<p><strong>ಹನೂರು</strong>: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೀಡಲಾಗುತ್ತಿರುವ ಕೃಷಿ ಸಾಲ ಪಡೆದು ರೈತರು ಆರ್ಥಿಕವಾಗಿ ಸದೃಢರಾಗಬೇಕು’ ಎಂದು ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ನರೇಂದ್ರ ಹೇಳಿದರು.</p>.<p>ಪಟ್ಟಣದ ಆರ್ಎಂಸಿ ಆವರಣದಲ್ಲಿ ಅಜ್ಜೀಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಹೂಸ ಸದಸ್ಯರಿಗೆ ಕೆಸಿಸಿ ಬೆಳೆ ಸಾಲದ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>95 ವರ್ಷಗಳ ಹಿಂದೆ ಪ್ರಾರಂಭಗೊಂಡ ಅಜ್ಜೀಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇಲ್ಲಿಯವರೆಗೂ ಯಾವುದೇ ಚ್ಯುತಿ ಬಾರದಂತೆ ನಡೆದುಕೊಂಡು ಬಂದಿದೆ. ಪ್ರಸ್ತುತ 63 ಮಂದಿ ಹೊಸ ಸದಸ್ಯರಿಗೆ ₹76.80 ಲಕ್ಷ ಬೆಳೆ ಸಾಲದ ಚೆಕ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ರೈತರ ಆರ್ಥಿಕ ಶಕ್ತಿ ವೃದ್ಧಿಗೆ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತಿವೆ. ಸರ್ಕಾರದ ಬೆಂಬಲದೊಂದಿಗೆ ನೀಡಲಾಗುತ್ತಿರುವ ಕೆಸಿಸಿ ಬೆಳೆ ಸಾಲವನ್ನು ರೈತರು ಸದುಪಯೋಗಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದರು.</p>.<p>ಸಹಕಾರ ಸಂಘಗಳು ರೈತರ ನಿಜವಾದ ಸ್ನೇಹಿತರಾಗಿದ್ದು, ಯಾವುದೇ ಕಷ್ಟ ಸಂದರ್ಭದಲ್ಲೂ ರೈತರೊಂದಿಗೆ ನಿಂತಿವೆ. ಹಾಗಾಗಿ ರೈತರು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ತಮ್ಮ ಸಂಘವು ಇನ್ನಷ್ಟು ಮೇಲಕ್ಕೆ ಏರಲು ತಾವೆಲ್ಲರೂ ಕೂಡ ಕೈಜೋಡಿಸಬೇಕು ಎಂದು ತಿಳಿಸಿದರು.</p>.<p>ಅಜ್ಜೀಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ಶ್ರೀನಿವಾಸನಾಯ್ಕ, ನಿರ್ದೇಶಕ ಶಾಕೀರ್ ಪಾಷ, ಮಾದೇವ್, ಶಾಖಾ ವ್ಯವಸ್ಥಾಪಕ ಕುಮಾರಸ್ವಾಮಿ, ಮೇಲ್ವಿಚಾರಕ ಬಾಲಾಜಿ, ಸಂಘದ ಸಿಇಒ ರಾಜೇಶ್ವರಿ ಮತ್ತು ಆಡಳಿತ ಮಂಡಳಿಯವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-37-1912729417</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೀಡಲಾಗುತ್ತಿರುವ ಕೃಷಿ ಸಾಲ ಪಡೆದು ರೈತರು ಆರ್ಥಿಕವಾಗಿ ಸದೃಢರಾಗಬೇಕು’ ಎಂದು ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ನರೇಂದ್ರ ಹೇಳಿದರು.</p>.<p>ಪಟ್ಟಣದ ಆರ್ಎಂಸಿ ಆವರಣದಲ್ಲಿ ಅಜ್ಜೀಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಹೂಸ ಸದಸ್ಯರಿಗೆ ಕೆಸಿಸಿ ಬೆಳೆ ಸಾಲದ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>95 ವರ್ಷಗಳ ಹಿಂದೆ ಪ್ರಾರಂಭಗೊಂಡ ಅಜ್ಜೀಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇಲ್ಲಿಯವರೆಗೂ ಯಾವುದೇ ಚ್ಯುತಿ ಬಾರದಂತೆ ನಡೆದುಕೊಂಡು ಬಂದಿದೆ. ಪ್ರಸ್ತುತ 63 ಮಂದಿ ಹೊಸ ಸದಸ್ಯರಿಗೆ ₹76.80 ಲಕ್ಷ ಬೆಳೆ ಸಾಲದ ಚೆಕ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ರೈತರ ಆರ್ಥಿಕ ಶಕ್ತಿ ವೃದ್ಧಿಗೆ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸುತ್ತಿವೆ. ಸರ್ಕಾರದ ಬೆಂಬಲದೊಂದಿಗೆ ನೀಡಲಾಗುತ್ತಿರುವ ಕೆಸಿಸಿ ಬೆಳೆ ಸಾಲವನ್ನು ರೈತರು ಸದುಪಯೋಗಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದರು.</p>.<p>ಸಹಕಾರ ಸಂಘಗಳು ರೈತರ ನಿಜವಾದ ಸ್ನೇಹಿತರಾಗಿದ್ದು, ಯಾವುದೇ ಕಷ್ಟ ಸಂದರ್ಭದಲ್ಲೂ ರೈತರೊಂದಿಗೆ ನಿಂತಿವೆ. ಹಾಗಾಗಿ ರೈತರು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ತಮ್ಮ ಸಂಘವು ಇನ್ನಷ್ಟು ಮೇಲಕ್ಕೆ ಏರಲು ತಾವೆಲ್ಲರೂ ಕೂಡ ಕೈಜೋಡಿಸಬೇಕು ಎಂದು ತಿಳಿಸಿದರು.</p>.<p>ಅಜ್ಜೀಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ಶ್ರೀನಿವಾಸನಾಯ್ಕ, ನಿರ್ದೇಶಕ ಶಾಕೀರ್ ಪಾಷ, ಮಾದೇವ್, ಶಾಖಾ ವ್ಯವಸ್ಥಾಪಕ ಕುಮಾರಸ್ವಾಮಿ, ಮೇಲ್ವಿಚಾರಕ ಬಾಲಾಜಿ, ಸಂಘದ ಸಿಇಒ ರಾಜೇಶ್ವರಿ ಮತ್ತು ಆಡಳಿತ ಮಂಡಳಿಯವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-37-1912729417</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>