<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಪ್ರಮುಖ ಧಾರ್ಮಿಕ ಸ್ಥಳ ಹಾಗೂ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತರಾಷ್ಟ್ರೀಯ ಹುಲಿ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ಶ್ರಮದಾನದ ಮೂಲಕ ಪ್ಲಾಸ್ಟಿಕ್ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಶನಿವಾರ ಬೆಳಿಗ್ಗೆ 6ಕ್ಕೆ ನಮ್ಮ ಗುಂಡ್ಲುಪೇಟೆ ತಂಡ, ಎಸ್.ಎಲ್.ವಿ ಎಂಟರ್ ಪ್ರೈಸಸ್, ಗುಂಡ್ಲುಪೇಟೆ ಶೇಖರ್ ಆಗ್ರೋ ಟ್ರೇಡರ್ಸ್ ಹಾಗೂ ಬೇಗೂರಿನ ರಾಘವೇಂದ್ರ ಎಂಟರ್ ಪ್ರೈಸಸ್ ಸಹಯೋಗದಲ್ಲಿ ಸ್ವಚ್ಛ ಕೆಲಸ ನಡೆಸಲಾಯಿತು.</p>.<p>40 ಸ್ವಯಂ ಸೇವಕರು ಬೆಟ್ಟದ ತಪ್ಪಲಿನ ವಾಹನ ನಿಲ್ದಾಣ, ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪ್ರವೇಶದ್ವಾರ, ಸಂಪರ್ಕ ರಸ್ತೆಯ ಇಕ್ಕೆಲಗಳು, ಹಗ್ಗದಹಳ್ಳ ಮತ್ತು ಕುಣಗಹಳ್ಳಿ ಸಂಪರ್ಕ ರಸ್ತೆ ಇತರೆ ಭಾಗಗಳನ್ನು ಒಳಗೊಂಡು 3 ರಿಂದ 4 ಕಿ.ಮೀ ನಷ್ಟು ನಿಗದಿತ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಲಾಯಿತು. </p>.<p>ಗಾಜಿನ ಬಾಟಲಿ, ತಂಪುಪಾನೀಯ ಟಿನ್ಗಳು, ನೀರಿನ ಕ್ಯಾನ್ ಒಳಗೊಂಡ 40 ರಿಂದ 50 ಮೂಟೆಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಯಿತು. ನಂತರ ಕೊಳೆಯುವ ಮತ್ತು ಕೊಳೆಯದ ತ್ಯಾಜ್ಯವನ್ನು ಬೇರ್ಪಡಿಸಿ ಹಂಗಳ ಗ್ರಾಮ ಪಂಚಾಯಿತಿಗೆ ನೀಡಲಾಯಿತು.</p>.<p>ಗೋಪಾಲಸ್ವಾಮಿ ಬೆಟ್ಟವನ್ನು ಜಿಲ್ಲಾಡಳಿತ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಿ ಘೋಷಣೆ ಮಾಡಿದೆ. ಈಗ ತಪ್ಪಲಿನಲ್ಲೂ ಸ್ವಯಂ ಪ್ರೇರಿತ ಶ್ರಮದಾನದ ಮೂಲಕ ನಡೆಸಿದ ಪ್ಲಾಸ್ಟಿಕ್ ಸ್ವಚ್ಛತಾ ಕಾರ್ಯ ಕೈಗೊಂಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಪ್ರಮುಖ ಧಾರ್ಮಿಕ ಸ್ಥಳ ಹಾಗೂ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತರಾಷ್ಟ್ರೀಯ ಹುಲಿ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ಶ್ರಮದಾನದ ಮೂಲಕ ಪ್ಲಾಸ್ಟಿಕ್ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಶನಿವಾರ ಬೆಳಿಗ್ಗೆ 6ಕ್ಕೆ ನಮ್ಮ ಗುಂಡ್ಲುಪೇಟೆ ತಂಡ, ಎಸ್.ಎಲ್.ವಿ ಎಂಟರ್ ಪ್ರೈಸಸ್, ಗುಂಡ್ಲುಪೇಟೆ ಶೇಖರ್ ಆಗ್ರೋ ಟ್ರೇಡರ್ಸ್ ಹಾಗೂ ಬೇಗೂರಿನ ರಾಘವೇಂದ್ರ ಎಂಟರ್ ಪ್ರೈಸಸ್ ಸಹಯೋಗದಲ್ಲಿ ಸ್ವಚ್ಛ ಕೆಲಸ ನಡೆಸಲಾಯಿತು.</p>.<p>40 ಸ್ವಯಂ ಸೇವಕರು ಬೆಟ್ಟದ ತಪ್ಪಲಿನ ವಾಹನ ನಿಲ್ದಾಣ, ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪ್ರವೇಶದ್ವಾರ, ಸಂಪರ್ಕ ರಸ್ತೆಯ ಇಕ್ಕೆಲಗಳು, ಹಗ್ಗದಹಳ್ಳ ಮತ್ತು ಕುಣಗಹಳ್ಳಿ ಸಂಪರ್ಕ ರಸ್ತೆ ಇತರೆ ಭಾಗಗಳನ್ನು ಒಳಗೊಂಡು 3 ರಿಂದ 4 ಕಿ.ಮೀ ನಷ್ಟು ನಿಗದಿತ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಲಾಯಿತು. </p>.<p>ಗಾಜಿನ ಬಾಟಲಿ, ತಂಪುಪಾನೀಯ ಟಿನ್ಗಳು, ನೀರಿನ ಕ್ಯಾನ್ ಒಳಗೊಂಡ 40 ರಿಂದ 50 ಮೂಟೆಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಯಿತು. ನಂತರ ಕೊಳೆಯುವ ಮತ್ತು ಕೊಳೆಯದ ತ್ಯಾಜ್ಯವನ್ನು ಬೇರ್ಪಡಿಸಿ ಹಂಗಳ ಗ್ರಾಮ ಪಂಚಾಯಿತಿಗೆ ನೀಡಲಾಯಿತು.</p>.<p>ಗೋಪಾಲಸ್ವಾಮಿ ಬೆಟ್ಟವನ್ನು ಜಿಲ್ಲಾಡಳಿತ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಿ ಘೋಷಣೆ ಮಾಡಿದೆ. ಈಗ ತಪ್ಪಲಿನಲ್ಲೂ ಸ್ವಯಂ ಪ್ರೇರಿತ ಶ್ರಮದಾನದ ಮೂಲಕ ನಡೆಸಿದ ಪ್ಲಾಸ್ಟಿಕ್ ಸ್ವಚ್ಛತಾ ಕಾರ್ಯ ಕೈಗೊಂಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>