<p><strong>ಚಾಮರಾಜನಗರ</strong>: ‘ಹುಲಿಗಳ ಸಾವಿನ ವಿಚಾರವನ್ನೇ ನೆಪವಾಗಿಸಿಕೊಂಡು ಅರಣ್ಯಕ್ಕೆ ಜಾನುವಾರುಗಳ ಪ್ರವೇಶ ನಿರ್ಬಂಧಿಸಲು ಮುಂದಾಗಿರುವ ರಾಜ್ಯ ಸರ್ಕಾರ ಕಾಡಂಚಿನ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದೆ’ ಎಂದು ರೈತರು ಹಾಗೂ ಅರಣ್ಯವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ರೈತರು ಹಾಗೂ ಕಾಡು ಜೊತೆಯಾಗಿ ಬೆಳೆಯಬೇಕೇ ಹೊರತು ನಿರ್ಬಂಧ ವಿಧಿಸುವುದು ಸಲ್ಲದು’ ಎಂದು ಸಾಮೂಹಿಕ ನಾಯಕತ್ವದ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷೀಯ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಕಾಡಂಚಿನ ರೈತರು ಜೀವನೋಪಾಯಕ್ಕಾಗಿ ಕುರಿ, ಮೇಕೆ, ದನ ಸಾಕುತ್ತಿದ್ದಾರೆ. ತುಂಡು ಭೂಮಿಯಲ್ಲಿ ಜಾನುವಾರುಗಳಿಗೆ ಮೇವು ಒದಗಿಸಲಾಗದೆ ಕಾಡಿನೊಳಗೆ ಮೇಯಿಸುವುದು ರೂಢಿ. ಅರಣ್ಯದೊಳಗೆ ಜಾನುವಾರುಗಳ ಪ್ರವೇಶ ನಿರ್ಬಂಧಿಸಿದರೆ ದನ–ಕರುಗಳು ಮೇವಿಲ್ಲದೆ ಸಾಯಬೇಕಾಗುತ್ತದೆ’ ಎಂದಿದ್ದಾರೆ.</p>.<p>‘ಅರಣ್ಯ ಉಳಿಸುವ ಕಾಳಜಿ ಇದ್ದರೆ ಸರ್ಕಾರ ಪ್ರಾಣಿ ಬೇಟೆ ಹಾಗೂ ಮರಗಳ ಕಳ್ಳಸಾಗಾಟ ತಡೆಯಲಿ. ‘ಪರಿಸರ ವಾದಿ’ಗಳ ಮುಖವಾಡ ಹಾಕಿಕೊಂಡವರ ಒತ್ತಡಕ್ಕೆ ಮಣಿದು ರೈತರ ಜೀವನದ ಜೊತೆ ಚೆಲ್ಲಾಟವಾಡಬಾರದು’ ಎಂದಿದ್ದಾರೆ. </p>.<p>‘ಹೂಗ್ಯಂ ವಲಯದಲ್ಲಿ ಇತ್ತೀಚೆಗೆ ಐದು ಹುಲಿಗಳ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಈಶ್ವರ ಖಂಡ್ರೆ ನೇರ ಹೊಣೆಗಾರರು. ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಸ್ಥಳೀಯ ರೈತರ ಮೇಲೆ ಗದಾಪ್ರಹಾರ ಮಾಡುತ್ತಿದೆ’ ಎಂದು ರೈತ ಮಾದೇಶ್ ಹೇಳಿದರು.</p>.<p>‘ತಮಿಳುನಾಡಿನಿಂದ ಅಕ್ರಮವಾಗಿ ಜಾನುವಾರುಗಳು ರಾಜ್ಯದ ಕಾಡಿನೊಳಗೆ ಪ್ರವೇಶಿಸುತ್ತಿದ್ದರೆ ಕಡಿವಾಣ ಹಾಕಲಿ, ಗಡಿ ಭಾಗದಲ್ಲಿ ಬೇಲಿ ಅಳವಡಿಕೆ ಮಾಡಲಿ, ಬದಲಾಗಿ ಕಾಡಿನೊಳಗೆ ಸ್ಥಳೀಯರ ಜಾನುವಾರುಗಳ ಪ್ರವೇಶಕ್ಕೆ ನಿರ್ಬಂಧ ಹೇರಬಾರದು’ ಎಂದು ರಂಗೇಗೌಡ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ‘ಹುಲಿಗಳ ಸಾವಿನ ವಿಚಾರವನ್ನೇ ನೆಪವಾಗಿಸಿಕೊಂಡು ಅರಣ್ಯಕ್ಕೆ ಜಾನುವಾರುಗಳ ಪ್ರವೇಶ ನಿರ್ಬಂಧಿಸಲು ಮುಂದಾಗಿರುವ ರಾಜ್ಯ ಸರ್ಕಾರ ಕಾಡಂಚಿನ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದೆ’ ಎಂದು ರೈತರು ಹಾಗೂ ಅರಣ್ಯವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ರೈತರು ಹಾಗೂ ಕಾಡು ಜೊತೆಯಾಗಿ ಬೆಳೆಯಬೇಕೇ ಹೊರತು ನಿರ್ಬಂಧ ವಿಧಿಸುವುದು ಸಲ್ಲದು’ ಎಂದು ಸಾಮೂಹಿಕ ನಾಯಕತ್ವದ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷೀಯ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಕಾಡಂಚಿನ ರೈತರು ಜೀವನೋಪಾಯಕ್ಕಾಗಿ ಕುರಿ, ಮೇಕೆ, ದನ ಸಾಕುತ್ತಿದ್ದಾರೆ. ತುಂಡು ಭೂಮಿಯಲ್ಲಿ ಜಾನುವಾರುಗಳಿಗೆ ಮೇವು ಒದಗಿಸಲಾಗದೆ ಕಾಡಿನೊಳಗೆ ಮೇಯಿಸುವುದು ರೂಢಿ. ಅರಣ್ಯದೊಳಗೆ ಜಾನುವಾರುಗಳ ಪ್ರವೇಶ ನಿರ್ಬಂಧಿಸಿದರೆ ದನ–ಕರುಗಳು ಮೇವಿಲ್ಲದೆ ಸಾಯಬೇಕಾಗುತ್ತದೆ’ ಎಂದಿದ್ದಾರೆ.</p>.<p>‘ಅರಣ್ಯ ಉಳಿಸುವ ಕಾಳಜಿ ಇದ್ದರೆ ಸರ್ಕಾರ ಪ್ರಾಣಿ ಬೇಟೆ ಹಾಗೂ ಮರಗಳ ಕಳ್ಳಸಾಗಾಟ ತಡೆಯಲಿ. ‘ಪರಿಸರ ವಾದಿ’ಗಳ ಮುಖವಾಡ ಹಾಕಿಕೊಂಡವರ ಒತ್ತಡಕ್ಕೆ ಮಣಿದು ರೈತರ ಜೀವನದ ಜೊತೆ ಚೆಲ್ಲಾಟವಾಡಬಾರದು’ ಎಂದಿದ್ದಾರೆ. </p>.<p>‘ಹೂಗ್ಯಂ ವಲಯದಲ್ಲಿ ಇತ್ತೀಚೆಗೆ ಐದು ಹುಲಿಗಳ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಈಶ್ವರ ಖಂಡ್ರೆ ನೇರ ಹೊಣೆಗಾರರು. ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಸ್ಥಳೀಯ ರೈತರ ಮೇಲೆ ಗದಾಪ್ರಹಾರ ಮಾಡುತ್ತಿದೆ’ ಎಂದು ರೈತ ಮಾದೇಶ್ ಹೇಳಿದರು.</p>.<p>‘ತಮಿಳುನಾಡಿನಿಂದ ಅಕ್ರಮವಾಗಿ ಜಾನುವಾರುಗಳು ರಾಜ್ಯದ ಕಾಡಿನೊಳಗೆ ಪ್ರವೇಶಿಸುತ್ತಿದ್ದರೆ ಕಡಿವಾಣ ಹಾಕಲಿ, ಗಡಿ ಭಾಗದಲ್ಲಿ ಬೇಲಿ ಅಳವಡಿಕೆ ಮಾಡಲಿ, ಬದಲಾಗಿ ಕಾಡಿನೊಳಗೆ ಸ್ಥಳೀಯರ ಜಾನುವಾರುಗಳ ಪ್ರವೇಶಕ್ಕೆ ನಿರ್ಬಂಧ ಹೇರಬಾರದು’ ಎಂದು ರಂಗೇಗೌಡ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>