<p>ಚಾಮರಾಜನಗರ: ನಗರಸಭೆಯಲ್ಲಿ ಇ–ಸ್ವತ್ತು ಮಾಡಿಕೊಡಲು ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ಹಾಗೂ ಒಬ್ಬ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಕಂದಾಯ ಅಧಿಕಾರಿ ಹೇಮಂತ್ ಕುಮಾರ್, ಕಂದಾಯ ನಿರೀಕ್ಷಕ ಶಕೀಲ್ ಅಹಮದ್ ಹಾಗೂ ಮಧ್ಯವರ್ತಿ ಹಬೀಬ್ ಲೋಕಾಯುಕ್ತ ಬಲೆಗೆ ಬಿದ್ದವರು.</p>.<p>ಪ್ರಕರಣದ ವಿವರ: ಮೀಸೆ ನಾಗರಾಜು ಎಂಬುವರಿಗೆ ಅವರ ನಿವೇಶನದ ಇ– ಸ್ವತ್ತು ಮಾಡಿಕೊಡಲು, ಕಂದಾಯ ಅಧಿಕಾರಿ ಹೇಮಂತ್ ಕುಮಾರ್ ಹಾಗೂ ಕಂದಾಯ ನಿರೀಕ್ಷಕ ಶಕೀಲ್ ಅಹಮದ್ ₹25ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಮಧ್ಯವರ್ತಿ ಹಬೀಬ್ಗೆ ಹಣ ನೀಡುವಂತೆ ಸೂಚನೆ ನೀಡಿದ್ದರು. ಈ ಸಂಬಂಧ ನಾಗರಾಜ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಅದರಂತೆ ದೂರುದಾರರು ಮಧ್ಯವರ್ತಿ ಹಬೀಬ್ಗೆ ಹಣ ನೀಡುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮೂವರು ಆರೋಪಿಗಳನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.</p>.<p>ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್ ಹಾಗೂ ತಂಡ ಕಾರ್ಯಾಚರಣೆ ನಡೆಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-51-1399506344</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ನಗರಸಭೆಯಲ್ಲಿ ಇ–ಸ್ವತ್ತು ಮಾಡಿಕೊಡಲು ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ಹಾಗೂ ಒಬ್ಬ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಕಂದಾಯ ಅಧಿಕಾರಿ ಹೇಮಂತ್ ಕುಮಾರ್, ಕಂದಾಯ ನಿರೀಕ್ಷಕ ಶಕೀಲ್ ಅಹಮದ್ ಹಾಗೂ ಮಧ್ಯವರ್ತಿ ಹಬೀಬ್ ಲೋಕಾಯುಕ್ತ ಬಲೆಗೆ ಬಿದ್ದವರು.</p>.<p>ಪ್ರಕರಣದ ವಿವರ: ಮೀಸೆ ನಾಗರಾಜು ಎಂಬುವರಿಗೆ ಅವರ ನಿವೇಶನದ ಇ– ಸ್ವತ್ತು ಮಾಡಿಕೊಡಲು, ಕಂದಾಯ ಅಧಿಕಾರಿ ಹೇಮಂತ್ ಕುಮಾರ್ ಹಾಗೂ ಕಂದಾಯ ನಿರೀಕ್ಷಕ ಶಕೀಲ್ ಅಹಮದ್ ₹25ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಮಧ್ಯವರ್ತಿ ಹಬೀಬ್ಗೆ ಹಣ ನೀಡುವಂತೆ ಸೂಚನೆ ನೀಡಿದ್ದರು. ಈ ಸಂಬಂಧ ನಾಗರಾಜ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಅದರಂತೆ ದೂರುದಾರರು ಮಧ್ಯವರ್ತಿ ಹಬೀಬ್ಗೆ ಹಣ ನೀಡುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮೂವರು ಆರೋಪಿಗಳನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.</p>.<p>ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್ ಹಾಗೂ ತಂಡ ಕಾರ್ಯಾಚರಣೆ ನಡೆಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-51-1399506344</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>