<p>ಸಂತೇಮರಹಳ್ಳಿ: ಇಲ್ಲಿನ ಬಸ್ ನಿಲ್ದಾಣ ಹಾಗೂ ಅಕ್ಕಪಕ್ಕದ ಸ್ಥಳಗಳಲ್ಲಿ ಶುಕ್ರವಾರ ಮಧ್ಯಾಹ್ನ ಬೀದಿ ನಾಯಿಯೊಂದು 30ಕ್ಕೂ ಹೆಚ್ಚು ಮಂದಿಗೆ ಕಚ್ಚಿ ಗಾಯಗೊಳಿಸಿದೆ.</p>.<p>ಬಸ್ ನಿಲ್ದಾಣದಲ್ಲಿ ಅಡ್ಡಾಡುತ್ತಿದ್ದ ನಾಯಿ ಪ್ರಯಾಣಿಕರಿಗೆ ಹಾಗೂ ನೀರಾವರಿ ವಸತಿ ಗೃಹದ ಸಮೀಪ ಹಲವು ಜನರಿಗೆ ಕಚ್ಚಿದೆ. ಸಮುದಾಯ ಆರೋಗ್ಯ ಕೆಂದ್ರಕ್ಕೆ 20 ಮಂದಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಉಳಿದವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಸಾರ್ವಜನಿಕರಿಗೆ ಕಚ್ಚಿರುವ ನಾಯಿ ಹಿಡಿಯಲು ಗ್ರಾಮ ಪಂಚಾಯಿತಿಯವರು ಕಾರ್ಯಾಚರಣೆ ನಡೆಸಿದ್ದು, ಇದುವರೆಗೂ ಸಿಕ್ಕಿಲ್ಲ. ಇದರಿಂದ ಗ್ರಾಮದ ನಿವಾಸಿಗಳು ಆತಂಕದಲ್ಲಿದ್ದಾರೆ.</p>.<p>‘ಸಾರ್ವಜನಿಕರಿಗೆ ನಾಯಿ ಕಚ್ಚುತ್ತಿರುವ ಹಿನ್ನೆಲೆಯಲ್ಲಿ ನಿವಾಸಿಗಳು ಮಕ್ಕಳನ್ನು ಹೊರಗೆ ಬಿಡದೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ಪಂಚಾಯಿತಿ ಸಿಬ್ಬಂದಿ ನಾಯಿ ಹಿಡಿಯುವ ಕಾರ್ಯಾಚರಣೆ ನಡೆಸಿದ್ದು, ಪಶು ಆಸ್ಪತ್ರೆಯವರಿಗೆ ಮಾಹಿತಿ ನೀಡಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-37-1717764721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಮರಹಳ್ಳಿ: ಇಲ್ಲಿನ ಬಸ್ ನಿಲ್ದಾಣ ಹಾಗೂ ಅಕ್ಕಪಕ್ಕದ ಸ್ಥಳಗಳಲ್ಲಿ ಶುಕ್ರವಾರ ಮಧ್ಯಾಹ್ನ ಬೀದಿ ನಾಯಿಯೊಂದು 30ಕ್ಕೂ ಹೆಚ್ಚು ಮಂದಿಗೆ ಕಚ್ಚಿ ಗಾಯಗೊಳಿಸಿದೆ.</p>.<p>ಬಸ್ ನಿಲ್ದಾಣದಲ್ಲಿ ಅಡ್ಡಾಡುತ್ತಿದ್ದ ನಾಯಿ ಪ್ರಯಾಣಿಕರಿಗೆ ಹಾಗೂ ನೀರಾವರಿ ವಸತಿ ಗೃಹದ ಸಮೀಪ ಹಲವು ಜನರಿಗೆ ಕಚ್ಚಿದೆ. ಸಮುದಾಯ ಆರೋಗ್ಯ ಕೆಂದ್ರಕ್ಕೆ 20 ಮಂದಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಉಳಿದವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಸಾರ್ವಜನಿಕರಿಗೆ ಕಚ್ಚಿರುವ ನಾಯಿ ಹಿಡಿಯಲು ಗ್ರಾಮ ಪಂಚಾಯಿತಿಯವರು ಕಾರ್ಯಾಚರಣೆ ನಡೆಸಿದ್ದು, ಇದುವರೆಗೂ ಸಿಕ್ಕಿಲ್ಲ. ಇದರಿಂದ ಗ್ರಾಮದ ನಿವಾಸಿಗಳು ಆತಂಕದಲ್ಲಿದ್ದಾರೆ.</p>.<p>‘ಸಾರ್ವಜನಿಕರಿಗೆ ನಾಯಿ ಕಚ್ಚುತ್ತಿರುವ ಹಿನ್ನೆಲೆಯಲ್ಲಿ ನಿವಾಸಿಗಳು ಮಕ್ಕಳನ್ನು ಹೊರಗೆ ಬಿಡದೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ಪಂಚಾಯಿತಿ ಸಿಬ್ಬಂದಿ ನಾಯಿ ಹಿಡಿಯುವ ಕಾರ್ಯಾಚರಣೆ ನಡೆಸಿದ್ದು, ಪಶು ಆಸ್ಪತ್ರೆಯವರಿಗೆ ಮಾಹಿತಿ ನೀಡಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-37-1717764721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>