ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಚಾಮರಾಜನಗರ: ಪರೀಕ್ಷೆ ಬರೆಯಲು ‘ಕಾಡಿನ ಮಕ್ಕಳು’ ಸಜ್ಜು

ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದ ಮಕ್ಕಳ ಮೂರು ತಿಂಗಳ ತರಬೇತಿ ಕೊನೆಯ ಹಂತಕ್ಕೆ
ಸೂರ್ಯನಾರಾಯಣ ವಿ.
Published : 20 ಫೆಬ್ರುವರಿ 2024, 6:24 IST
Last Updated : 20 ಫೆಬ್ರುವರಿ 2024, 6:24 IST
ಫಾಲೋ ಮಾಡಿ
Comments
ಸಿ.ಟಿ.ಶಿಲ್ಪಾ ನಾಗ್‌
ಸಿ.ಟಿ.ಶಿಲ್ಪಾ ನಾಗ್‌
3 ತಿಂಗಳ ತರಬೇತಿ ಈ ತಿಂಗಳು ಮುಗಿಯಲಿದೆ. ಪರೀಕ್ಷೆಯವರೆಗೂ ಮಕ್ಕಳನ್ನು ಹಾಸ್ಟೆಲ್‌ನಲ್ಲೇ ಇರಿಸುವ ಬಗ್ಗೆ ಶೀಘ್ರ ತೀರ್ಮಾನಿಸುತ್ತೇವೆ
ಸಿ.ಟಿ.ಶಿಲ್ಪಾ ನಾಗ್‌ ಜಿಲ್ಲಾಧಿಕಾರಿ
ಮಕ್ಕಳ ಆತ್ಮವಿಶ್ವಾಸ ಹೆಚ್ಚಿದೆ:
ಡಿ.ಸಿ ತರಬೇತಿ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್‌ ‘ಎರಡೂವರೆ ತಿಂಗಳಲ್ಲಿ ಮಕ್ಕಳ ಆತ್ಮವಿಶ್ವಾಸ ಹೆಚ್ಚಾಗಿದೆ. ತರಬೇತಿ ಶುರುವಾಗಿದ್ದ ಸಂದರ್ಭದಲ್ಲಿ ಮಾತನಾಡಲು ಅಂಜುತ್ತಿದ್ದರು. ಈಗ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಾವು ನಡೆಸಿದ ಪರೀಕ್ಷೆಯಲ್ಲಿ ಕೆಲವರು ಅತ್ಯುತ್ತಮವಾಗಿ ಅಂಕ ಗಳಿಸಿದ್ದಾರೆ. ಎಲ್ಲರೂ ಡಿಸ್ಟಿಂಕ್ಷನ್‌ ಬರಬೇಕು ಎಂಬುದು ನಮ್ಮ ಗುರಿಯಲ್ಲ. ಎಸ್ಎಸ್‌ಎಲ್‌ಸಿ ಉತ್ತೀರ್ಣರಾಗಿ ಅವರು ಉನ್ನತ ಶಿಕ್ಷಣ ಪಡೆಯಬೇಕು ಎಂಬುದು ನಮ್ಮ ಆಶಯ’ ಎಂದರು.  ‘ರಾಜ್ಯದಲ್ಲೇ ಇದು ಮೊದಲ ಪ್ರಯತ್ನ. ಯಶಸ್ವಿಯಾದರೆ ಇತರ ಜಿಲ್ಲೆಗಳಲ್ಲೂ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇರುತ್ತದೆ ಅಥವಾ ಸರ್ಕಾರವೇ ಈ ಬಗ್ಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲೂ ಬಹುದು. ಬುಡಕಟ್ಟು ಸಮುದಾಯದ ಕೆಲವು ಕುಟುಂಬಗಳು ತುಂಬಾ ಬಡತನದಲ್ಲಿದೆ. ಮಕ್ಕಳನ್ನು ಓದಿಸುವ ಶಕ್ತಿಯೂ ಅವರಿಗಿಲ್ಲ. ಶಿಕ್ಷಣದ ಪ್ರಾಮುಖ್ಯವೂ ಅವರಿಗೆ ಗೊತ್ತಿಲ್ಲ. ಅವರಿಗೆ ಒಂದು ರೂಪಾಯಿಯೂ ಖರ್ಚಾಗದಂತೆ ಈ ತರಬೇತಿ ನೀಡಲಾಗುತ್ತಿದೆ. ಮಕ್ಕಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ವಿಶ್ವಾಸ ಇದೆ’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT