<p><strong>ಚಾಮರಾಜನಗರ</strong>: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿದ್ದು ಹೆದ್ದಾರಿ ಬದಿ ಸರ್ವೀಸ್ ರಸ್ತೆಗಳನ್ನು ನಿರ್ಮಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಗಾಳಿಪುರ ಬಡಾವಣೆ ಬಳಿಯ ಹೆದ್ದಾರಿಯಲ್ಲಿ ಈಚೆಗೆ ಸಂಭವಿಸಿದ ಅಪಘಾತ ಸ್ಥಳಕ್ಕೆ ಭೇಟಿನೀಡಿ ಮಾತನಾಡಿದ ಅವರು, ಸೋಮವಾರಪೇಟೆ-ಹರದನಹಳ್ಳಿಗೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗಿವೆ. ಹರದನಹಳ್ಳಿ ಕಡೆಯಿಂದ ಚಾಮರಾಜನಗರದ ಒಳಗೆ ಬರಲು ಪ್ರತ್ಯೇಕ ಸರ್ವೀಸ್ ರಸ್ತೆ ನಿರ್ಮಾಣವಾಗಬೇಕು. ಗಾಳಿಪುರ ಬಡಾವಣೆಯಿಂದ ಕರಿವರದರಾಜಬೆಟ್ಟಕ್ಕೆ ಹೋಗಲು ಅಂಡರ್ಪಾಸ್ ನಿರ್ಮಾಣವಾಗಬೇಕು ಎಂದು ನಿರ್ದೇಶನ ನೀಡಿದರು.</p>.<p>ಬೈಪಾಸ್ ರಸ್ತೆ ನಿರ್ಮಾಣ ಮಾಡುವ ಸಂದರ್ಭ ಅಗತ್ಯ ಇರುವೆಡೆ ಸರ್ವೀಸ್ ರಸ್ತೆ ನಿರ್ಮಾಣ ಮಾಡಿಲ್ಲ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಕಳಪೆಯಾಗಿದ್ದು, ಕೊಳ್ಳೇಗಾಲ ತಾಲ್ಲೂಕಿನ ಉತ್ತುಂಬಳ್ಳಿ ಸಮೀಪದಲ್ಲಿ ಸೇತುವೆ ಕುಸಿದಿರುವುದು ಇದಕ್ಕೆ ನಿದರ್ಶನ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಹೆದ್ದಾರಿ ನಿರ್ಮಾಣ ಮಾಡುವಾಗ ಡಿಪಿಆರ್ನಲ್ಲಿರುವಂತೆ ರಸ್ತೆ ನಿರ್ಮಾಣ ಮಾಡಲಾಗಿದೆ. ಹೊಸದಾಗಿ ಡಿಪಿಆರ್ ಮಾಡಿದರೆ ಅಂಡರ್ಪಾಸ್ ನಿರ್ಮಾಣ ಮಾಡಲಾಗುವುದು’ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದರು.</p>.<p>ಚೂಡ ಅಧ್ಯಕ್ಷ ಮಹಮ್ಮದ್ ಅಸ್ಗರ್, ಮಾಜಿ ಅಧ್ಯಕ್ಷ ಸೈಯದ್ ರಫಿ, ನಗರಸಭಾ ಸದಸ್ಯ ಸ್ವಾಮಿ, ಸೈಯದ್ ಮುಸಾಯಿಬ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿದ್ದು ಹೆದ್ದಾರಿ ಬದಿ ಸರ್ವೀಸ್ ರಸ್ತೆಗಳನ್ನು ನಿರ್ಮಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಗಾಳಿಪುರ ಬಡಾವಣೆ ಬಳಿಯ ಹೆದ್ದಾರಿಯಲ್ಲಿ ಈಚೆಗೆ ಸಂಭವಿಸಿದ ಅಪಘಾತ ಸ್ಥಳಕ್ಕೆ ಭೇಟಿನೀಡಿ ಮಾತನಾಡಿದ ಅವರು, ಸೋಮವಾರಪೇಟೆ-ಹರದನಹಳ್ಳಿಗೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗಿವೆ. ಹರದನಹಳ್ಳಿ ಕಡೆಯಿಂದ ಚಾಮರಾಜನಗರದ ಒಳಗೆ ಬರಲು ಪ್ರತ್ಯೇಕ ಸರ್ವೀಸ್ ರಸ್ತೆ ನಿರ್ಮಾಣವಾಗಬೇಕು. ಗಾಳಿಪುರ ಬಡಾವಣೆಯಿಂದ ಕರಿವರದರಾಜಬೆಟ್ಟಕ್ಕೆ ಹೋಗಲು ಅಂಡರ್ಪಾಸ್ ನಿರ್ಮಾಣವಾಗಬೇಕು ಎಂದು ನಿರ್ದೇಶನ ನೀಡಿದರು.</p>.<p>ಬೈಪಾಸ್ ರಸ್ತೆ ನಿರ್ಮಾಣ ಮಾಡುವ ಸಂದರ್ಭ ಅಗತ್ಯ ಇರುವೆಡೆ ಸರ್ವೀಸ್ ರಸ್ತೆ ನಿರ್ಮಾಣ ಮಾಡಿಲ್ಲ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯೂ ಕಳಪೆಯಾಗಿದ್ದು, ಕೊಳ್ಳೇಗಾಲ ತಾಲ್ಲೂಕಿನ ಉತ್ತುಂಬಳ್ಳಿ ಸಮೀಪದಲ್ಲಿ ಸೇತುವೆ ಕುಸಿದಿರುವುದು ಇದಕ್ಕೆ ನಿದರ್ಶನ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಹೆದ್ದಾರಿ ನಿರ್ಮಾಣ ಮಾಡುವಾಗ ಡಿಪಿಆರ್ನಲ್ಲಿರುವಂತೆ ರಸ್ತೆ ನಿರ್ಮಾಣ ಮಾಡಲಾಗಿದೆ. ಹೊಸದಾಗಿ ಡಿಪಿಆರ್ ಮಾಡಿದರೆ ಅಂಡರ್ಪಾಸ್ ನಿರ್ಮಾಣ ಮಾಡಲಾಗುವುದು’ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದರು.</p>.<p>ಚೂಡ ಅಧ್ಯಕ್ಷ ಮಹಮ್ಮದ್ ಅಸ್ಗರ್, ಮಾಜಿ ಅಧ್ಯಕ್ಷ ಸೈಯದ್ ರಫಿ, ನಗರಸಭಾ ಸದಸ್ಯ ಸ್ವಾಮಿ, ಸೈಯದ್ ಮುಸಾಯಿಬ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>