<p><strong>ಚಾಮರಾಜನಗರ: </strong>ನಾಲ್ಕು ದಿನಗಳ ಕಾಲ ನಡೆಯಲಿರುವ ಜಿಲ್ಲಾ ದಸರಾ ಮಹೋತ್ಸವಕ್ಕೆ ಗುರುವಾರ ಬೆಳಿಗ್ಗೆ ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ವಿಧ್ಯುಕ್ತವಾಗಿ ಆರಂಭವಾಯಿತು.</p>.<p>ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್ ನಾರಾಯಣರಾವ್, ಹೆಚ್ವುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿ ದೇವಿ ಅವರು ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p><br />ಬಳಿಕ ಚಾಮರಾಜೇಶ್ವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಗಣ್ಯರು, ಸಾಂಕೇತಿಕವಾಗಿ ದೀಪ ಬೆಳಗಿದರು. ದೇವಾಲಯದ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಿ ಹಾಗೂ ಕೆಂಪನಂಜಾಂಬ ದೇಗುಲಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಾಲಯದ ಮುಂಭಾಗದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ಪುಣ್ಪಾರ್ಚನೆ ಮಾಡಿದರು.</p>.<p>ಬಳಿಕ ಜನನ ಮಂಟಪದವರೆಗೂ ಮೆರವಣಿಗೆಯಲ್ಲಿ ತೆರಳಿ ಮೈಸೂರು ರಾಜ ವಂಶಸ್ಥರಾದ ಚಾಮರಾಜೇಂದ್ರ ಒಡೆಯರ್ ಅವರು ಜನಿಸಿದ ಸ್ಥಳದಲ್ಲೂ ಪೂಜೆ ಸಲ್ಲಿಸಿದರು.</p>.<p>ಗಮನಸೆಳೆದ ಕಲಾ ತಂಡಗಳು: ಇದಕ್ಕೂ ಮೊದಲು ಚಾಮರಾಜೇಶ್ವರ ಉದ್ಯಾನದ ಬಳಿಯಿಂದ ಶಾಸಕರು ಹಾಗೂ ಇತರ ಗಣ್ಯರನ್ನು ಮಂಗಳವಾದ್ಯ ಗಳೊಂದಿಗೆ ಕಲಾತಂಡಗಳ ಮೆರವಣಿಗೆಯ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.</p>.<p>ಕಂಸಾಳೆ, ಡೋಲು, ವೀರಗಾಸೆ, ಗೊರವರ ಕುಣಿತ, ಬೀಸು ಕಂಸಾಳೆ, ಬ್ಯಾಂಡ್ ಸೆಟ್, ಹುಲಿ ವೇಷ, ಗೊಂಬೆ ಕುಣಿತ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.</p>.<p>ಕೋವಿಡ್ ಕಾರಣಕ್ಕೆ ಈ ಬಾರಿ ಸರಳವಾಗಿ ದಸರಾ ಆಚರಿಸಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರ ನಾಡ ಹಬ್ಬ ಸೀಮಿತವಾಗಿದೆ.</p>.<p>ಇಂದು ಸಂಜೆ 5.30ಕ್ಕೆ ಅಧಿಕೃತ ಉದ್ಘಾಟನಾ ಸಮಾರಂಭ ನಡೆಯಲಿದೆ. ಅ.10ರಂದು ದಸರಾ ಸಮಾಪನಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ನಾಲ್ಕು ದಿನಗಳ ಕಾಲ ನಡೆಯಲಿರುವ ಜಿಲ್ಲಾ ದಸರಾ ಮಹೋತ್ಸವಕ್ಕೆ ಗುರುವಾರ ಬೆಳಿಗ್ಗೆ ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ವಿಧ್ಯುಕ್ತವಾಗಿ ಆರಂಭವಾಯಿತು.</p>.<p>ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್ ನಾರಾಯಣರಾವ್, ಹೆಚ್ವುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿ ದೇವಿ ಅವರು ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p><br />ಬಳಿಕ ಚಾಮರಾಜೇಶ್ವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಗಣ್ಯರು, ಸಾಂಕೇತಿಕವಾಗಿ ದೀಪ ಬೆಳಗಿದರು. ದೇವಾಲಯದ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಿ ಹಾಗೂ ಕೆಂಪನಂಜಾಂಬ ದೇಗುಲಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಾಲಯದ ಮುಂಭಾಗದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ಪುಣ್ಪಾರ್ಚನೆ ಮಾಡಿದರು.</p>.<p>ಬಳಿಕ ಜನನ ಮಂಟಪದವರೆಗೂ ಮೆರವಣಿಗೆಯಲ್ಲಿ ತೆರಳಿ ಮೈಸೂರು ರಾಜ ವಂಶಸ್ಥರಾದ ಚಾಮರಾಜೇಂದ್ರ ಒಡೆಯರ್ ಅವರು ಜನಿಸಿದ ಸ್ಥಳದಲ್ಲೂ ಪೂಜೆ ಸಲ್ಲಿಸಿದರು.</p>.<p>ಗಮನಸೆಳೆದ ಕಲಾ ತಂಡಗಳು: ಇದಕ್ಕೂ ಮೊದಲು ಚಾಮರಾಜೇಶ್ವರ ಉದ್ಯಾನದ ಬಳಿಯಿಂದ ಶಾಸಕರು ಹಾಗೂ ಇತರ ಗಣ್ಯರನ್ನು ಮಂಗಳವಾದ್ಯ ಗಳೊಂದಿಗೆ ಕಲಾತಂಡಗಳ ಮೆರವಣಿಗೆಯ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.</p>.<p>ಕಂಸಾಳೆ, ಡೋಲು, ವೀರಗಾಸೆ, ಗೊರವರ ಕುಣಿತ, ಬೀಸು ಕಂಸಾಳೆ, ಬ್ಯಾಂಡ್ ಸೆಟ್, ಹುಲಿ ವೇಷ, ಗೊಂಬೆ ಕುಣಿತ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.</p>.<p>ಕೋವಿಡ್ ಕಾರಣಕ್ಕೆ ಈ ಬಾರಿ ಸರಳವಾಗಿ ದಸರಾ ಆಚರಿಸಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರ ನಾಡ ಹಬ್ಬ ಸೀಮಿತವಾಗಿದೆ.</p>.<p>ಇಂದು ಸಂಜೆ 5.30ಕ್ಕೆ ಅಧಿಕೃತ ಉದ್ಘಾಟನಾ ಸಮಾರಂಭ ನಡೆಯಲಿದೆ. ಅ.10ರಂದು ದಸರಾ ಸಮಾಪನಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>