<p><strong>ಚಾಮರಾಜನಗರ</strong>: ತೀವ್ರ ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವ ಸಂಬಂಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದರಿಂದ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನಗರದ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು.</p>.<p>ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಡಳಿತ ಹಾಗೂ ನಗರಸಭೆಯ ಅಧಿಕಾರಿಗಳೊಂದಿಗೆ ಪಟ್ಟಣದ 1ನೇ ವಾರ್ಡಿನಲ್ಲಿರುವ ಸೋಮವಾರಪೇಟೆ ಹಾಗೂ 2ನೇ ವಾರ್ಡಿನಲ್ಲಿರುವ ಗಾಳಿಪುರ ಹಾಗೂ ಹಂದಿಜೋಗಿ ಕಾಲೊನಿಗೆ ಭೇಟಿ ನೀಡಿದ ಸಚಿವರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ನಿವಾಸಿಗಳಿಂದ ಅಹವಾಲು ಆಲಿಸಿದರು.</p>.<p>‘ಬಡಾವಣೆಗಳಿಗೆ ನಿಯಮಿತವಾಗಿ ಕುಡಿಯುವ ನೀರಿನ ಪೂರೈಕೆಯಾಗುತ್ತಿಲ್ಲ. ಬೇಸಿಗೆಯಲ್ಲಿ ನೀರಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಟ್ಯಾಂಕರ್ ಮೂಲಕ ಪೂರೈಸುವ ನೀರು ಸಾಕಾಗುತ್ತಿಲ್ಲ. ಕೂಡಲೇ ಸಮರ್ಪಕ ನೀರು ಒದಗಿಸಬೇಕು’ ಎಂದು ನಿವಾಸಿಗಳು ಮನವಿ ಮಾಡಿದರು.</p>.<p>‘ಬಡಾವಣೆಯಲ್ಲಿ ನಿಯಮಿತವಾಗಿ ಕಸ ವಿಲೇವಾರಿಯಾಗುತ್ತಿಲ್ಲ. ಚರಂಡಿಗಳಲ್ಲಿ ತುಂಬಿಕೊಂಡಿರುವ ಹೂಳು ಎತ್ತದೆ. ಅನೈರ್ಮಲ್ಯ ಉಂಟಾಗಿದೆ.ದುರ್ವಾಸನೆಗೆ ಸ್ಥಳೀಯರು ವಾಸ ಮಾಡಲಾಗುತ್ತಿಲ್ಲ. ಮಳೆ ಬಂದರೆ ಚರಂಡಿ ಕಟ್ಟಿಕೊಂಡು ರಸ್ತೆಗೆ ತ್ಯಾಜ್ಯ ಹರಿದು ಸಮಸ್ಯೆ ಗಂಭೀರವಾಗುತ್ತದೆ’ ಎಂದು ದೂರು ಹೇಳಿಕೊಂಡರು.</p>.<p>ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ‘ನಾಗರಿಕರಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು ಒದಗಿಸಬೇಕು. ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚಿಸಿದರು.</p>.<p>ಹಂದಿಜೋಗಿ ಕಾಲೊನಿಯ ನಿವಾಸಿಗಳು ‘ಖಾಸಗಿ ಜಾಗದಲ್ಲಿ ವಾಸ ಮಾಡುತ್ತಿದ್ದು, ಜಾಗ ತೆರವುಗೊಳಿಸುವಂತೆ ಒತ್ತಡ ಹಾಕುತ್ತಿದ್ದಾರೆ, ಬದಲಿ ಮನೆಗಳ ವ್ಯವಸ್ಥೆ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.</p>.<p>ಶಾಸಕ ಪುಟ್ಟರಂಗಶೆಟ್ಟಿ ಪ್ರತಿಕ್ರಿಯಿಸಿ ಹಂದಿಜೋಗಿ ಸಮುದಾಯದವರಿಗೆ ಉತ್ತುವಳ್ಳಿ ಗ್ರಾಮದಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಜಾಗ ಗುರುತಿಸಲಾಗಿದೆ. ಶೀಘ್ರ ಅಲ್ಲಿಗೆ ಸ್ಥಳಾಂತರ ಮಾಡಲು ಕ್ರಮ ವಹಿಸಲಾಗುತ್ತದೆ’ ಎಂದು ಭರವಸೆ ನೀಡಿದರು.</p>.<p>ಸೋಮವಾರಪೇಟೆ ಹಾಗೂ ಗಾಳಿಪುರ ಬಡಾವಣೆಯ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದು ತುರ್ತು ಹೆಚ್ಚುವರಿ ಬೋರ್ವೆಲ್ ಕೊರೆಯಿಸಿ ಸಮಸ್ಯೆಯನ್ನು ಬಗೆಹರಿಸಬೇಕು, ವಾರಕ್ಕೊಮ್ಮೆಯಾದರೂ ಕಸ ಸಂಗ್ರಹಣೆ ಮಾಡಬೇಕು. ಚರಂಡಿಗಳು ಸ್ವಚ್ಛತೆಯಿಲ್ಲದೆ, ದುರ್ವಾಸನೆಯಿಂದ ಕೂಡಿದ್ದು ಸ್ವಚ್ಛಗೊಳಿಸುವಂತೆ ಸಚಿವರಿಗೆ ಮನವಿ ಮಾಡಿದರು.</p>.<p>ಜನ-ಜಾನುವಾರುಗಳಿಗೆ ಕುಡಿಯುವ ನೀರು ಸರಬರಾಜು ಮಾಡಬೇಕು, ಕುಡಿಯುವ ನೀರಿನ ಸಮಸ್ಯೆ ಸಂಬಂಧ ದೂರುಗಳು ಬಾರದಂತೆ ಸೂಕ್ತ ಕ್ರಮ ವಹಿಸಬೇಕು. ಬಡಾವಣೆಗಳ ಸ್ವಚ್ಛತೆಗೆ ಗಮನ ಹರಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ವೆಂಕಟೇಶ್, ನಗರಸಭೆ ಕಾರ್ಯಪಾಲಕ ಎಂಜಿನಿಯರ್ ಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-37-160325892</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ತೀವ್ರ ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವ ಸಂಬಂಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದರಿಂದ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನಗರದ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು.</p>.<p>ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಡಳಿತ ಹಾಗೂ ನಗರಸಭೆಯ ಅಧಿಕಾರಿಗಳೊಂದಿಗೆ ಪಟ್ಟಣದ 1ನೇ ವಾರ್ಡಿನಲ್ಲಿರುವ ಸೋಮವಾರಪೇಟೆ ಹಾಗೂ 2ನೇ ವಾರ್ಡಿನಲ್ಲಿರುವ ಗಾಳಿಪುರ ಹಾಗೂ ಹಂದಿಜೋಗಿ ಕಾಲೊನಿಗೆ ಭೇಟಿ ನೀಡಿದ ಸಚಿವರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ನಿವಾಸಿಗಳಿಂದ ಅಹವಾಲು ಆಲಿಸಿದರು.</p>.<p>‘ಬಡಾವಣೆಗಳಿಗೆ ನಿಯಮಿತವಾಗಿ ಕುಡಿಯುವ ನೀರಿನ ಪೂರೈಕೆಯಾಗುತ್ತಿಲ್ಲ. ಬೇಸಿಗೆಯಲ್ಲಿ ನೀರಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಟ್ಯಾಂಕರ್ ಮೂಲಕ ಪೂರೈಸುವ ನೀರು ಸಾಕಾಗುತ್ತಿಲ್ಲ. ಕೂಡಲೇ ಸಮರ್ಪಕ ನೀರು ಒದಗಿಸಬೇಕು’ ಎಂದು ನಿವಾಸಿಗಳು ಮನವಿ ಮಾಡಿದರು.</p>.<p>‘ಬಡಾವಣೆಯಲ್ಲಿ ನಿಯಮಿತವಾಗಿ ಕಸ ವಿಲೇವಾರಿಯಾಗುತ್ತಿಲ್ಲ. ಚರಂಡಿಗಳಲ್ಲಿ ತುಂಬಿಕೊಂಡಿರುವ ಹೂಳು ಎತ್ತದೆ. ಅನೈರ್ಮಲ್ಯ ಉಂಟಾಗಿದೆ.ದುರ್ವಾಸನೆಗೆ ಸ್ಥಳೀಯರು ವಾಸ ಮಾಡಲಾಗುತ್ತಿಲ್ಲ. ಮಳೆ ಬಂದರೆ ಚರಂಡಿ ಕಟ್ಟಿಕೊಂಡು ರಸ್ತೆಗೆ ತ್ಯಾಜ್ಯ ಹರಿದು ಸಮಸ್ಯೆ ಗಂಭೀರವಾಗುತ್ತದೆ’ ಎಂದು ದೂರು ಹೇಳಿಕೊಂಡರು.</p>.<p>ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ‘ನಾಗರಿಕರಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು ಒದಗಿಸಬೇಕು. ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚಿಸಿದರು.</p>.<p>ಹಂದಿಜೋಗಿ ಕಾಲೊನಿಯ ನಿವಾಸಿಗಳು ‘ಖಾಸಗಿ ಜಾಗದಲ್ಲಿ ವಾಸ ಮಾಡುತ್ತಿದ್ದು, ಜಾಗ ತೆರವುಗೊಳಿಸುವಂತೆ ಒತ್ತಡ ಹಾಕುತ್ತಿದ್ದಾರೆ, ಬದಲಿ ಮನೆಗಳ ವ್ಯವಸ್ಥೆ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.</p>.<p>ಶಾಸಕ ಪುಟ್ಟರಂಗಶೆಟ್ಟಿ ಪ್ರತಿಕ್ರಿಯಿಸಿ ಹಂದಿಜೋಗಿ ಸಮುದಾಯದವರಿಗೆ ಉತ್ತುವಳ್ಳಿ ಗ್ರಾಮದಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಜಾಗ ಗುರುತಿಸಲಾಗಿದೆ. ಶೀಘ್ರ ಅಲ್ಲಿಗೆ ಸ್ಥಳಾಂತರ ಮಾಡಲು ಕ್ರಮ ವಹಿಸಲಾಗುತ್ತದೆ’ ಎಂದು ಭರವಸೆ ನೀಡಿದರು.</p>.<p>ಸೋಮವಾರಪೇಟೆ ಹಾಗೂ ಗಾಳಿಪುರ ಬಡಾವಣೆಯ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದು ತುರ್ತು ಹೆಚ್ಚುವರಿ ಬೋರ್ವೆಲ್ ಕೊರೆಯಿಸಿ ಸಮಸ್ಯೆಯನ್ನು ಬಗೆಹರಿಸಬೇಕು, ವಾರಕ್ಕೊಮ್ಮೆಯಾದರೂ ಕಸ ಸಂಗ್ರಹಣೆ ಮಾಡಬೇಕು. ಚರಂಡಿಗಳು ಸ್ವಚ್ಛತೆಯಿಲ್ಲದೆ, ದುರ್ವಾಸನೆಯಿಂದ ಕೂಡಿದ್ದು ಸ್ವಚ್ಛಗೊಳಿಸುವಂತೆ ಸಚಿವರಿಗೆ ಮನವಿ ಮಾಡಿದರು.</p>.<p>ಜನ-ಜಾನುವಾರುಗಳಿಗೆ ಕುಡಿಯುವ ನೀರು ಸರಬರಾಜು ಮಾಡಬೇಕು, ಕುಡಿಯುವ ನೀರಿನ ಸಮಸ್ಯೆ ಸಂಬಂಧ ದೂರುಗಳು ಬಾರದಂತೆ ಸೂಕ್ತ ಕ್ರಮ ವಹಿಸಬೇಕು. ಬಡಾವಣೆಗಳ ಸ್ವಚ್ಛತೆಗೆ ಗಮನ ಹರಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ವೆಂಕಟೇಶ್, ನಗರಸಭೆ ಕಾರ್ಯಪಾಲಕ ಎಂಜಿನಿಯರ್ ಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-37-160325892</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>