‘ಸಮೀಕ್ಷಾ ಕಾರ್ಯದ ಉಸ್ತುವಾರಿ ವಹಿಸಿ ರೈತರಿಗೆ ನೆರವಾಗಲು ರೇಷ್ಮೆ, ಪಶುಸಂಗೋಪನೆ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳನ್ನೇ ನೋಡೆಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಈ ಅಧಿಕಾರಿಗಳು ವ್ಯಾಪಕವಾಗಿ ಕ್ಷೇತ್ರ ಪ್ರವಾಸ ಕೈಗೊಂಡು ಬೆಳೆ ಸಮೀಕ್ಷೆ ಪರಿಶೀಲನೆ ಮಾಡಬೇಕು. ಮಾಹಿತಿ ಅಪ್ ಲೋಡ್ ಮಾಡಲು ನೆರವಾಗಬೇಕು. ವಿಳಂಬ, ನಿರ್ಲಕ್ಷ್ಯ ಧೋರಣೆ ವಹಿಸುವುದನ್ನು ಸಹಿಸಲಾಗುವುದಿಲ್ಲ. ಬೆಳೆ ಸಮೀಕ್ಷೆ ಜಿಲ್ಲೆಯಲ್ಲಿ ಕುಂಠಿತವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹಿರಿಯ ಅಧಿಕಾರಿಗಳು ವಹಿಸಬೇಕು’ ಎಂದು ಡಾ.ಎಂ.ಆರ್.ರವಿ ಅವರು ಹೇಳಿದರು.