<p><strong>ಚಾಮರಾಜನಗರ/ಹಾಸನ: </strong>ಚಾಮರಾಜನಗರ ಜಿಲ್ಲೆಯಾದ್ಯಂತ ಕೆಲ ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ 1,566 ಹೆಕ್ಟೇರ್ (3,915 ಎಕರೆ) ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.</p>.<p>ರಾಗಿ ಬೆಳೆಗೆ ಹೆಚ್ಚು ಹಾನಿಯಾಗಿದ್ದು, ಕಟಾವು ಸಾಧ್ಯವಾಗದೆ ಹಲವು ಕಡೆಗಳಲ್ಲಿ ತೆನೆಗಳು ನೆಲಕ್ಕೆ ಬಾಗಿವೆ. ಕೆಲವು ಕಡೆಗಳಲ್ಲಿ ತೆನೆಗಳಲ್ಲೇ ಮೊಳಕೆ ಬಂದಿದೆ. ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದ ರೈತರು ನಷ್ಟದ ಸುಳಿಗೆ ಸಿಲುಕಿದ್ದಾರೆ.</p>.<p>ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ 17,266 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿತ್ತು.ಕೃಷಿ ಇಲಾಖೆಯ ಪ್ರಕಾರ, ಮಳೆಯಿಂದಾಗಿ 1,335 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ನಷ್ಟವಾಗಿದೆ. ಆ ಪೈಕಿ, ಹನೂರು ತಾಲ್ಲೂಕಿನಲ್ಲೇ 1,100 ಹೆಕ್ಟೇರ್ನಲ್ಲಿ ಫಸಲು ನೀರು ಪಾಲಾಗಿದೆ. ಚಾಮರಾಜನಗರ ತಾಲ್ಲೂಕಿನಲ್ಲಿ 205 ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದೆ. 120 ಹೆಕ್ಟೇರ್ ಕಡಲೆ, 91 ಹೆಕ್ಟೇರ್ ಜೋಳ, 10 ಹೆಕ್ಟೇರ್ ನೆಲಗಡಲೆ ಬೆಳೆ ನಷ್ಟವಾಗಿದೆ.</p>.<p class="Subhead">ನೆಲಕಚ್ಚಿದ ರಾಗಿ: ಹಾಸನ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತೋಟ, ಗದ್ದೆ ಹಾಗೂ ಕೃಷಿ ಜಮೀನು ಜಲಾವೃತಗೊಂಡಿವೆ.</p>.<p>ಕಟಾವು ಹಂತದಲ್ಲಿರುವ ಹಾಗೂ ಕಟಾವು ಮಾಡಿರುವ ರಾಗಿ ಬೆಳೆ ನಾಶವಾಗಿದೆ. ಬೇಲೂರು ತಾಲ್ಲೂಕಿನಲ್ಲಿ, ಕೃಷಿ ಇಲಾಖೆ ಮಾಹಿತಿ ಪ್ರಕಾರ 19 ಸಾವಿರ ಹೆಕ್ಟೇರ್ ರಾಗಿ ಮತ್ತು ಸಾವಿರ ಹೆಕ್ಟೇರ್ ಮೆಕ್ಕೆಜೋಳನಾಶವಾಗಿದೆ.</p>.<p class="Subhead">ಮರಗಳು ಧರೆಗೆ: ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆ ಎದುರಿನ ಮನೆ ಮೇಲೆ ಬುಧವಾರ ನಸುಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿದೆ. ಮನೆಗೆ ಭಾಗಶಃ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ/ಹಾಸನ: </strong>ಚಾಮರಾಜನಗರ ಜಿಲ್ಲೆಯಾದ್ಯಂತ ಕೆಲ ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ 1,566 ಹೆಕ್ಟೇರ್ (3,915 ಎಕರೆ) ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.</p>.<p>ರಾಗಿ ಬೆಳೆಗೆ ಹೆಚ್ಚು ಹಾನಿಯಾಗಿದ್ದು, ಕಟಾವು ಸಾಧ್ಯವಾಗದೆ ಹಲವು ಕಡೆಗಳಲ್ಲಿ ತೆನೆಗಳು ನೆಲಕ್ಕೆ ಬಾಗಿವೆ. ಕೆಲವು ಕಡೆಗಳಲ್ಲಿ ತೆನೆಗಳಲ್ಲೇ ಮೊಳಕೆ ಬಂದಿದೆ. ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದ ರೈತರು ನಷ್ಟದ ಸುಳಿಗೆ ಸಿಲುಕಿದ್ದಾರೆ.</p>.<p>ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ 17,266 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿತ್ತು.ಕೃಷಿ ಇಲಾಖೆಯ ಪ್ರಕಾರ, ಮಳೆಯಿಂದಾಗಿ 1,335 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ನಷ್ಟವಾಗಿದೆ. ಆ ಪೈಕಿ, ಹನೂರು ತಾಲ್ಲೂಕಿನಲ್ಲೇ 1,100 ಹೆಕ್ಟೇರ್ನಲ್ಲಿ ಫಸಲು ನೀರು ಪಾಲಾಗಿದೆ. ಚಾಮರಾಜನಗರ ತಾಲ್ಲೂಕಿನಲ್ಲಿ 205 ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದೆ. 120 ಹೆಕ್ಟೇರ್ ಕಡಲೆ, 91 ಹೆಕ್ಟೇರ್ ಜೋಳ, 10 ಹೆಕ್ಟೇರ್ ನೆಲಗಡಲೆ ಬೆಳೆ ನಷ್ಟವಾಗಿದೆ.</p>.<p class="Subhead">ನೆಲಕಚ್ಚಿದ ರಾಗಿ: ಹಾಸನ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತೋಟ, ಗದ್ದೆ ಹಾಗೂ ಕೃಷಿ ಜಮೀನು ಜಲಾವೃತಗೊಂಡಿವೆ.</p>.<p>ಕಟಾವು ಹಂತದಲ್ಲಿರುವ ಹಾಗೂ ಕಟಾವು ಮಾಡಿರುವ ರಾಗಿ ಬೆಳೆ ನಾಶವಾಗಿದೆ. ಬೇಲೂರು ತಾಲ್ಲೂಕಿನಲ್ಲಿ, ಕೃಷಿ ಇಲಾಖೆ ಮಾಹಿತಿ ಪ್ರಕಾರ 19 ಸಾವಿರ ಹೆಕ್ಟೇರ್ ರಾಗಿ ಮತ್ತು ಸಾವಿರ ಹೆಕ್ಟೇರ್ ಮೆಕ್ಕೆಜೋಳನಾಶವಾಗಿದೆ.</p>.<p class="Subhead">ಮರಗಳು ಧರೆಗೆ: ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆ ಎದುರಿನ ಮನೆ ಮೇಲೆ ಬುಧವಾರ ನಸುಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿದೆ. ಮನೆಗೆ ಭಾಗಶಃ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>