<p><strong>ಹನೂರು</strong> (ಚಾಮರಾಜನಗರ ಜಿಲ್ಲೆ): ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ 25ರಿಂದ ಆರಂಭವಾಗುವ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾವಿರಾರು ಭಕ್ತರು ಕಾವೇರಿ ನದಿ ದಾಟಿ ಮಾದಪ್ಪನ ಕ್ಷೇತ್ರದತ್ತ ಸಾಗುತ್ತಿದ್ದಾರೆ.</p>.<p>ಬೆಂಗಳೂರು, ಕನಕಪುರ, ನೆಲಮಂಗಲ, ಮಾಗಡಿ, ಸಾತನೂರು, ಹಾರೋಹಳ್ಳಿ, ರಾಮನಗರ ಸೇರಿದಂತೆ ಹಲವು ಕಡೆಗಳಿಂದ ಆಗಮಿಸುತ್ತಿರುವ ಭಕ್ತರು ಕನಕಪುರ ತಾಲ್ಲೂಕಿನ ಗಡಿ ಮಾರ್ಗವಾಗಿ ಕಾವೇರಿ ನದಿ ದಾಟಿ ತಾಲ್ಲೂಕಿನ ಬಸವನಕಡ ಸ್ಥಳ ತಲುಪುತ್ತಿದ್ದಾರೆ. ಭಕ್ತರು ನದಿ ದಾಟಲು ಅನುವಾಗುವಂತೆ ನದಿಯ ನೀರಿನ ಹರಿವನ್ನು ತಗ್ಗಿಸಲಾಗಿದೆ.</p>.<p>ಉತ್ಸವ, ಜಾತ್ರೆಗಳ ವೇಳೆ ಭಕ್ತರು ಪಾದಯಾತ್ರೆಯಲ್ಲಿ ಬೆಟ್ಟಕ್ಕೆ ಬರುವುದು ಸಾಮಾನ್ಯ. ಆದರೆ, ಶಿವರಾತ್ರಿ ಜಾತ್ರೆಗೆ ಲಕ್ಷಾಂತರ ಭಕ್ತರು ಪಾದಯಾತ್ರೆಯಲ್ಲಿ ಬರುವುದು ಹಾಗೂ ಕಾವೇರಿ ನದಿ ದಾಟಿ ದೇವರ ದರ್ಶನ ಪಡೆದು ಹರಕೆ ತೀರಿಸುವುದು ವಿಶೇಷ. </p>.<p>ಜಾತ್ರೆ ಆರಂಭಕ್ಕೆ ಇನ್ನೆರಡು ದಿನ ಉಳಿದಿರುವುದರಿಂದ, ಬಹಳಷ್ಟು ಭಕ್ತರು ಕಾವೇರಿ ನದಿ ದಾಟಿದ ಬಳಿಕ ತೀರದಲ್ಲಿ ರಾತ್ರಿ ತಂಗಿ ಮರುದಿನ ಬೆಳಿಗ್ಗೆ ಪಾದಯಾತ್ರೆ ಆರಂಭಿಸುತ್ತಿದ್ದಾರೆ. ಪಾದಯಾತ್ರೆ ಮಾರ್ಗದಲ್ಲಿ ಭಕ್ತರಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.</p>.<p>‘ಚಿಕ್ಕ ವಯಸ್ಸಿನಿಂದಲೂ ತಂದೆಯೊಂದಿಗೆ ಪಾದಯಾತ್ರೆಯಲ್ಲಿ ಬರುವುದು ಅಭ್ಯಾಸವಾಗಿದ್ದು ಮುಂದುವರಿಸಿಕೊಂಡು ಬಂದಿದ್ದೇನೆ. ಎರಡು ವರ್ಷಗಳಿಂದ ಗ್ರಾಮಸ್ಥರೆಲ್ಲರೂ ಒಂದು ತಂಡವಾಗಿ ಪಾದಯಾತ್ರೆ ಕೈಗೊಳ್ಳುತ್ತಿದ್ದೇವೆ’ ಎನ್ನುತ್ತಾರೆ ಕನಕಪುರ ತಾಲ್ಲೂಕಿನ ಬೆನಗೋಡು ಗ್ರಾಮದ ಮಹಾದೇವಮ್ಮ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong> (ಚಾಮರಾಜನಗರ ಜಿಲ್ಲೆ): ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ 25ರಿಂದ ಆರಂಭವಾಗುವ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾವಿರಾರು ಭಕ್ತರು ಕಾವೇರಿ ನದಿ ದಾಟಿ ಮಾದಪ್ಪನ ಕ್ಷೇತ್ರದತ್ತ ಸಾಗುತ್ತಿದ್ದಾರೆ.</p>.<p>ಬೆಂಗಳೂರು, ಕನಕಪುರ, ನೆಲಮಂಗಲ, ಮಾಗಡಿ, ಸಾತನೂರು, ಹಾರೋಹಳ್ಳಿ, ರಾಮನಗರ ಸೇರಿದಂತೆ ಹಲವು ಕಡೆಗಳಿಂದ ಆಗಮಿಸುತ್ತಿರುವ ಭಕ್ತರು ಕನಕಪುರ ತಾಲ್ಲೂಕಿನ ಗಡಿ ಮಾರ್ಗವಾಗಿ ಕಾವೇರಿ ನದಿ ದಾಟಿ ತಾಲ್ಲೂಕಿನ ಬಸವನಕಡ ಸ್ಥಳ ತಲುಪುತ್ತಿದ್ದಾರೆ. ಭಕ್ತರು ನದಿ ದಾಟಲು ಅನುವಾಗುವಂತೆ ನದಿಯ ನೀರಿನ ಹರಿವನ್ನು ತಗ್ಗಿಸಲಾಗಿದೆ.</p>.<p>ಉತ್ಸವ, ಜಾತ್ರೆಗಳ ವೇಳೆ ಭಕ್ತರು ಪಾದಯಾತ್ರೆಯಲ್ಲಿ ಬೆಟ್ಟಕ್ಕೆ ಬರುವುದು ಸಾಮಾನ್ಯ. ಆದರೆ, ಶಿವರಾತ್ರಿ ಜಾತ್ರೆಗೆ ಲಕ್ಷಾಂತರ ಭಕ್ತರು ಪಾದಯಾತ್ರೆಯಲ್ಲಿ ಬರುವುದು ಹಾಗೂ ಕಾವೇರಿ ನದಿ ದಾಟಿ ದೇವರ ದರ್ಶನ ಪಡೆದು ಹರಕೆ ತೀರಿಸುವುದು ವಿಶೇಷ. </p>.<p>ಜಾತ್ರೆ ಆರಂಭಕ್ಕೆ ಇನ್ನೆರಡು ದಿನ ಉಳಿದಿರುವುದರಿಂದ, ಬಹಳಷ್ಟು ಭಕ್ತರು ಕಾವೇರಿ ನದಿ ದಾಟಿದ ಬಳಿಕ ತೀರದಲ್ಲಿ ರಾತ್ರಿ ತಂಗಿ ಮರುದಿನ ಬೆಳಿಗ್ಗೆ ಪಾದಯಾತ್ರೆ ಆರಂಭಿಸುತ್ತಿದ್ದಾರೆ. ಪಾದಯಾತ್ರೆ ಮಾರ್ಗದಲ್ಲಿ ಭಕ್ತರಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.</p>.<p>‘ಚಿಕ್ಕ ವಯಸ್ಸಿನಿಂದಲೂ ತಂದೆಯೊಂದಿಗೆ ಪಾದಯಾತ್ರೆಯಲ್ಲಿ ಬರುವುದು ಅಭ್ಯಾಸವಾಗಿದ್ದು ಮುಂದುವರಿಸಿಕೊಂಡು ಬಂದಿದ್ದೇನೆ. ಎರಡು ವರ್ಷಗಳಿಂದ ಗ್ರಾಮಸ್ಥರೆಲ್ಲರೂ ಒಂದು ತಂಡವಾಗಿ ಪಾದಯಾತ್ರೆ ಕೈಗೊಳ್ಳುತ್ತಿದ್ದೇವೆ’ ಎನ್ನುತ್ತಾರೆ ಕನಕಪುರ ತಾಲ್ಲೂಕಿನ ಬೆನಗೋಡು ಗ್ರಾಮದ ಮಹಾದೇವಮ್ಮ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>