ, ಮೇ 7ಕ್ಕೆ 2ನೇ ಹಂತದ ಮತದಾನ ನಡೆಯಲಿದ್ದು, ಪ್ರತಿಯೊಬ್ಬರೂ  ತಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು’ ಎಂದು ಅರಿವು ಮೂಡಿಸಿದರು.

‘‘ಚುನಾವಣಾ ಪರ್ವ ದೇಶದ ಗರ್ವ’ ಎಂಬ ಘೋಷವಾಕ್ಯದ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮತದಾನದ ಹಬ್ಬ ಇದೇ ತಿಂಗಳು 26ರಂದು ನಡೆಯಲಿದೆ. ಎಲ್ಲರೂ ತಪ್ಪದೇ ತಮ್ಮ ಬೂತ್‌ಗಳಲ್ಲಿ ಮತ ಚಲಾಯಿಸುವ ಮೂಲಕ ತಮ್ಮ ಜನಪ್ರತಿನಿಧಿಗಳನ್ನು ಆಯ್ಕೆಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಯೋಜನಾಧಿಕಾರಿ ವೆಂಕಟನಾಯಕ್ ಮಾತನಾಡಿ, ‘26ರಂದು ಮತದಾನದ ಹಬ್ಬ ಆಚರಿಸುತ್ತಿದ್ದೇವೆ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮತದಾನ ನೀಡುವ ಸಮಾನ ಹಕ್ಕನ್ನು ಕೊಟ್ಟಿದೆ. ಎಲ್ಲರೂ ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಬೇಕು’ ಎಂದು ಮನವಿ ಮಾಡಿದರು.

ನಗರಸಭಾ ಸಿಆರ್‌ಪಿ ನರ್ಗೀಸ್ ಬಾನು ಮಾತನಾಡಿ, ‘ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಸಮರ್ಥ ನಾಯಕರನ್ನು ಆಯ್ಕೆಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಮತದಾನ ಎಂಬುದು ಎಲ್ಲರ ಸಾರ್ವಭೌಮ ಹಕ್ಕು. ಅದನ್ನು ಪ್ರತಿಯೊಬ್ಬರೂ ಚಲಾಯಿಸುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆಮಾಡುವ ಮೂಲಕ ಸದೃಢ ಭಾರತ ನಿರ್ಮಾಣ ಮಾಡುವುದು ಎಲ್ಲರ ಕರ್ತವ್ಯ’ ಎಂದರು.

ಮತ್ತೊಬ್ಬ ಸಿಆರ್‌ಪಿ ಜ್ಯೋತಿ ಮಾತನಾಡಿದರು. ಸ್ತ್ರೀ ಶಕ್ತಿ ಸಂಘದ ಮಹಿಳಾ ಸದಸ್ಯರು ವಾರ್ಡ್‌ನ ಪ್ರಮುಖ ಬೀದಿಗಳಲ್ಲಿ ಮೇಣದಬತ್ತಿ ಹಿಡಿದು ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಿದರು. 

ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ರಾಮಚಂದ್ರು, ಕಂದಾಯ ಅಧಿಕಾರಿ ಶರವಣ, ಸಿಆರ್‌ಪಿ ರೂಪಾ, ಸಿಬ್ಬಂದಿ ನವೀನ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT