<p><strong>ಚಾಮರಾಜನಗರ:</strong> ನಗರದ ಹೊರವಲಯದಲ್ಲಿರುವ ಕರಿವರದರಾಜ ಸ್ವಾಮಿ ಬೆಟ್ಟದಲ್ಲಿ ಗುರುವಾರ ಚಾರಣದ ಸಂಭ್ರಮ ತುಂಬಿತ್ತು. ಶಾಲಾ ಕಾಲೇಜು ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. </p>.<p>ಜಿಲ್ಲೆಯ ಯುವಜನತೆ ಹಾಗೂ ಸಾರ್ವಜನಿಕರನ್ನು ಸಾಹಸ ಚಟುವಟಿಕೆಗಳತ್ತ ಆಕರ್ಷಿಸುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಚಾರಣ ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾಮಟ್ಟದ ಚಾರಣಕ್ಕೆ ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಚಾಲನೆ ನೀಡಿದರು. ಬಳಿಕ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಕಲೆ ಹಾಗೂ ಸಾಹಸ ಕ್ರೀಡೆಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು. </p>.<p>ಗುಡ್ಡಗಾಡು ಓಟ, ಚಾರಣ, ಜಲ ಸಾಹಸ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆತ್ಮಸ್ಥೈರ್ಯವನ್ನು ವೃದ್ಧಿಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳು ಭವಿಷ್ಯದಲ್ಲಿ ಎದುರಾಗುವ ಸವಾಲು ಹಾಗೂ ಸಂಕಷ್ಟಗಳನ್ನು ಎದುರಿಸುವ ಶಕ್ತಿ ನೀಡುತ್ತವೆ. ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಹೊಂದಲು ಸಹಕಾರಿಯಾಗಿವೆ ಎಂದರು.</p>.<p>ಜಿಲ್ಲಾ ಕ್ರೀಡಾಂಗಣ ಸಲಹಾ ಸಮಿತಿ ಸದಸ್ಯ ವಿ.ಶ್ರೀನಿವಾಸ ಪ್ರಸಾದ್ ಮಾತನಾಡಿ, ಯುವಜನತೆ ಸಾಮಾಜಿಕ ಜಾಲತಾಣ, ಟಿವಿ, ಮೊಬೈಲ್ ಫೋನ್ಗೆ ಅಂಟಿಕೊಂಡಿರುವುದು ಬೇಸರದ ಸಂಗತಿ. ಹರೆಯದಲ್ಲಿ ಮಾದಕ ವಸ್ತುಗಳತ್ತ ಆಕರ್ಷಿತರಾಗಿ ಉತ್ತಮ ಜೀವನವನ್ನು ಹಾಳುಮಾಡಿಕೊಳ್ಳಬಾರದು. ಕ್ರೀಡೆ, ಸಾಹಸ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್ ಮಾತನಾಡಿ, ಫಿಟ್ ಇಂಡಿಯಾ ಆಶಯದೊಂದಿಗೆ ಕ್ರೀಡಾ ಇಲಾಖೆ ವತಿಯಿಂದ 15ರಿಂದ 30 ವರ್ಷದೊಳಗಿನ ಯುವಕ, ಯುವತಿಯರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಲಸಾಹಸ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ.</p>.<p>ಯುವಜನತೆಯಲ್ಲಿ ಸಾಹಸ ಪ್ರವೃತ್ತಿಯನ್ನು ಪ್ರೋತ್ಸಾಹಿಸಲು ಕರಿವರದರಾಜಸ್ವಾಮಿ ಬೆಟ್ಟಕ್ಕೆ ಆಯೋಜಿಸಿರುವ ಚಾರಣಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದೆ ಪರಿಸರ ಅಧ್ಯಯನದಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.</p>.<p>ಚಾರಣದಲ್ಲಿ ಭಾಗವಹಿಸಿದ್ದ ಚಾಮರಾಜನಗರ ಕೃಷಿ ವಿಶ್ವವಿದ್ಯಾಲಯದ ಹಾಗೂ ಸಂತೇಮರಹಳ್ಳಿಯ ಕ್ರೀಡಾ ಮತ್ತು ಅರ್ಚರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಚಾಮರಾಜನಗರ ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರಕಾಶ್, ಅರಣ್ಯಾಧಿಕಾರಿ ನಜೀವುಲ್ಲಾ ಷರೀಫ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ವಾರ್ತಾ ಇಲಾಖೆಯ ವಾರ್ತಾ ಸಹಾಯಕ ಸುರೇಶ್ ಕುಮಾರ್, ಪೊಲೀಸ್ ಅಧಿಕಾರಿ ಮಹದೇವಸ್ವಾಮಿ, ಗುಪ್ತಚರ ವಿಭಾಗದ ಸ್ವಾಮಿ, ಕ್ರೀಡಾ ಇಲಾಖೆಯ ತರಬೇತುದಾರ ಗಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ನಗರದ ಹೊರವಲಯದಲ್ಲಿರುವ ಕರಿವರದರಾಜ ಸ್ವಾಮಿ ಬೆಟ್ಟದಲ್ಲಿ ಗುರುವಾರ ಚಾರಣದ ಸಂಭ್ರಮ ತುಂಬಿತ್ತು. ಶಾಲಾ ಕಾಲೇಜು ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. </p>.<p>ಜಿಲ್ಲೆಯ ಯುವಜನತೆ ಹಾಗೂ ಸಾರ್ವಜನಿಕರನ್ನು ಸಾಹಸ ಚಟುವಟಿಕೆಗಳತ್ತ ಆಕರ್ಷಿಸುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಚಾರಣ ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾಮಟ್ಟದ ಚಾರಣಕ್ಕೆ ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಚಾಲನೆ ನೀಡಿದರು. ಬಳಿಕ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಕಲೆ ಹಾಗೂ ಸಾಹಸ ಕ್ರೀಡೆಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು. </p>.<p>ಗುಡ್ಡಗಾಡು ಓಟ, ಚಾರಣ, ಜಲ ಸಾಹಸ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆತ್ಮಸ್ಥೈರ್ಯವನ್ನು ವೃದ್ಧಿಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳು ಭವಿಷ್ಯದಲ್ಲಿ ಎದುರಾಗುವ ಸವಾಲು ಹಾಗೂ ಸಂಕಷ್ಟಗಳನ್ನು ಎದುರಿಸುವ ಶಕ್ತಿ ನೀಡುತ್ತವೆ. ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಹೊಂದಲು ಸಹಕಾರಿಯಾಗಿವೆ ಎಂದರು.</p>.<p>ಜಿಲ್ಲಾ ಕ್ರೀಡಾಂಗಣ ಸಲಹಾ ಸಮಿತಿ ಸದಸ್ಯ ವಿ.ಶ್ರೀನಿವಾಸ ಪ್ರಸಾದ್ ಮಾತನಾಡಿ, ಯುವಜನತೆ ಸಾಮಾಜಿಕ ಜಾಲತಾಣ, ಟಿವಿ, ಮೊಬೈಲ್ ಫೋನ್ಗೆ ಅಂಟಿಕೊಂಡಿರುವುದು ಬೇಸರದ ಸಂಗತಿ. ಹರೆಯದಲ್ಲಿ ಮಾದಕ ವಸ್ತುಗಳತ್ತ ಆಕರ್ಷಿತರಾಗಿ ಉತ್ತಮ ಜೀವನವನ್ನು ಹಾಳುಮಾಡಿಕೊಳ್ಳಬಾರದು. ಕ್ರೀಡೆ, ಸಾಹಸ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್ ಮಾತನಾಡಿ, ಫಿಟ್ ಇಂಡಿಯಾ ಆಶಯದೊಂದಿಗೆ ಕ್ರೀಡಾ ಇಲಾಖೆ ವತಿಯಿಂದ 15ರಿಂದ 30 ವರ್ಷದೊಳಗಿನ ಯುವಕ, ಯುವತಿಯರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಲಸಾಹಸ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ.</p>.<p>ಯುವಜನತೆಯಲ್ಲಿ ಸಾಹಸ ಪ್ರವೃತ್ತಿಯನ್ನು ಪ್ರೋತ್ಸಾಹಿಸಲು ಕರಿವರದರಾಜಸ್ವಾಮಿ ಬೆಟ್ಟಕ್ಕೆ ಆಯೋಜಿಸಿರುವ ಚಾರಣಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದೆ ಪರಿಸರ ಅಧ್ಯಯನದಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.</p>.<p>ಚಾರಣದಲ್ಲಿ ಭಾಗವಹಿಸಿದ್ದ ಚಾಮರಾಜನಗರ ಕೃಷಿ ವಿಶ್ವವಿದ್ಯಾಲಯದ ಹಾಗೂ ಸಂತೇಮರಹಳ್ಳಿಯ ಕ್ರೀಡಾ ಮತ್ತು ಅರ್ಚರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಚಾಮರಾಜನಗರ ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರಕಾಶ್, ಅರಣ್ಯಾಧಿಕಾರಿ ನಜೀವುಲ್ಲಾ ಷರೀಫ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ವಾರ್ತಾ ಇಲಾಖೆಯ ವಾರ್ತಾ ಸಹಾಯಕ ಸುರೇಶ್ ಕುಮಾರ್, ಪೊಲೀಸ್ ಅಧಿಕಾರಿ ಮಹದೇವಸ್ವಾಮಿ, ಗುಪ್ತಚರ ವಿಭಾಗದ ಸ್ವಾಮಿ, ಕ್ರೀಡಾ ಇಲಾಖೆಯ ತರಬೇತುದಾರ ಗಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>