<p><strong>ಚಾಮರಾಜನಗರ: </strong>ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಚಾರುಲತಾ ಸೋಮಲ್ ಅವರನ್ನು ಆ ಹುದ್ದೆಗೆ ನಿಯೋಜಿಸಿದೆ. ರವಿ ಅವರಿಗೆ ಹೊಸ ಹುದ್ದೆ, ಸ್ಥಳವನ್ನುತೋರಿಸಿಲ್ಲ.<br /><br />ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ರವಿ ಅವರಿಗೆ ಹೊಸ ಹುದ್ದೆ, ಸ್ಥಳವನ್ನು ತೋರಿಸಿಲ್ಲ. </p>.<p>ಸೋಮವಾರ ಸಂಜೆ ಆದೇಶ ಹೊರಬೀಳುತ್ತಲೇ,ಚಾರುಲತಾ ಅವರು ಜಿಲ್ಲೆಗೆ ಬಂದು ರಾತ್ರಿ 7.15ರ ಗಂಟೆ ಸುಮಾರಿಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರ ಹಸ್ತಾಂತರಿಸಿದರು.</p>.<p>ಮೂಲತಃ ಮಹಾರಾಷ್ಟ್ರದವರಾದ ಚಾರುಲತಾ ಅವರು2012ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಈ ಹಿಂದೆ ಕೊಡಗು ಜಿಲ್ಲಾಧಿಕಾರಿಯಾಗಿದ್ದರು. ಅಕ್ಟೋಬರ್ 11ರಂದು ಅವರನ್ನು ರಾಯಚೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ನಂತರ ಅದು ರದ್ದಾಗಿತ್ತು. ಅವರು ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದರು.</p>.<p>ಡಾ.ಎಂ.ಆರ್.ರವಿ ಅವರು 2020ರ ಜನವರಿ 30ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 2021ರ ಫೆಬ್ರುವರಿ 13ರಂದು ಅವರನ್ನುಸಕಾಲ ಯೋಜನೆಯ ಹೆಚ್ಚುವರಿ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ನಂತರ ಆದೇಶ ರದ್ದಾಗಿ ಜಿಲ್ಲೆಯಲ್ಲೇ ಮುಂದುವರೆದಿದ್ದರು.</p>.<p>ಮೇ 2ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ಸಂಭವಿಸಿದ ದುರಂತದ ನಂತರ, ಅದೇ ತಿಂಗಳ 19ರಂದು ರವಿ ಅವರ ವರ್ಗಾವಣೆಯಾಗಿದೆ ಎಂದು ಸುದ್ದಿಯಾಗಿತ್ತು. ಆದರೆ, ಅಧಿಕೃತ ಆದೇಶ ಬಂದಿರಲಿಲ್ಲ. ಅವರು ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಚಾರುಲತಾ ಸೋಮಲ್ ಅವರನ್ನು ಆ ಹುದ್ದೆಗೆ ನಿಯೋಜಿಸಿದೆ. ರವಿ ಅವರಿಗೆ ಹೊಸ ಹುದ್ದೆ, ಸ್ಥಳವನ್ನುತೋರಿಸಿಲ್ಲ.<br /><br />ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ರವಿ ಅವರಿಗೆ ಹೊಸ ಹುದ್ದೆ, ಸ್ಥಳವನ್ನು ತೋರಿಸಿಲ್ಲ. </p>.<p>ಸೋಮವಾರ ಸಂಜೆ ಆದೇಶ ಹೊರಬೀಳುತ್ತಲೇ,ಚಾರುಲತಾ ಅವರು ಜಿಲ್ಲೆಗೆ ಬಂದು ರಾತ್ರಿ 7.15ರ ಗಂಟೆ ಸುಮಾರಿಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರ ಹಸ್ತಾಂತರಿಸಿದರು.</p>.<p>ಮೂಲತಃ ಮಹಾರಾಷ್ಟ್ರದವರಾದ ಚಾರುಲತಾ ಅವರು2012ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಈ ಹಿಂದೆ ಕೊಡಗು ಜಿಲ್ಲಾಧಿಕಾರಿಯಾಗಿದ್ದರು. ಅಕ್ಟೋಬರ್ 11ರಂದು ಅವರನ್ನು ರಾಯಚೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ನಂತರ ಅದು ರದ್ದಾಗಿತ್ತು. ಅವರು ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದರು.</p>.<p>ಡಾ.ಎಂ.ಆರ್.ರವಿ ಅವರು 2020ರ ಜನವರಿ 30ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 2021ರ ಫೆಬ್ರುವರಿ 13ರಂದು ಅವರನ್ನುಸಕಾಲ ಯೋಜನೆಯ ಹೆಚ್ಚುವರಿ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ನಂತರ ಆದೇಶ ರದ್ದಾಗಿ ಜಿಲ್ಲೆಯಲ್ಲೇ ಮುಂದುವರೆದಿದ್ದರು.</p>.<p>ಮೇ 2ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ಸಂಭವಿಸಿದ ದುರಂತದ ನಂತರ, ಅದೇ ತಿಂಗಳ 19ರಂದು ರವಿ ಅವರ ವರ್ಗಾವಣೆಯಾಗಿದೆ ಎಂದು ಸುದ್ದಿಯಾಗಿತ್ತು. ಆದರೆ, ಅಧಿಕೃತ ಆದೇಶ ಬಂದಿರಲಿಲ್ಲ. ಅವರು ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>