<p><strong>ಚಾಮರಾಜನಗರ:</strong> ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಅಂಗವಾಗಿರುವ ಮಾಧ್ಯಮ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಂತಹ ಕೆಲಸ ಮಾಡಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಶನಿವಾರ ಹೇಳಿದರು. </p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನಗರದಲ್ಲಿ ಹಮ್ಮಿಕೊಂಡಿದ್ದ ಸಂಘದ ಬೆಳ್ಳಿ ಮಹೋತ್ಸವ, ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. </p>.<p>‘ಪತ್ರಕರ್ತರು ಸಮಾಜವನ್ನು ಸರಿದಾರಿಗೆ ತೆಗೆದುಕೊಂಡು ಹೋಗುವಂತಹವರು. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಗುಣವನ್ನು ಪತ್ರಿಕಾ ಮಾದ್ಯಮ ಹೊಂದಿದೆ. ದ್ಯಶ್ಯ ಮಾಧ್ಯಮ ಸುದ್ದಿಗಳನ್ನು ಹೆಚ್ಚು ವೈಭವೀಕರಿಸುತ್ತಿವೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ’ ಎಂದರು. </p>.<p>ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ‘ಅಧಿಕಾರಿಗಳು, ರಾಜಕಾರಣಿಗಳು ತಪ್ಪು ದಾರಿಯಲ್ಲಿ ಹೋಗುತ್ತಿದ್ದರೆ ಪತ್ರಕರ್ತರನ್ನು ಅವರನ್ನು ತಮ್ಮ ವರದಿ ಮೂಲಕ ಎಚ್ಚರಿಸಿ ಸಮಾಜದ ಅಭಿವೃದ್ದಿಗೆ ದುಡಿಯುತ್ತಾರೆ’ ಎಂದರು. </p>.<p>‘ಸಮಾಜವನ್ನು ಉತ್ತಮ ದಿಕ್ಕಿನಲ್ಲಿ ಕೊಂಡೊಯ್ಯುವುದು, ದೇಶವನ್ನು ಕಲುಷಿತ ವಾತಾವರಣದಿಂದ ಒಳ್ಳೆಯ ದಿಕ್ಕಿನೆಡೆಗೆ ಸಾಗಿಸುವುದು ಮಾಧ್ಯಮಗಳ ಕೆಲಸ. ಅದಕ್ಕೆ ಸಹಕಾರ ನೀಡುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದರು. </p>.<p>ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ‘ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾಧ್ಯಮವರ ಮಾರ್ಗದರ್ಶನವೂ ಅಗತ್ಯ. ಮಾಧ್ಯಮದ ಮಿತ್ರರು ಹಾಗೂ ಆಡಳಿತದ ಅಧಿಕಾರಿಗಳ ನಡುವೆ ಸಮನ್ವಯತೆ ಇರಬೇಕು. ಇಲ್ಲಿ ಉತ್ತಮ ಕೆಲಸಗಳಾಗಬೇಕಾದರೆ ಮಾಧ್ಯಮದವರ ಸಹಕಾರ, ಮಾರ್ಗದರ್ಶನ ಜಿಲ್ಲಾಡಳಿತಕ್ಕೆ ಬೇಕು’ ಎಂದರು. </p>.<p>ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿದರು. </p>.<p>‘ಪ್ರಜಾವಾಣಿ’ ಸಂತೇಮರಹಳ್ಳಿ ವರದಿಗಾರ ಮಹದೇವ್ ಹೆಗ್ಗವಾಡಿಪುರ ಸೇರಿದಂತೆ 10 ಮಂದಿ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪತ್ರಕರ್ತರು, ಕುಟುಂಬದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.</p>.<p>ಸಂಘದ ನಿರ್ದೇಶಕರಾದ ಅಬ್ರಾಹಂ ಡಿಸಿಲ್ವಾ, ಎಸ್.ಎಂ.ನಂದೀಶ್ ಮತ್ತು ರಾಜ್ಯ ಪರಿಷತ್ ಸದಸ್ಯ ಎಂ.ಈ.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. </p>.<p>ವರ್ತಕರ ಸಂಘದ ಅಧ್ಯಕ್ಷ ಎಚ್.ಬಿ.ರಾಜಶೇಖರ್, ಜಿಲ್ಲಾ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ, ಪ್ರಧಾನ ಕಾರ್ಯದರ್ಶಿ ಗೌಡಹಳ್ಳಿ ಮಹೇಶ್ ಸಂಘದ ಪದಾಧಿಕಾರಿಗಳು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಅಂಗವಾಗಿರುವ ಮಾಧ್ಯಮ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಂತಹ ಕೆಲಸ ಮಾಡಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಶನಿವಾರ ಹೇಳಿದರು. </p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನಗರದಲ್ಲಿ ಹಮ್ಮಿಕೊಂಡಿದ್ದ ಸಂಘದ ಬೆಳ್ಳಿ ಮಹೋತ್ಸವ, ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. </p>.<p>‘ಪತ್ರಕರ್ತರು ಸಮಾಜವನ್ನು ಸರಿದಾರಿಗೆ ತೆಗೆದುಕೊಂಡು ಹೋಗುವಂತಹವರು. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಗುಣವನ್ನು ಪತ್ರಿಕಾ ಮಾದ್ಯಮ ಹೊಂದಿದೆ. ದ್ಯಶ್ಯ ಮಾಧ್ಯಮ ಸುದ್ದಿಗಳನ್ನು ಹೆಚ್ಚು ವೈಭವೀಕರಿಸುತ್ತಿವೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ’ ಎಂದರು. </p>.<p>ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ‘ಅಧಿಕಾರಿಗಳು, ರಾಜಕಾರಣಿಗಳು ತಪ್ಪು ದಾರಿಯಲ್ಲಿ ಹೋಗುತ್ತಿದ್ದರೆ ಪತ್ರಕರ್ತರನ್ನು ಅವರನ್ನು ತಮ್ಮ ವರದಿ ಮೂಲಕ ಎಚ್ಚರಿಸಿ ಸಮಾಜದ ಅಭಿವೃದ್ದಿಗೆ ದುಡಿಯುತ್ತಾರೆ’ ಎಂದರು. </p>.<p>‘ಸಮಾಜವನ್ನು ಉತ್ತಮ ದಿಕ್ಕಿನಲ್ಲಿ ಕೊಂಡೊಯ್ಯುವುದು, ದೇಶವನ್ನು ಕಲುಷಿತ ವಾತಾವರಣದಿಂದ ಒಳ್ಳೆಯ ದಿಕ್ಕಿನೆಡೆಗೆ ಸಾಗಿಸುವುದು ಮಾಧ್ಯಮಗಳ ಕೆಲಸ. ಅದಕ್ಕೆ ಸಹಕಾರ ನೀಡುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದರು. </p>.<p>ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ‘ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾಧ್ಯಮವರ ಮಾರ್ಗದರ್ಶನವೂ ಅಗತ್ಯ. ಮಾಧ್ಯಮದ ಮಿತ್ರರು ಹಾಗೂ ಆಡಳಿತದ ಅಧಿಕಾರಿಗಳ ನಡುವೆ ಸಮನ್ವಯತೆ ಇರಬೇಕು. ಇಲ್ಲಿ ಉತ್ತಮ ಕೆಲಸಗಳಾಗಬೇಕಾದರೆ ಮಾಧ್ಯಮದವರ ಸಹಕಾರ, ಮಾರ್ಗದರ್ಶನ ಜಿಲ್ಲಾಡಳಿತಕ್ಕೆ ಬೇಕು’ ಎಂದರು. </p>.<p>ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿದರು. </p>.<p>‘ಪ್ರಜಾವಾಣಿ’ ಸಂತೇಮರಹಳ್ಳಿ ವರದಿಗಾರ ಮಹದೇವ್ ಹೆಗ್ಗವಾಡಿಪುರ ಸೇರಿದಂತೆ 10 ಮಂದಿ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪತ್ರಕರ್ತರು, ಕುಟುಂಬದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.</p>.<p>ಸಂಘದ ನಿರ್ದೇಶಕರಾದ ಅಬ್ರಾಹಂ ಡಿಸಿಲ್ವಾ, ಎಸ್.ಎಂ.ನಂದೀಶ್ ಮತ್ತು ರಾಜ್ಯ ಪರಿಷತ್ ಸದಸ್ಯ ಎಂ.ಈ.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. </p>.<p>ವರ್ತಕರ ಸಂಘದ ಅಧ್ಯಕ್ಷ ಎಚ್.ಬಿ.ರಾಜಶೇಖರ್, ಜಿಲ್ಲಾ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ, ಪ್ರಧಾನ ಕಾರ್ಯದರ್ಶಿ ಗೌಡಹಳ್ಳಿ ಮಹೇಶ್ ಸಂಘದ ಪದಾಧಿಕಾರಿಗಳು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>