<p><strong>ಚಾಮರಾಜನಗರ</strong>: ಐದು ವರ್ಷಗಳ ಹಿಂದೆ ಕೋವಿಡ್ ಸಂದರ್ಭದಲ್ಲಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪತ್ರ ವಿತರಿಸಿದರು.</p><p>ಗುಂಡ್ಲುಪೇಟೆಯ ದೇವರಾಜ ಅರಸು ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕಿನ ೧೧೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ 25 ಮಂದಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರ ಮಾಡಿದರು.</p><p>ಸಂತ್ರಸ್ತರಿಗೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಬೋಧನಾ ಆಸ್ಪತ್ರೆಯಲ್ಲಿ (ಸಿಮ್ಸ್) ವಿವಿಧ ವೃಂದದ ಉದ್ಯೋಗಗಳನ್ನು ನೀಡಲಾಗಿದೆ.</p><p>2021, ಮೇ 2ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 34 ಮಂದಿ ಆಮ್ಲಜನಕ ಸಿಗದೆ ಧಾರುಣವಾಗಿ ಮೃತಪಟ್ಟಿದ್ದರು. ದುರ್ಘಟನೆ ನಡೆದಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. </p><p>ಭಾರತ್ ಜೋಡೋ ಪಾದಯಾತ್ರೆಯ ಸಂದರ್ಭ ರಾಹುಲ್ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.</p><p>ಬಳಿಕ ಸಂತ್ರಸ್ತರು ಸರ್ಕಾರಿ ಉದ್ಯೋಗಕ್ಕಾಗಿ ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದರು. ಅಂತಿಮವಾಗಿ ಸಂತ್ರಸ್ತರ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ.</p>.ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ಕೇಂದ್ರದಿಂದ ಇ.ಡಿ ದಾಳಿ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಐದು ವರ್ಷಗಳ ಹಿಂದೆ ಕೋವಿಡ್ ಸಂದರ್ಭದಲ್ಲಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪತ್ರ ವಿತರಿಸಿದರು.</p><p>ಗುಂಡ್ಲುಪೇಟೆಯ ದೇವರಾಜ ಅರಸು ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕಿನ ೧೧೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ 25 ಮಂದಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರ ಮಾಡಿದರು.</p><p>ಸಂತ್ರಸ್ತರಿಗೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಬೋಧನಾ ಆಸ್ಪತ್ರೆಯಲ್ಲಿ (ಸಿಮ್ಸ್) ವಿವಿಧ ವೃಂದದ ಉದ್ಯೋಗಗಳನ್ನು ನೀಡಲಾಗಿದೆ.</p><p>2021, ಮೇ 2ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 34 ಮಂದಿ ಆಮ್ಲಜನಕ ಸಿಗದೆ ಧಾರುಣವಾಗಿ ಮೃತಪಟ್ಟಿದ್ದರು. ದುರ್ಘಟನೆ ನಡೆದಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. </p><p>ಭಾರತ್ ಜೋಡೋ ಪಾದಯಾತ್ರೆಯ ಸಂದರ್ಭ ರಾಹುಲ್ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.</p><p>ಬಳಿಕ ಸಂತ್ರಸ್ತರು ಸರ್ಕಾರಿ ಉದ್ಯೋಗಕ್ಕಾಗಿ ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದರು. ಅಂತಿಮವಾಗಿ ಸಂತ್ರಸ್ತರ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ.</p>.ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ಕೇಂದ್ರದಿಂದ ಇ.ಡಿ ದಾಳಿ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>