‘ರಾಷ್ಟ್ರೀಯ ಹೆದ್ದಾರಿ ಮುಖ್ಯರಸ್ತೆಯ ಈ ಸೇತುವೆ ಬ್ರಿಟಿಷರ ಕಾಲದ ಸೇತುವೆ ಆಗಿದ್ದು, ಸಾಮರ್ಥ್ಯ ಹಾಗೂ ಗುಣಮಟ್ಟವನ್ನು ಸಂಬಂಧ ಪಟ್ಟ ಲೋಕೋಪಯೋಗಿ ಇಲಾಖೆ ಆಧಿಕಾರಿಗಳು ಪರಿಶೀಲನೆ ಮಾಡಬೇಕು ಸಾರ್ವಜನಿಕರ ಅನುಕೂಲಕ್ಕಾಗಿ ಪರಿಶೀಲನೆ ನಡೆಸಿದ್ದೇನೆ. ಒಂದು ವಾರದಲ್ಲಿ ಇದರ ಸ್ಥಿತಿಗತಿಯನ್ನು ತಜ್ಞರು ಪರಿಶೀಲಿಸಿ ವರದಿ ನೀಡಬೇಕು. ಒಂದು ವೇಳೆ ಸೇತುವೆಯ ಅವಧಿ ಮುಗಿದಿದ್ದರೆ ಹೊಸ ಸೇತುವೆಗೆ ಅನುಮೋದನೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ನಾನು ಕೊಳ್ಳೇಗಾಲದಿಂದ ಚಾಮರಾಜನಗರಕ್ಕೆ ಹೋಗಬೇಕಾದರೆ ಈ ಸೇತುವೆಯ ಮೂಲಕವೇ ಸಾಗುವುದರಿಂದ ವೀಕ್ಷಣೆ ಮಾಡಿದ್ದೇನೆ. ಸಮಸ್ಯೆ ಇದ್ದರೆ ಅದನ್ನು ಕೂಡಲೇ ಬಗೆಹರಿಸುತ್ತೇನೆ ಎಂದು ಹೇಳಿದರು.