<p>ಚಾಮರಾಜನಗರ: ವಿವಿಧ ಗ್ರಾಮಗಳಲ್ಲಿ ₹2.40 ಕೋಟಿ ವೆಚ್ಚದಡಿ ನಿರ್ಮಿಸಲಾಗುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುರುವಾರ ಭೂಮಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಅನುದಾನದಡಿ ಯಡಿಯೂರು ಗ್ರಾಮಕ್ಕೆ ₹50 ಲಕ್ಷ, ಯಲಕ್ಕೂರು, ಕರಡಿಮೋಳೆ, ಸಪ್ಪಯ್ಯನಪುರ ಸಂಪರ್ಕ ರಸ್ತೆಗೆ ₹50 ಲಕ್ಷ, ಗುಂಡ್ಲುಪೇಟೆ ಮುಖ್ಯ ರಸ್ತೆಯಿಂದ ಮಲ್ಲಯ್ಯನಪುರ ಆರ್ಟಿಒ ಕಚೇರಿ ಸಂಪರ್ಕ ರಸ್ತೆಗೆ ₹70 ಲಕ್ಷ, ಗುಂಡ್ಲುಪೇಟೆ ಮುಖ್ಯ ರಸ್ತೆಯಿಂದಕಡುವಿನಕಟ್ಟೆಹುಂಡಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ₹70 ಲಕ್ಷ ಮಂಜೂರಾಗಿದೆ.</p>.<p>‘ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಸರ್ಕಾರ ಮಂಜೂರು ಮಾಡುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ’ ಎಂದರು.</p>.<p>ಮುಖಂಡ ಎಸ್ಪಿಕೆ ಉಮೇಶ್, ಸೋಮಣ್ಣೇಗೌಡ, ಕುಮಾರ್, ಮಹದೇವಸ್ವಾಮಿ, ನಾಗರಾಜು, ನಟರಾಜು, ಸುಬ್ಬೇಗೌಡ, ಪ್ರಕಾಶ್, ಶಿವಣ್ಣ, ಮಂಜು, ಅರುಣ್, ಮಹದೇವಪ್ರಸಾದ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-37-1043146354</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ವಿವಿಧ ಗ್ರಾಮಗಳಲ್ಲಿ ₹2.40 ಕೋಟಿ ವೆಚ್ಚದಡಿ ನಿರ್ಮಿಸಲಾಗುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುರುವಾರ ಭೂಮಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಅನುದಾನದಡಿ ಯಡಿಯೂರು ಗ್ರಾಮಕ್ಕೆ ₹50 ಲಕ್ಷ, ಯಲಕ್ಕೂರು, ಕರಡಿಮೋಳೆ, ಸಪ್ಪಯ್ಯನಪುರ ಸಂಪರ್ಕ ರಸ್ತೆಗೆ ₹50 ಲಕ್ಷ, ಗುಂಡ್ಲುಪೇಟೆ ಮುಖ್ಯ ರಸ್ತೆಯಿಂದ ಮಲ್ಲಯ್ಯನಪುರ ಆರ್ಟಿಒ ಕಚೇರಿ ಸಂಪರ್ಕ ರಸ್ತೆಗೆ ₹70 ಲಕ್ಷ, ಗುಂಡ್ಲುಪೇಟೆ ಮುಖ್ಯ ರಸ್ತೆಯಿಂದಕಡುವಿನಕಟ್ಟೆಹುಂಡಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ₹70 ಲಕ್ಷ ಮಂಜೂರಾಗಿದೆ.</p>.<p>‘ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಸರ್ಕಾರ ಮಂಜೂರು ಮಾಡುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ’ ಎಂದರು.</p>.<p>ಮುಖಂಡ ಎಸ್ಪಿಕೆ ಉಮೇಶ್, ಸೋಮಣ್ಣೇಗೌಡ, ಕುಮಾರ್, ಮಹದೇವಸ್ವಾಮಿ, ನಾಗರಾಜು, ನಟರಾಜು, ಸುಬ್ಬೇಗೌಡ, ಪ್ರಕಾಶ್, ಶಿವಣ್ಣ, ಮಂಜು, ಅರುಣ್, ಮಹದೇವಪ್ರಸಾದ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-37-1043146354</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>