<p><strong>ಯಳಂದೂರು</strong>: ತಾಲ್ಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ಬಾಲಕನ ಮೇಲೆ ದಾಳಿ ಮಾಡಿರುವ ಚಿರತೆ ಶನಿವಾರವೂ ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಗುಡ್ಡದ ಪರಿಸರದಲ್ಲಿ ಕಂಡು ಬಂದಿದ್ದು, ಸೆರೆ ಹಿಡಿಯುವ ಉದ್ದೇಶದಿಂದ ಬಲಿ ಪ್ರಾಣಿಯಾಗಿ ಇರಿಸಲಾಗಿದ್ದ ನಾಯಿಯನ್ನು ಎಳೆದೊಯ್ದಿದೆ.</p>.<p>ಯಳಂದೂರು ತಾಲ್ಲೂಕಿನ ಹೊಸೂರು, ಕುಂತೂರು ಮೋಳೆ ಹಾಗೂ ಕುಂತೂರು ಸುತ್ತಮುತ್ತ ಹೊಸದಾಗಿ ಮತ್ತೊಂದು ಬೋನು ಇಡಲಾಗಿದೆ. ಅಗರ, ಮಾಂಬಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಚಲನವಲನ ಕಂಡುಬಂದರೆ ಮಾಹಿತಿ ನೀಡುವಂತೆ ಪೊಲೀಸರು ಗ್ರಾಮಸ್ಥರಿಗೆ ತಿಳಿಸಿದ್ದಾರೆ. </p>.<p><strong>ಪೊಲೀಸರ ಗಸ್ತು:</strong> ಚಿರತೆ ಪ್ರತಿದಿನ ಜಾಡು ಸಂಭವ ಇರುವುದರಿಂದ ಗ್ರಾಮಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಶಾಲಾ-ಕಾಲೇಜು ಮಕ್ಕಳಿಗೂ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಅಗರ-ಮಾಂಬಳ್ಳಿ ಸಬ್ ಇನ್ಸ್ಪೆಕ್ಟರ್ ವೆಂಕಟೇಶ್ ಹೇಳಿದರು.</p>.<p><strong>ಹೊಸ ಕಾರ್ಯತಂತ್ರ</strong>: ಚಿರತೆ ಸೆರೆಗೆ ಅರಣ್ಯ ಇಲಾಖೆ ಹೊಸ ಕಾರ್ಯತಂತ್ರ ಹೆಣೆದಿದೆ. ಬೋನುಗಳಲ್ಲಿ ಮಾತ್ರವಲ್ಲದೇ, ನಿರ್ಜನ ಪ್ರದೇಶಗಳಲ್ಲಿ ಬಲಿ ಪ್ರಾಣಿಗಳನ್ನು ಕಟ್ಟಿ ಹಾಕಲಾಗಿದೆ. ಆ ಜಾಗದ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. </p>.<p>ಕುಂತೂರು ಗುಡ್ಡದಲ್ಲಿ ಶನಿವಾರ ಇದೇ ರೀತಿ ಕಟ್ಟಿ ಹಾಕಲಾಗಿದ್ದ ನಾಯಿಯನ್ನು ಚಿರತೆ ಎಳೆದೊಯ್ದಿದೆ. ನಾಯಿ ತಿನ್ನುವ ಆಸೆಗೆ ಮತ್ತೊಮ್ಮೆ ಚಿರತೆ ಬರಲಿದೆ. ಈ ಸಮಯದಲ್ಲಿ ಚಿರತೆಗೆ ಅರಿವಳಿಕೆ ನೀಡುವ ಬಗ್ಗೆ ಚಿಂತಿಸಲಾಗಿದೆ. ಚುಚ್ಚುಮದ್ದು ಪ್ರಯೋಗ ಮಾಡುವ ಸಿಬ್ಬಂದಿ ಶನಿವಾರ ರಜೆ ಇದ್ದುದ್ದರಿಂದ ಚಿರತೆ ಕಂಡರೂ ಮದ್ದು ಪ್ರಯೋಗ ನಡೆದಿಲ್ಲ ಎಂದು ಅರಣ್ಯ ಸಿಬ್ಬಂದಿ ಅಸಾಯಕತೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ತಾಲ್ಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ಬಾಲಕನ ಮೇಲೆ ದಾಳಿ ಮಾಡಿರುವ ಚಿರತೆ ಶನಿವಾರವೂ ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಗುಡ್ಡದ ಪರಿಸರದಲ್ಲಿ ಕಂಡು ಬಂದಿದ್ದು, ಸೆರೆ ಹಿಡಿಯುವ ಉದ್ದೇಶದಿಂದ ಬಲಿ ಪ್ರಾಣಿಯಾಗಿ ಇರಿಸಲಾಗಿದ್ದ ನಾಯಿಯನ್ನು ಎಳೆದೊಯ್ದಿದೆ.</p>.<p>ಯಳಂದೂರು ತಾಲ್ಲೂಕಿನ ಹೊಸೂರು, ಕುಂತೂರು ಮೋಳೆ ಹಾಗೂ ಕುಂತೂರು ಸುತ್ತಮುತ್ತ ಹೊಸದಾಗಿ ಮತ್ತೊಂದು ಬೋನು ಇಡಲಾಗಿದೆ. ಅಗರ, ಮಾಂಬಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಚಲನವಲನ ಕಂಡುಬಂದರೆ ಮಾಹಿತಿ ನೀಡುವಂತೆ ಪೊಲೀಸರು ಗ್ರಾಮಸ್ಥರಿಗೆ ತಿಳಿಸಿದ್ದಾರೆ. </p>.<p><strong>ಪೊಲೀಸರ ಗಸ್ತು:</strong> ಚಿರತೆ ಪ್ರತಿದಿನ ಜಾಡು ಸಂಭವ ಇರುವುದರಿಂದ ಗ್ರಾಮಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಶಾಲಾ-ಕಾಲೇಜು ಮಕ್ಕಳಿಗೂ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಅಗರ-ಮಾಂಬಳ್ಳಿ ಸಬ್ ಇನ್ಸ್ಪೆಕ್ಟರ್ ವೆಂಕಟೇಶ್ ಹೇಳಿದರು.</p>.<p><strong>ಹೊಸ ಕಾರ್ಯತಂತ್ರ</strong>: ಚಿರತೆ ಸೆರೆಗೆ ಅರಣ್ಯ ಇಲಾಖೆ ಹೊಸ ಕಾರ್ಯತಂತ್ರ ಹೆಣೆದಿದೆ. ಬೋನುಗಳಲ್ಲಿ ಮಾತ್ರವಲ್ಲದೇ, ನಿರ್ಜನ ಪ್ರದೇಶಗಳಲ್ಲಿ ಬಲಿ ಪ್ರಾಣಿಗಳನ್ನು ಕಟ್ಟಿ ಹಾಕಲಾಗಿದೆ. ಆ ಜಾಗದ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. </p>.<p>ಕುಂತೂರು ಗುಡ್ಡದಲ್ಲಿ ಶನಿವಾರ ಇದೇ ರೀತಿ ಕಟ್ಟಿ ಹಾಕಲಾಗಿದ್ದ ನಾಯಿಯನ್ನು ಚಿರತೆ ಎಳೆದೊಯ್ದಿದೆ. ನಾಯಿ ತಿನ್ನುವ ಆಸೆಗೆ ಮತ್ತೊಮ್ಮೆ ಚಿರತೆ ಬರಲಿದೆ. ಈ ಸಮಯದಲ್ಲಿ ಚಿರತೆಗೆ ಅರಿವಳಿಕೆ ನೀಡುವ ಬಗ್ಗೆ ಚಿಂತಿಸಲಾಗಿದೆ. ಚುಚ್ಚುಮದ್ದು ಪ್ರಯೋಗ ಮಾಡುವ ಸಿಬ್ಬಂದಿ ಶನಿವಾರ ರಜೆ ಇದ್ದುದ್ದರಿಂದ ಚಿರತೆ ಕಂಡರೂ ಮದ್ದು ಪ್ರಯೋಗ ನಡೆದಿಲ್ಲ ಎಂದು ಅರಣ್ಯ ಸಿಬ್ಬಂದಿ ಅಸಾಯಕತೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>