<p>ಸಂತೇಮರಹಳ್ಳಿ: ‘ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬಸವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಎಲ್ಲ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಹಾಗೂ ಬಸವಣ್ಣನ ಅನುಯಾಯಿಗಳು ಭಾಗವಹಿಸಬೇಕು’ ಎಂದು ಬಸವ ಬಳಗದ ಒಕ್ಕೂಟದ ಅಧ್ಯಕ್ಷ ಪಿ. ಮರಿಸ್ವಾಮಿ ಮನವಿ ಮಾಡಿದರು.</p>.<p>ಇಲ್ಲಿನ ಶಿವಕುಮಾರಸ್ವಾಮಿ ವೃತ್ತದಲ್ಲಿ ಹೋಬಳಿ ವ್ಯಾಪ್ತಿಯ ಪ್ರಚಾರಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಚಾಮರಾಜನಗರದ ಸಿದ್ದಮಲ್ಲೇಶ್ವರ ವಿರಕ್ತಮಠ ಹಾಗೂ ಬಸವ ಬಳಗಗಳ ಒಕ್ಕೂಟದ ವತಿಯಿಂದ ಮೇ 22ರಂದು ನಡೆಯಲಿರುವ ಸಾಂಸ್ಕೃತಿಕ ನಾಯಕ ಹಾಗೂ ವಿಶ್ವಗುರು ಬಸವೇಶ್ವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ’ ಎಂದರು.</p>.<p>‘ಕಾರ್ಯಕ್ರಮದಲ್ಲಿ ಒಂದು ವಾರ ಜಿಲ್ಲೆಯ ಐದೂ ತಾಲ್ಲೂಕುಗಳಲ್ಲಿ ಪ್ರಚಾರ ನಡೆಸಲಾಗುತ್ತದೆ ’ ಎಂದು ಮನವಿ ಮಾಡಿದರು.</p>.<p>ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ‘ಸಿದ್ದಮಲ್ಲೇಶ್ವರ ವಿರಕ್ತಮಠದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬಸವ ಜಯಂತಿ ನಡೆಯಲಿದೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಹಾಗೂ ಜಿಲ್ಲೆಯ ಎಲ್ಲ ಮಠಾಧಿಪತಿಗಳ ನೇತೃತ್ವದಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಲಿದೆ’ ಎಂದರು.</p>.<p>ಮುಖಂಡ ಎನ್ರಿಚ್ ಮಹದೇವಸ್ವಾಮಿ ಮಾತನಾಡಿ, ಪ್ರತಿ ಮನೆಗಳಿಗೂ ಕರಪತ್ರ ತಲುಪಿಸುವ ಜತೆಗೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಪ್ರದಾನ ಕಾರ್ಯದರ್ಶಿ ದೊಡ್ಡರಾಯಪೇಟೆ ಗಿರೀಶ್, ಜಿಲ್ಲಾ ನಿರ್ದೇಶಕ ಕಾವುದವಾಡಿ ಗುರು, ಸುಧಾ ಮಲ್ಲಣ್ಣ, ಕೆ.ವೀರಭದ್ರಸ್ವಾಮಿ, ಆಲೂರು ಪ್ರದೀಪ್, ಶಿವಶಂಕರ್, ಶಂಕರ್ಮೂರ್ತಿ, ಹೊನ್ನೂರು ಬಸವಣ್ಣ, ಹೆಗ್ಗೋಠಾರ ವಿಜಯ್, ಆಲ್ದೂರು ರಾಜಶೇಖರ್, ರಮೇಶ್ಬಾಬು, ಆಲೂರು ಬಾಬು, ವಕೀಲ ಪೃಥ್ವಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-37-2119173228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಮರಹಳ್ಳಿ: ‘ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬಸವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಎಲ್ಲ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಹಾಗೂ ಬಸವಣ್ಣನ ಅನುಯಾಯಿಗಳು ಭಾಗವಹಿಸಬೇಕು’ ಎಂದು ಬಸವ ಬಳಗದ ಒಕ್ಕೂಟದ ಅಧ್ಯಕ್ಷ ಪಿ. ಮರಿಸ್ವಾಮಿ ಮನವಿ ಮಾಡಿದರು.</p>.<p>ಇಲ್ಲಿನ ಶಿವಕುಮಾರಸ್ವಾಮಿ ವೃತ್ತದಲ್ಲಿ ಹೋಬಳಿ ವ್ಯಾಪ್ತಿಯ ಪ್ರಚಾರಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಚಾಮರಾಜನಗರದ ಸಿದ್ದಮಲ್ಲೇಶ್ವರ ವಿರಕ್ತಮಠ ಹಾಗೂ ಬಸವ ಬಳಗಗಳ ಒಕ್ಕೂಟದ ವತಿಯಿಂದ ಮೇ 22ರಂದು ನಡೆಯಲಿರುವ ಸಾಂಸ್ಕೃತಿಕ ನಾಯಕ ಹಾಗೂ ವಿಶ್ವಗುರು ಬಸವೇಶ್ವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ’ ಎಂದರು.</p>.<p>‘ಕಾರ್ಯಕ್ರಮದಲ್ಲಿ ಒಂದು ವಾರ ಜಿಲ್ಲೆಯ ಐದೂ ತಾಲ್ಲೂಕುಗಳಲ್ಲಿ ಪ್ರಚಾರ ನಡೆಸಲಾಗುತ್ತದೆ ’ ಎಂದು ಮನವಿ ಮಾಡಿದರು.</p>.<p>ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ‘ಸಿದ್ದಮಲ್ಲೇಶ್ವರ ವಿರಕ್ತಮಠದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬಸವ ಜಯಂತಿ ನಡೆಯಲಿದೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಹಾಗೂ ಜಿಲ್ಲೆಯ ಎಲ್ಲ ಮಠಾಧಿಪತಿಗಳ ನೇತೃತ್ವದಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಲಿದೆ’ ಎಂದರು.</p>.<p>ಮುಖಂಡ ಎನ್ರಿಚ್ ಮಹದೇವಸ್ವಾಮಿ ಮಾತನಾಡಿ, ಪ್ರತಿ ಮನೆಗಳಿಗೂ ಕರಪತ್ರ ತಲುಪಿಸುವ ಜತೆಗೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಪ್ರದಾನ ಕಾರ್ಯದರ್ಶಿ ದೊಡ್ಡರಾಯಪೇಟೆ ಗಿರೀಶ್, ಜಿಲ್ಲಾ ನಿರ್ದೇಶಕ ಕಾವುದವಾಡಿ ಗುರು, ಸುಧಾ ಮಲ್ಲಣ್ಣ, ಕೆ.ವೀರಭದ್ರಸ್ವಾಮಿ, ಆಲೂರು ಪ್ರದೀಪ್, ಶಿವಶಂಕರ್, ಶಂಕರ್ಮೂರ್ತಿ, ಹೊನ್ನೂರು ಬಸವಣ್ಣ, ಹೆಗ್ಗೋಠಾರ ವಿಜಯ್, ಆಲ್ದೂರು ರಾಜಶೇಖರ್, ರಮೇಶ್ಬಾಬು, ಆಲೂರು ಬಾಬು, ವಕೀಲ ಪೃಥ್ವಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-37-2119173228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>