<p><strong>ಚಾಮರಾಜನಗರ:</strong> ‘ಗಡಿ ಜಿಲ್ಲೆ ಚಾಮರಾಜನಗರದ ಅಭಿವೃದ್ಧಿಗಾಗಿ ನನ್ನಿಂದಾಗುವ ಎಲ್ಲ ಕೆಲಸವನ್ನು ಮಾಡುವೆ. ಮುಂದೆಯೂ ಸಹಕಾರ ನೀಡುತ್ತೇನೆ’ ಎಂದು ಚಿತ್ರ ನಟ, ಜಿಲ್ಲೆಯ ರಾಯಭಾರಿ ಪುನೀತ್ ರಾಜ್ಕುಮಾರ್ ಅವರು ಭರವಸೆ ನೀಡಿದರು.</p>.<p>ಜಿಲ್ಲೆಯ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಸಿದ್ಧಪಡಿಸಿರುವ ‘ಚೆಲುವ ಚಾಮರಾಜನಗರ–ಹುಲಿಗಳ ನಾಡು’ ವಿಡಿಯೊ ಬಿಡುಗಡೆ ಕಾರ್ಯಕ್ರಮದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದ ಅವರು, ‘ಚಾಮರಾಜನಗರ ಜಿಲ್ಲೆಇದು ನನ್ನ ತಂದೆಯವರ ತವರೂರು. ನನ್ನನ್ನು ಜಿಲ್ಲೆಯ ರಾಯಭಾರಿಯನ್ನಾಗಿ ಮಾಡಿರುವುದಕ್ಕೆ ಹೆಮ್ಮೆ ಇದೆ’ ಎಂದರು.</p>.<p>‘ಚಾಮರಾಜನಗರ ಮಾತ್ರ ಅಲ್ಲದೇ, ನಮ್ಮ ರಾಜ್ಯ ಹಾಗೂ ಇಡೀ ದೇಶ ಅಭಿವೃದ್ಧಿಯಾಗಬೇಕಿದೆ’ ಎಂದರು.</p>.<p>ವಿಡಿಯೊ ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು, ‘ಚಾಮರಾಜನಗರಕ್ಕೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಇದೆ. ಆದರೆ, ಪ್ರಾಕೃತಿಕವಾಗಿ, ಧಾರ್ಮಿಕವಾಗಿ ಇದು ಶ್ರೀಮಂತ ಜಿಲ್ಲೆ. ಪ್ರವಾಸೋದ್ಯಮಕ್ಕೆ ಇಲ್ಲಿ ವಿಪುಲ ಅವಕಾಶಗಳಿವೆ. ಅದನ್ನು ನಾವು ಬಳಸಿಕೊಳ್ಳಬೇಕು’ ಎಂದರು.</p>.<p>‘ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಉತ್ತಮ ವಿಡಿಯೊವನ್ನು ಸಿದ್ಧಪಡಿಸಿದೆ. ಪ್ರವಾಸಿ ತಾಣಗಳ ಬಗ್ಗೆ ನಾವು ಪ್ರಚಾರ ನಡೆಸಬೇಕಾಗಿದೆ. ಪ್ರವಾಸಿಗರನ್ನು ಕರೆತರಬೇಕಿದೆ. ಆಗ ಜಿಲ್ಲೆಯ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ನಟ ಪುನೀತ್ ರಾಜ್ಕುಮಾರ್ ಅವರು ಜಿಲ್ಲೆಯ ರಾಯಭಾರಿಯಾಗಿರುವುದು ನಮಗೆ ಶಕ್ತಿ ತುಂಬಿದೆ’ ಎಂದು ಹೇಳಿದರು.</p>.<p>ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ.ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಇದ್ದರು.</p>.<p class="Subhead"><strong>ವಿಡಿಯೊದಲ್ಲಿ ಏನಿದೆ?</strong>: 4.19 ನಿಮಿಷಗಳ ವಿಡಿಯೊದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳು, ಜಲಪಾತಗಳು ದೇವಾಲಯಗಳು, ಅರಣ್ಯ ಪ್ರದೇಶ, ಬೆಡ್ಡ ಗುಡ್ಡಗಳು, ಇಲ್ಲಿನ ಜಾನಪದ ಸಂಸ್ಕೃತಿ, ಕೃಷಿ, ರೇಷ್ಮೆ ಚಟುವಟಿಕೆಗಳು, ಜನಜೀವನ ಬಿಂಬಿಸುವ ದೃಶ್ಯಾವಳಿಗಳಿವೆ.</p>.<p class="Subhead">ವಿಡಿಯೊದ ಕೊನೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ‘ನಮ್ಮ ನಾಡು, ಹುಲಿಗಳ ನಾಡು ಚಾಮರಾಜನಗರ, ಬನ್ನಿ ನನ್ನ ಜೊತೆ’ ಎಂಬ ಸಂದೇಶವನ್ನೂ ನೀಡಿದ್ದಾರೆ.</p>.<p>ಡ್ರೋನ್ ಕ್ಯಾಮೆರಾದಲ್ಲಿ ಸೆರೆಹಿಡಿದ ದೃಶ್ಯಗಳು ಗಮನಸೆಳೆಯುತ್ತವೆ. ವನ್ಯಧಾಮಗಳ ವ್ಯಾಪ್ತಿಯಲ್ಲಿರುವ ಹಾಗೂ ಜನರಿಗೆ ಪ್ರವೇಶಕ್ಕೆ ಅನುಮತಿ ಇಲ್ಲದ ಪ್ರದೇಶಗಳ ಸುಂದರ ದೃಶ್ಯಾವಳಿಗಳೂ ವಿಡಿಯೊದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ಗಡಿ ಜಿಲ್ಲೆ ಚಾಮರಾಜನಗರದ ಅಭಿವೃದ್ಧಿಗಾಗಿ ನನ್ನಿಂದಾಗುವ ಎಲ್ಲ ಕೆಲಸವನ್ನು ಮಾಡುವೆ. ಮುಂದೆಯೂ ಸಹಕಾರ ನೀಡುತ್ತೇನೆ’ ಎಂದು ಚಿತ್ರ ನಟ, ಜಿಲ್ಲೆಯ ರಾಯಭಾರಿ ಪುನೀತ್ ರಾಜ್ಕುಮಾರ್ ಅವರು ಭರವಸೆ ನೀಡಿದರು.</p>.<p>ಜಿಲ್ಲೆಯ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಸಿದ್ಧಪಡಿಸಿರುವ ‘ಚೆಲುವ ಚಾಮರಾಜನಗರ–ಹುಲಿಗಳ ನಾಡು’ ವಿಡಿಯೊ ಬಿಡುಗಡೆ ಕಾರ್ಯಕ್ರಮದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದ ಅವರು, ‘ಚಾಮರಾಜನಗರ ಜಿಲ್ಲೆಇದು ನನ್ನ ತಂದೆಯವರ ತವರೂರು. ನನ್ನನ್ನು ಜಿಲ್ಲೆಯ ರಾಯಭಾರಿಯನ್ನಾಗಿ ಮಾಡಿರುವುದಕ್ಕೆ ಹೆಮ್ಮೆ ಇದೆ’ ಎಂದರು.</p>.<p>‘ಚಾಮರಾಜನಗರ ಮಾತ್ರ ಅಲ್ಲದೇ, ನಮ್ಮ ರಾಜ್ಯ ಹಾಗೂ ಇಡೀ ದೇಶ ಅಭಿವೃದ್ಧಿಯಾಗಬೇಕಿದೆ’ ಎಂದರು.</p>.<p>ವಿಡಿಯೊ ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು, ‘ಚಾಮರಾಜನಗರಕ್ಕೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಇದೆ. ಆದರೆ, ಪ್ರಾಕೃತಿಕವಾಗಿ, ಧಾರ್ಮಿಕವಾಗಿ ಇದು ಶ್ರೀಮಂತ ಜಿಲ್ಲೆ. ಪ್ರವಾಸೋದ್ಯಮಕ್ಕೆ ಇಲ್ಲಿ ವಿಪುಲ ಅವಕಾಶಗಳಿವೆ. ಅದನ್ನು ನಾವು ಬಳಸಿಕೊಳ್ಳಬೇಕು’ ಎಂದರು.</p>.<p>‘ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಉತ್ತಮ ವಿಡಿಯೊವನ್ನು ಸಿದ್ಧಪಡಿಸಿದೆ. ಪ್ರವಾಸಿ ತಾಣಗಳ ಬಗ್ಗೆ ನಾವು ಪ್ರಚಾರ ನಡೆಸಬೇಕಾಗಿದೆ. ಪ್ರವಾಸಿಗರನ್ನು ಕರೆತರಬೇಕಿದೆ. ಆಗ ಜಿಲ್ಲೆಯ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ನಟ ಪುನೀತ್ ರಾಜ್ಕುಮಾರ್ ಅವರು ಜಿಲ್ಲೆಯ ರಾಯಭಾರಿಯಾಗಿರುವುದು ನಮಗೆ ಶಕ್ತಿ ತುಂಬಿದೆ’ ಎಂದು ಹೇಳಿದರು.</p>.<p>ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ.ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಇದ್ದರು.</p>.<p class="Subhead"><strong>ವಿಡಿಯೊದಲ್ಲಿ ಏನಿದೆ?</strong>: 4.19 ನಿಮಿಷಗಳ ವಿಡಿಯೊದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳು, ಜಲಪಾತಗಳು ದೇವಾಲಯಗಳು, ಅರಣ್ಯ ಪ್ರದೇಶ, ಬೆಡ್ಡ ಗುಡ್ಡಗಳು, ಇಲ್ಲಿನ ಜಾನಪದ ಸಂಸ್ಕೃತಿ, ಕೃಷಿ, ರೇಷ್ಮೆ ಚಟುವಟಿಕೆಗಳು, ಜನಜೀವನ ಬಿಂಬಿಸುವ ದೃಶ್ಯಾವಳಿಗಳಿವೆ.</p>.<p class="Subhead">ವಿಡಿಯೊದ ಕೊನೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ‘ನಮ್ಮ ನಾಡು, ಹುಲಿಗಳ ನಾಡು ಚಾಮರಾಜನಗರ, ಬನ್ನಿ ನನ್ನ ಜೊತೆ’ ಎಂಬ ಸಂದೇಶವನ್ನೂ ನೀಡಿದ್ದಾರೆ.</p>.<p>ಡ್ರೋನ್ ಕ್ಯಾಮೆರಾದಲ್ಲಿ ಸೆರೆಹಿಡಿದ ದೃಶ್ಯಗಳು ಗಮನಸೆಳೆಯುತ್ತವೆ. ವನ್ಯಧಾಮಗಳ ವ್ಯಾಪ್ತಿಯಲ್ಲಿರುವ ಹಾಗೂ ಜನರಿಗೆ ಪ್ರವೇಶಕ್ಕೆ ಅನುಮತಿ ಇಲ್ಲದ ಪ್ರದೇಶಗಳ ಸುಂದರ ದೃಶ್ಯಾವಳಿಗಳೂ ವಿಡಿಯೊದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>