<p><strong>ಚಾಮರಾಜನಗರ: </strong>ಕೋತಿಗಳ ಉಪಟಳದಿಂದ ಬೆಳೆಗಳನ್ನು ರಕ್ಷಿಸಲು ತಾಲ್ಲೂಕಿನ ಅಜ್ಜೀಪುರದ ರೈತ ಮಂಜು ವಿನೂತನ ಉಪಾಯವನ್ನು ಕಂಡು ಕೊಂಡಿದ್ದಾರೆ. ಸಾಕು ನಾಯಿಗೆ ಹುಲಿಯ ಬಣ್ಣ ಬಳಿದು ಕೋತಿಗಳನ್ನು ಹೆದರಿಸಿ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. </p>.<p>ಅವರ ವಿಲಕ್ಷಣ ಉಪಾಯದಿಂದ ಎಲ್ಲರಲ್ಲೂ ಬೆರಗು ಹುಟ್ಟಿಸಿದ್ದಾರೆ. ಹುಲಿಯ ವೇಷ ಧರಿಸಿರುವ ನಾಯಿಯ ಚಿತ್ರ ಹಾಗೂ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. </p>.<p>ತಾಲ್ಲೂಕಿನ ಅಜ್ಜೀಪುರದ ಹೊರವಲಯದಲ್ಲಿರುವ ತೋಟಗಳಿಗೆ ಕೋತಿಗಳ ಉಪಟಳ ವಿಪರೀತವಾಗಿದ್ದು, ಅವುಗಳನ್ನು ಕಾಯುವುದೇ ದೊಡ್ಡ ಸವಾಲಿನ ಕೆಲಸವಾಗಿತ್ತು. ಕೋತಿಗಳನ್ನು ಓಡಿಸಲು ಮಂಜು ಕಂಡುಕೊಂಡ ಉಪಾಯ ಫಲ ನೀಡುತ್ತಿದೆ.</p>.<p>ಜಮೀನಿನಲ್ಲಿ ಬೆಳೆದಿದ್ದ ಬೆಳೆ, ತೆಂಗಿನ ಕಾಯಿಗಳನ್ನು ಹಾಳು ಮಾಡುತ್ತಿದ್ದ ಕೋತಿಗಳು ಈಗ ನಾಯಿ ನೋಡಿ ಹೆದರಿ ದೂರ ಸರಿದಿವೆ. ಬೆಳೆ ರೈತನ ಕೈ ಸೇರುತ್ತಿದೆ. ಕಾಡಿನ ಸಮೀಪದ ಜಮೀನುಗಳಲ್ಲಿ ನಾಯಿ ಓಡಾಡುತ್ತಿದ್ದು, ಹುಲಿ ವೇಷದ ನಾಯಿ ಕಂಡು ಬೆಚ್ಚಿ ಬಿದ್ದವರಿದ್ದಾರೆ. ನಿಜಾಂಶ ಗೊತ್ತಾದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಕೋತಿಗಳ ಉಪಟಳದಿಂದ ಬೆಳೆಗಳನ್ನು ರಕ್ಷಿಸಲು ತಾಲ್ಲೂಕಿನ ಅಜ್ಜೀಪುರದ ರೈತ ಮಂಜು ವಿನೂತನ ಉಪಾಯವನ್ನು ಕಂಡು ಕೊಂಡಿದ್ದಾರೆ. ಸಾಕು ನಾಯಿಗೆ ಹುಲಿಯ ಬಣ್ಣ ಬಳಿದು ಕೋತಿಗಳನ್ನು ಹೆದರಿಸಿ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. </p>.<p>ಅವರ ವಿಲಕ್ಷಣ ಉಪಾಯದಿಂದ ಎಲ್ಲರಲ್ಲೂ ಬೆರಗು ಹುಟ್ಟಿಸಿದ್ದಾರೆ. ಹುಲಿಯ ವೇಷ ಧರಿಸಿರುವ ನಾಯಿಯ ಚಿತ್ರ ಹಾಗೂ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. </p>.<p>ತಾಲ್ಲೂಕಿನ ಅಜ್ಜೀಪುರದ ಹೊರವಲಯದಲ್ಲಿರುವ ತೋಟಗಳಿಗೆ ಕೋತಿಗಳ ಉಪಟಳ ವಿಪರೀತವಾಗಿದ್ದು, ಅವುಗಳನ್ನು ಕಾಯುವುದೇ ದೊಡ್ಡ ಸವಾಲಿನ ಕೆಲಸವಾಗಿತ್ತು. ಕೋತಿಗಳನ್ನು ಓಡಿಸಲು ಮಂಜು ಕಂಡುಕೊಂಡ ಉಪಾಯ ಫಲ ನೀಡುತ್ತಿದೆ.</p>.<p>ಜಮೀನಿನಲ್ಲಿ ಬೆಳೆದಿದ್ದ ಬೆಳೆ, ತೆಂಗಿನ ಕಾಯಿಗಳನ್ನು ಹಾಳು ಮಾಡುತ್ತಿದ್ದ ಕೋತಿಗಳು ಈಗ ನಾಯಿ ನೋಡಿ ಹೆದರಿ ದೂರ ಸರಿದಿವೆ. ಬೆಳೆ ರೈತನ ಕೈ ಸೇರುತ್ತಿದೆ. ಕಾಡಿನ ಸಮೀಪದ ಜಮೀನುಗಳಲ್ಲಿ ನಾಯಿ ಓಡಾಡುತ್ತಿದ್ದು, ಹುಲಿ ವೇಷದ ನಾಯಿ ಕಂಡು ಬೆಚ್ಚಿ ಬಿದ್ದವರಿದ್ದಾರೆ. ನಿಜಾಂಶ ಗೊತ್ತಾದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>