<p>ಕೊಳ್ಳೇಗಾಲ: ಡಾ.ಬಿ.ಆರ್ ಅಂಬೇಡ್ಕರ್ ಅವರು ವಿಶ್ವವೇ ಮೆಚ್ಚುವ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ಶಾಸಕ ಎಆರ್ ಕೃಷ್ಣಮೂರ್ತಿ ಹೇಳಿದರು.</p>.<p>ನಗರದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪರಿಶಿಷ್ಟ ಜಾತಿ ಮೀಸಲಾತಿ ಕುರಿತು ಉಂಟಾಗಿರುವ ಗೊಂದಲದ ವಾತಾವರಣದ ಬಗ್ಗೆ ವಿಷಾದಿಸಿದ ಅವರು ಅಂಬೇಡ್ಕರ್ ಮೀಸಲಾತಿ ಕೊಟ್ಟಾಗ ಪರಿಶಿಷ್ಟ ಜಾತಿಯಲ್ಲಿ 6 ಜಾತಿ ಮಾತ್ರ ಇತ್ತು. ಇಂದು ನೂರಕ್ಕೂ ಹೆಚ್ಚು ಜಾತಿಗಳು ಸೇರ್ಪಡೆಯಾಗಿ ಅಂದು ಅಸ್ಪೃಶ್ಯತೆ ಒಳಾಗಿದ್ದ ಜನಾಂಗಕ್ಕೆ ಅನ್ಯಾಯವಾಗಿದೆ. ಒಗ್ಗಟ್ಟಾಗಿ ಹೋರಾಟ ಮಾಡುವ ಅನಿರ್ವಾಯತೆ ಇದೆ ಎಂದರು.</p>.<p>ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಜಾರಿಗೆ ತಂದಿರುವ ಸಂವಿಧಾನವನ್ನು ಸಂರಕ್ಷಿಸುವ ಗುರಿ ನಮ್ಮದಾಗಿರಬೇಕು ಎಂದರು. ಮೈಸೂರಿನ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ನಾಗರಾಜು ಮುಖ್ಯ ಭಾಷಣಕಾರ ಮಾಡಿದರು.</p>.<p>ಪ್ರತಿಭಾವಂತ ಮಕ್ಕಳು, ಪ್ರಬಂಧ ಸ್ಪರ್ಧೆಯ ವಿಜೇತ ಮಕ್ಕಳಿಗೆ ಸನ್ಮಾನಿಸಿದರು. ಅಂಬೇಡ್ಕರ್ ಸಂಘದ ಸಂಸ್ಥಾಪಕರು, ನಿವೃತ್ತ ಅಧಿಕಾರಿಗಳನ್ನು ಗೌರವಿಸಿದರು. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಅಧ್ಯಕ್ಷರಾಗಿರುವ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಅಭಿನಂದಿಸಿದರು.</p>.<p>ಜೇತವನ ಬುದ್ಧ ವಿಹಾರ ಕೇಂದ್ರದ ಮನೋರಖಿತ ಬಂತೇಜಿ, ತಹಶೀಲ್ದಾರ್ ಬಸವರಾಜು, ತಾಲ್ಲೂಕು ಪಂಚಾಯಿತಿ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಬಿಇಒ ಮಂಜುಳಾ, ನಗರಸಭೆ ಪೌರಾಯುಕ್ತೆ ರುದ್ರಮ್ಮ ಶರಣಯ್ಯ, ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ, ಡಾ.ಲೋಕೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘ ಅಧ್ಯಕ್ಷ ಆನಂದಮೂರ್ತಿ ಇದ್ದರು.</p>.<p>ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಶಾಸಕ ಎಆರ್ ಕೃಷ್ಣಮೂರ್ತಿ, ಅಧಿಕಾರಿಗಳು ಪುಷ್ಪಾರ್ಚನೆ ಮಾಡಿದರು. ಅಂಬೇಡ್ಕರ್ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಇಟ್ಟು ಮೆರವಣಿಗೆ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-37-90263982</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಡಾ.ಬಿ.ಆರ್ ಅಂಬೇಡ್ಕರ್ ಅವರು ವಿಶ್ವವೇ ಮೆಚ್ಚುವ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ಶಾಸಕ ಎಆರ್ ಕೃಷ್ಣಮೂರ್ತಿ ಹೇಳಿದರು.</p>.<p>ನಗರದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪರಿಶಿಷ್ಟ ಜಾತಿ ಮೀಸಲಾತಿ ಕುರಿತು ಉಂಟಾಗಿರುವ ಗೊಂದಲದ ವಾತಾವರಣದ ಬಗ್ಗೆ ವಿಷಾದಿಸಿದ ಅವರು ಅಂಬೇಡ್ಕರ್ ಮೀಸಲಾತಿ ಕೊಟ್ಟಾಗ ಪರಿಶಿಷ್ಟ ಜಾತಿಯಲ್ಲಿ 6 ಜಾತಿ ಮಾತ್ರ ಇತ್ತು. ಇಂದು ನೂರಕ್ಕೂ ಹೆಚ್ಚು ಜಾತಿಗಳು ಸೇರ್ಪಡೆಯಾಗಿ ಅಂದು ಅಸ್ಪೃಶ್ಯತೆ ಒಳಾಗಿದ್ದ ಜನಾಂಗಕ್ಕೆ ಅನ್ಯಾಯವಾಗಿದೆ. ಒಗ್ಗಟ್ಟಾಗಿ ಹೋರಾಟ ಮಾಡುವ ಅನಿರ್ವಾಯತೆ ಇದೆ ಎಂದರು.</p>.<p>ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಜಾರಿಗೆ ತಂದಿರುವ ಸಂವಿಧಾನವನ್ನು ಸಂರಕ್ಷಿಸುವ ಗುರಿ ನಮ್ಮದಾಗಿರಬೇಕು ಎಂದರು. ಮೈಸೂರಿನ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ನಾಗರಾಜು ಮುಖ್ಯ ಭಾಷಣಕಾರ ಮಾಡಿದರು.</p>.<p>ಪ್ರತಿಭಾವಂತ ಮಕ್ಕಳು, ಪ್ರಬಂಧ ಸ್ಪರ್ಧೆಯ ವಿಜೇತ ಮಕ್ಕಳಿಗೆ ಸನ್ಮಾನಿಸಿದರು. ಅಂಬೇಡ್ಕರ್ ಸಂಘದ ಸಂಸ್ಥಾಪಕರು, ನಿವೃತ್ತ ಅಧಿಕಾರಿಗಳನ್ನು ಗೌರವಿಸಿದರು. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಅಧ್ಯಕ್ಷರಾಗಿರುವ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಅಭಿನಂದಿಸಿದರು.</p>.<p>ಜೇತವನ ಬುದ್ಧ ವಿಹಾರ ಕೇಂದ್ರದ ಮನೋರಖಿತ ಬಂತೇಜಿ, ತಹಶೀಲ್ದಾರ್ ಬಸವರಾಜು, ತಾಲ್ಲೂಕು ಪಂಚಾಯಿತಿ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಬಿಇಒ ಮಂಜುಳಾ, ನಗರಸಭೆ ಪೌರಾಯುಕ್ತೆ ರುದ್ರಮ್ಮ ಶರಣಯ್ಯ, ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ, ಡಾ.ಲೋಕೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘ ಅಧ್ಯಕ್ಷ ಆನಂದಮೂರ್ತಿ ಇದ್ದರು.</p>.<p>ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಶಾಸಕ ಎಆರ್ ಕೃಷ್ಣಮೂರ್ತಿ, ಅಧಿಕಾರಿಗಳು ಪುಷ್ಪಾರ್ಚನೆ ಮಾಡಿದರು. ಅಂಬೇಡ್ಕರ್ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಇಟ್ಟು ಮೆರವಣಿಗೆ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-37-90263982</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>