ವಿದ್ಯಾರ್ಥಿಗಳಿಗೆ ಪಾಠ ಪ್ರವಚನಕ್ಕೆ ಸಮಸ್ಯೆಯಾಗದಂತೆ ಉಪನ್ಯಾಸಕರನ್ನು ನಿಯೋಜಿಸಲಾಗಿದೆ. ಶೀಘ್ರ ಅತಿಥಿ ಶಿಕ್ಷಕರ ನೇಮಕಾತಿ ನಡೆಯಲಿದ್ದು ಉಪನ್ಯಾಸಕರ ಕೊರತೆ ನೀಗಲಿದೆ
ಪುಟ್ಟಗೌರಮ್ಮ ಡಿಡಿಪಿಯು
ಉಪನ್ಯಾಸಕರ ಕೊರತೆ
ಆದರ್ಶ ವಿದ್ಯಾಲಯಗಳ ಪದವಿಪೂರ್ವ ವಿಭಾಗಕ್ಕೆ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಾಗಿದ್ದರೂ ಬೋಧಿಸಲು ಉಪನ್ಯಾಸಕರ ಕೊರತೆ ಕಾಡುತ್ತಿದೆ. ಒಂದು ವಿದ್ಯಾಲಯಕ್ಕೆ 9 ಮಂದಿ ಕಾಯಂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಗತ್ಯವಿದೆ. ಪ್ರಸ್ತುತ ಒಬ್ಬ ಕಾಯಂ ಸಿಬ್ಬಂದಿಯನ್ನೂ ನೇಮಕಾತಿ ಮಾಡಿಲ್ಲ. ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಆದರ್ಶ ವಿದ್ಯಾಲಯದ ಕಾಲೇಜು ವಿಭಾಗಕ್ಕೆ ನಿಯೋಜಿಸಲಾಗಿದೆ. ಪರಿಣಾಮ ಕಾಲೇಜು ಆರಂಭವಾಗಿ 15 ದಿನ ಕಳೆದರೂ ಸರಿಯಾಗಿ ಪಾಠ ಪ್ರವಚನ ನಡೆಯುತ್ತಿಲ್ಲ ಎಂದು ಉಪನ್ಯಾಸಕರೊಬ್ಬರು ತಿಳಿಸಿದರು.
ಶುಲ್ಕದ ವಿವರ
ಆದರ್ಶ ವಿದ್ಯಾಲಯದ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ ಪಡೆಯಲು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಹಾಗೂ ಕೆಟಗರಿ 1ಕ್ಕೆ ಸೇರಿದ ವಿದ್ಯಾರ್ಥಿಗಳು 255 ಶುಲ್ಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ₹ 790 ಶುಲ್ಕ ನಿಗದಿಪಡಿಸಲಾಗಿದೆ. ಯೂನಿಫಾರಂ ಪ್ರವೇಶಾತಿ ಶುಲ್ಕ ಸೇರಿದಂತೆ ₹ 1530 ದರ ನಿಗದಿಪಡಿಸಲಾಗಿದೆ.