‘ಧಾರ್ಮಿಕ ಸಮಾವೇಶಕ್ಕೆ ಜಿಲ್ಲೆಯಿಂದ ನಾಲ್ಕು ಜನರು ಹೋಗಿದ್ದರು ಎಂಬ ಮಾಹಿತಿ ಜಿಲ್ಲಾಡಳಿತಕ್ಕೆ ಬಂತು. ಅವರಲ್ಲಿ ಮೂರು ಜನರನ್ನು ಪತ್ತೆ ಹಚ್ಚಲಾಗಿದೆ. ಇಬ್ಬರು ಕೊಳ್ಳೇಗಾಲದವರು, ಇನ್ನೊಬ್ಬರು ಚಾಮರಾಜನಗರದವರು. ಅವರನ್ನು ವಿಚಾರಣೆ ಮಾಡಿದಾಗ ಇನ್ನೂ 9 ಜನ ಬಂದಿದ್ದರು ಎಂಬ ಮಾಹಿತಿ ನೀಡಿದ್ದಾರೆ. ಒಬ್ಬರು ಬೆಂಗಳೂರಿನಲ್ಲಿ ಇದ್ದಾರೆ ಎಂದು ಗೊತ್ತಾಗಿದೆ. ಅವರ ವಿವರ ಹಾಗೂ ಮೊಬೈಲ್ ಸಂಖ್ಯೆ ಪಡೆದು ಬೆಂಗಳೂರಿಗೆ ಮಾಹಿತಿ ನೀಡಲಾಗಿದೆ. ಎಲ್ಲರನ್ನೂ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ’ ಎಂದು ಅವರು ಹೇಳಿದರು.