<p><strong>ಚಾಮರಾಜನಗರ:</strong> ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು 67ನೇ ದಿನವಾದ ಗುರುವಾರ ನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. </p>.<p>ಚಾಮರಾಜೇಶ್ಚರ ಉದ್ಯಾನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲು ಬೀಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. </p>.<p>ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೌನವಾಗಿದೆ’ ಎಂದು ದೂರಿದರು. </p>.<p>‘ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸುವವರೆಗೂ ಹೋರಾಟ ಮಾಡಲಾಗುವುದು’ ಎಂದರು.</p>.<p>ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ರಾಚಪ್ಪ, ಆಲೂರು ನಾಗೇಂದ್ರ, ತಾಂಡವಮೂರ್ತಿ, ಚಾ.ಸಿ.ಸಿದ್ದರಾಜು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು 67ನೇ ದಿನವಾದ ಗುರುವಾರ ನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. </p>.<p>ಚಾಮರಾಜೇಶ್ಚರ ಉದ್ಯಾನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲು ಬೀಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. </p>.<p>ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೌನವಾಗಿದೆ’ ಎಂದು ದೂರಿದರು. </p>.<p>‘ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸುವವರೆಗೂ ಹೋರಾಟ ಮಾಡಲಾಗುವುದು’ ಎಂದರು.</p>.<p>ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ರಾಚಪ್ಪ, ಆಲೂರು ನಾಗೇಂದ್ರ, ತಾಂಡವಮೂರ್ತಿ, ಚಾ.ಸಿ.ಸಿದ್ದರಾಜು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>