ಕೊಂಚ ಮಂಕು: ಭೋದನಾ ಆಸ್ಪತ್ರೆ ಉದ್ಘಾಟನೆ ಸಮಾರಂಭವೂ ಗುರುವಾರವೇ ನಡೆಯಲಿರುವುದರಿಂದ ಜಿಲ್ಲಾ ದಸರಾ ಮಹೋತ್ಸವ ಚಾಲನಾ ಸಮಾರಂಭಕ್ಕೆ ಸ್ವಲ್ಪ ಮಂಕು ಕವಿದಂತೆ ಭಾಸವಾಗುತ್ತಿದೆ. ಜಿಲ್ಲಾಡಳಿತದ ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗ ರಾಷ್ಟ್ರಪತಿ, ರಾಜ್ಯಪಾಲ, ಮುಖ್ಯಮಂತ್ರಿ ಹಾಗೂ ಇತರ ಸಚಿವರು ಭಾಗವಹಿಸುವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದ ಯಶಸ್ಸಿಗೆ ಗಮನ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಸರಾ ಮಹೋತ್ಸವದ ಕೆಲಸದಲ್ಲಿ ತೊಡಗಿದ್ದಾರೆ.