<p>ಚಾಮರಾಜನಗರ: 26ನೇ ವಾರ್ಡ್ನಲ್ಲಿರುವ ವಿವೇಕನಗರ ಬಡಾವಣೆಯ ವೃತ್ತಕ್ಕೆ ಶ್ರೀ ಬಸವೇಶ್ವರ ವೃತ್ತ ಎಂದು ನಾಮಕರಣ ಮಾಡಲಾಗಿದ್ದು ಮರಿಯಾಲ ಮಠದ ಮುರುಘ ರಾಜೇಂದ್ರ ಸ್ವಾಮೀಜಿ ಹಾಗೂ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ನಾಮಫಲಕವನ್ನು ಅನಾವರಣ ಮಾಡಿದರು.</p>.<p>ವರ್ತಕರ ಭವನದ ಪಕ್ಕದ ಪೆಟ್ರೋಲ್ ಬಂಕ್ ಪಕ್ಕದಿಂದ ವಿವೇಕ ನಗರಕ್ಕೆ ಬರುವ ರಸ್ತೆಗೆ ಶರಣೆ ಅಕ್ಕ ಮಹಾದೇವಿ ರಸ್ತೆ ಎಂದು ನಾಮಕರಣ ಮಾಡಿ ನಾಮಫಲಕವನ್ನ ಉಭಯ ಶ್ರೀಗಳು ಅನಾವರಣ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಮರಿಯಾಲದ ಮುರುಘರಾಜೇಂದ್ರ ಸ್ವಾಮೀಜಿ, 12ನೇ ಶತಮಾನದಲ್ಲಿ ಬಸವಣ್ಣ ವಚನಗಳ ಮೂಲಕ ಸಮಾಜ ಸುಧಾರಣೆ ಮಾಡಿದರು. ಬಸವ ತತ್ವಗಳು ವಿಶ್ವದಲ್ಲೆಡೆ ಪಸರಿಸಬೇಕು, ವಚನಗಳ ಸಾಲ ಸಮಾಜದ ಪ್ರತಿಯೊಬ್ಬರಿಗೂ ತಿಳಿಸಬೇಕು ಎಂದು ಸಲಹೆ ನೀಡಿದರು.</p>.<p>ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಮಾತನಾಡಿ, ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣ ವೈಚಾರಿಕತೆ ಸಾರಿದರು. ಅವರ ಹೆಸರಿನಲ್ಲಿ ವೃತ್ತಕ್ಕೆ ನಾಮಕರಣವಾಗಿರುವುದು ಸಂತಸದ ವಿಚಾರ. ಬಸವಣ್ಣನವರ ವಿಚಾರಗಳನ್ನೂ ಸಮಾಜ ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಆರ್.ಎಂ.ಸ್ವಾಮಿ ಮಾತನಾಡಿ ವೃತ್ತದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು, ವೈಯಕ್ತಿಕವಾಗಿ ₹ 1 ಲಕ್ಷ ದೇಣಿಗೆ ನೀಡುವುದಾಗಿ ಪ್ರಕಟಿಸಿದರು.</p>.<p>ವಿವೇಕನಗರ ಮುಖಂಡ ಗುರುಸ್ವಾಮಿ ಮಾತನಾಡಿ, ವೃತ್ತಕ್ಕೆ ಬಸವೇಶ್ವರರ ಹೆಸರಿಡಲು ನಗರಸಭೆ ಮಾಜಿ ಸದಸ್ಯೆ ಕುಮುದಾ ಕೇಶವಮೂರ್ತಿ ನೆರವು ನೀಡಿದ್ದು ಅಭಿನಂದನೀಯ ಎಂದರು.</p>.<p>ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಡಾ.ಶ್ವೇತಾ ಶಶಿಧರ್, ನಗರಸಭೆ ಮಾಜಿ ಸದಸ್ಯೆ ಕುಮುದಾ ಕೇಶವಮೂರ್ತಿ ಮಾತನಾಡಿದರು.</p>.<p>ಜಿ. ಶಶಿಧರ್, ಉದ್ಯಮಿ ಬಸವಟ್ಟಿಗೆ ಬಸವರಾಜು, ಸಿದ್ದಮಲ್ಲಪ್ಪ, ಯೋಗೀಶ್, ನಂದೀಶ್ ಕೊಮಾರನಪುರ, ದೊ.ರಾ.ಪೇಟೆ ಕುಮಾರ್, ನಾಗರಾಜು, ಕಿಲಗೆರೆ ಚಂದ್ರಶೇಖರ್, ಎಸ್ಜಿಎಂ ಪ್ರಭುಸ್ವಾಮಿ, ಸಿ. ನಾಗಣ್ಣ, ಡಿ.ಎಸ್. ಗಿರೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-37-1655772084</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: 26ನೇ ವಾರ್ಡ್ನಲ್ಲಿರುವ ವಿವೇಕನಗರ ಬಡಾವಣೆಯ ವೃತ್ತಕ್ಕೆ ಶ್ರೀ ಬಸವೇಶ್ವರ ವೃತ್ತ ಎಂದು ನಾಮಕರಣ ಮಾಡಲಾಗಿದ್ದು ಮರಿಯಾಲ ಮಠದ ಮುರುಘ ರಾಜೇಂದ್ರ ಸ್ವಾಮೀಜಿ ಹಾಗೂ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ನಾಮಫಲಕವನ್ನು ಅನಾವರಣ ಮಾಡಿದರು.</p>.<p>ವರ್ತಕರ ಭವನದ ಪಕ್ಕದ ಪೆಟ್ರೋಲ್ ಬಂಕ್ ಪಕ್ಕದಿಂದ ವಿವೇಕ ನಗರಕ್ಕೆ ಬರುವ ರಸ್ತೆಗೆ ಶರಣೆ ಅಕ್ಕ ಮಹಾದೇವಿ ರಸ್ತೆ ಎಂದು ನಾಮಕರಣ ಮಾಡಿ ನಾಮಫಲಕವನ್ನ ಉಭಯ ಶ್ರೀಗಳು ಅನಾವರಣ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಮರಿಯಾಲದ ಮುರುಘರಾಜೇಂದ್ರ ಸ್ವಾಮೀಜಿ, 12ನೇ ಶತಮಾನದಲ್ಲಿ ಬಸವಣ್ಣ ವಚನಗಳ ಮೂಲಕ ಸಮಾಜ ಸುಧಾರಣೆ ಮಾಡಿದರು. ಬಸವ ತತ್ವಗಳು ವಿಶ್ವದಲ್ಲೆಡೆ ಪಸರಿಸಬೇಕು, ವಚನಗಳ ಸಾಲ ಸಮಾಜದ ಪ್ರತಿಯೊಬ್ಬರಿಗೂ ತಿಳಿಸಬೇಕು ಎಂದು ಸಲಹೆ ನೀಡಿದರು.</p>.<p>ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಮಾತನಾಡಿ, ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣ ವೈಚಾರಿಕತೆ ಸಾರಿದರು. ಅವರ ಹೆಸರಿನಲ್ಲಿ ವೃತ್ತಕ್ಕೆ ನಾಮಕರಣವಾಗಿರುವುದು ಸಂತಸದ ವಿಚಾರ. ಬಸವಣ್ಣನವರ ವಿಚಾರಗಳನ್ನೂ ಸಮಾಜ ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಆರ್.ಎಂ.ಸ್ವಾಮಿ ಮಾತನಾಡಿ ವೃತ್ತದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು, ವೈಯಕ್ತಿಕವಾಗಿ ₹ 1 ಲಕ್ಷ ದೇಣಿಗೆ ನೀಡುವುದಾಗಿ ಪ್ರಕಟಿಸಿದರು.</p>.<p>ವಿವೇಕನಗರ ಮುಖಂಡ ಗುರುಸ್ವಾಮಿ ಮಾತನಾಡಿ, ವೃತ್ತಕ್ಕೆ ಬಸವೇಶ್ವರರ ಹೆಸರಿಡಲು ನಗರಸಭೆ ಮಾಜಿ ಸದಸ್ಯೆ ಕುಮುದಾ ಕೇಶವಮೂರ್ತಿ ನೆರವು ನೀಡಿದ್ದು ಅಭಿನಂದನೀಯ ಎಂದರು.</p>.<p>ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಡಾ.ಶ್ವೇತಾ ಶಶಿಧರ್, ನಗರಸಭೆ ಮಾಜಿ ಸದಸ್ಯೆ ಕುಮುದಾ ಕೇಶವಮೂರ್ತಿ ಮಾತನಾಡಿದರು.</p>.<p>ಜಿ. ಶಶಿಧರ್, ಉದ್ಯಮಿ ಬಸವಟ್ಟಿಗೆ ಬಸವರಾಜು, ಸಿದ್ದಮಲ್ಲಪ್ಪ, ಯೋಗೀಶ್, ನಂದೀಶ್ ಕೊಮಾರನಪುರ, ದೊ.ರಾ.ಪೇಟೆ ಕುಮಾರ್, ನಾಗರಾಜು, ಕಿಲಗೆರೆ ಚಂದ್ರಶೇಖರ್, ಎಸ್ಜಿಎಂ ಪ್ರಭುಸ್ವಾಮಿ, ಸಿ. ನಾಗಣ್ಣ, ಡಿ.ಎಸ್. ಗಿರೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-37-1655772084</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>