<p><strong>ಕೊಳ್ಳೇಗಾಲ:</strong> ನಗರಸಭೆ ವ್ಯಾಪ್ತಿಯ 15ನೇ ವಾರ್ಡ್ನ ಪೌರಕಾರ್ಮಿಕರ ಕಾಲೊನಿಯಲ್ಲಿ ₹10 ಲಕ್ಷ ವಿಶೇಷ ಅನುದಾನದಲ್ಲಿ 30 ಅಡಿ ಸಿ.ಸಿ. ರಸ್ತೆ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷೆ ರೇಖಾ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬಳಿಕ ಮಾತನಾಡಿ, ‘ಕಾಲೊನಿಯಲ್ಲಿ 98 ಮೀಟರ್ ಉದ್ದ ಹಾಗೂ 5 ಮೀಟರ್ ಅಗಲದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಗೆ ಶಾಸಕರು ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ಈ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಡಿ ₹5 ಲಕ್ಷ ವೆಚ್ಚದಲ್ಲಿ ಚರಂಡಿ ನಿರ್ಮಾಣವಾಗಿದೆ. ಮತ್ತೊಂದು ಬದಿಯಲ್ಲಿ ಚರಂಡಿ ಹಾಗೂ ಡೆಕ್ ನಿರ್ಮಾಣಕ್ಕೆ ನಗರೋತ್ಥಾನ ಯೋಜನೆಯಡಿ ಸುಮಾರು ₹8 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲಿ ಕಾಮಗಾರಿ ನಡೆಯಲಿದೆ’ ಎಂದು ಹೇಳಿದರು. </p>.<p>‘ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಣದ ವಾರ್ಡ್ಗಳಿಗೆ ಶಾಸಕರು ವಿಶೇಷ ಅನುದಾನ ತಂದು ಅಭಿವೃದ್ಧಿಗೆ ಆದ್ಯತೆ ನೀಡಲಿದ್ದಾರೆ’ ಎಂದರು.<br /><br />ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸುರೇಶ್, ಸದಸ್ಯ ರಾಘವೇಂದ್ರ, ಸ್ವಾಮಿ ನಂಜಪ್ಪ, ಗ್ಯಾರಂಟಿಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಬಸ್ತೀಪುರ ರವಿ, ಮುಖಂಡ ರಮೇಶ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ನಗರಸಭೆ ವ್ಯಾಪ್ತಿಯ 15ನೇ ವಾರ್ಡ್ನ ಪೌರಕಾರ್ಮಿಕರ ಕಾಲೊನಿಯಲ್ಲಿ ₹10 ಲಕ್ಷ ವಿಶೇಷ ಅನುದಾನದಲ್ಲಿ 30 ಅಡಿ ಸಿ.ಸಿ. ರಸ್ತೆ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷೆ ರೇಖಾ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬಳಿಕ ಮಾತನಾಡಿ, ‘ಕಾಲೊನಿಯಲ್ಲಿ 98 ಮೀಟರ್ ಉದ್ದ ಹಾಗೂ 5 ಮೀಟರ್ ಅಗಲದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಗೆ ಶಾಸಕರು ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ಈ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಡಿ ₹5 ಲಕ್ಷ ವೆಚ್ಚದಲ್ಲಿ ಚರಂಡಿ ನಿರ್ಮಾಣವಾಗಿದೆ. ಮತ್ತೊಂದು ಬದಿಯಲ್ಲಿ ಚರಂಡಿ ಹಾಗೂ ಡೆಕ್ ನಿರ್ಮಾಣಕ್ಕೆ ನಗರೋತ್ಥಾನ ಯೋಜನೆಯಡಿ ಸುಮಾರು ₹8 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲಿ ಕಾಮಗಾರಿ ನಡೆಯಲಿದೆ’ ಎಂದು ಹೇಳಿದರು. </p>.<p>‘ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಣದ ವಾರ್ಡ್ಗಳಿಗೆ ಶಾಸಕರು ವಿಶೇಷ ಅನುದಾನ ತಂದು ಅಭಿವೃದ್ಧಿಗೆ ಆದ್ಯತೆ ನೀಡಲಿದ್ದಾರೆ’ ಎಂದರು.<br /><br />ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸುರೇಶ್, ಸದಸ್ಯ ರಾಘವೇಂದ್ರ, ಸ್ವಾಮಿ ನಂಜಪ್ಪ, ಗ್ಯಾರಂಟಿಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಬಸ್ತೀಪುರ ರವಿ, ಮುಖಂಡ ರಮೇಶ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>