<p>ಚಾಮರಾಜನಗರ: ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಗ್ರಾಮದ ಮುಖಂಡರು, ಗ್ರಾಮಸ್ಥರು ವಿಜೃಂಭಣೆಯಿಂದ ಆಚರಿಸಿದರು.</p>.<p>ಗ್ರಾಮದ ಸರ್ಕಲ್ನಲ್ಲಿ ಅಂಬೇಡ್ಕರ್ ಅವರ ಬೃಹತ್ ಕಟೌಟ್ ಅಳವಡಿಸಿ ಪ್ರಮುಖ ಬೀದಿಗಳನ್ನುವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಗ್ರಾಮದ ಯಜಮಾನರು ಹಾಗೂ ಮುಖಂಡರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೇಣ ಬತ್ತಿ ಹಚ್ಚಿ ಪ್ರಾರ್ಥಿಸಿದರು. ಸಂವಿಧಾನ ಪೀಠಿಕೆ ವಾಚನ ಮಾಡಿಲಾಯಿತು.</p>.<p>ಗ್ರಾಮದ ಅಂಬೇಡ್ಕರ್ ಭವನದ ಅವರಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಗ್ರಾಮಸ್ಥರಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಯಿತು.</p>.<p>ಗ್ರಾಮದ ಯಜಮಾನರಾದ ಮಹದೇವಯ್ಯ, ಮಹದೇವಸ್ವಾಮಿ, ರಮೇಶಮೂರ್ತಿ, ನಿರಂಜನ್, ರಮೇಶ, ರಾಜೇಶ, ಶಿವಸ್ವಾಮಿ, ಕಾಗಲವಾಡಿ ಚಂದ್ರು, ಪ್ರವೀಣ್, ಮರಿಸ್ವಾಮಿ, ಅಂಬೇಡ್ಕರ್ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-37-1017122400</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಗ್ರಾಮದ ಮುಖಂಡರು, ಗ್ರಾಮಸ್ಥರು ವಿಜೃಂಭಣೆಯಿಂದ ಆಚರಿಸಿದರು.</p>.<p>ಗ್ರಾಮದ ಸರ್ಕಲ್ನಲ್ಲಿ ಅಂಬೇಡ್ಕರ್ ಅವರ ಬೃಹತ್ ಕಟೌಟ್ ಅಳವಡಿಸಿ ಪ್ರಮುಖ ಬೀದಿಗಳನ್ನುವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಗ್ರಾಮದ ಯಜಮಾನರು ಹಾಗೂ ಮುಖಂಡರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೇಣ ಬತ್ತಿ ಹಚ್ಚಿ ಪ್ರಾರ್ಥಿಸಿದರು. ಸಂವಿಧಾನ ಪೀಠಿಕೆ ವಾಚನ ಮಾಡಿಲಾಯಿತು.</p>.<p>ಗ್ರಾಮದ ಅಂಬೇಡ್ಕರ್ ಭವನದ ಅವರಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಗ್ರಾಮಸ್ಥರಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಯಿತು.</p>.<p>ಗ್ರಾಮದ ಯಜಮಾನರಾದ ಮಹದೇವಯ್ಯ, ಮಹದೇವಸ್ವಾಮಿ, ರಮೇಶಮೂರ್ತಿ, ನಿರಂಜನ್, ರಮೇಶ, ರಾಜೇಶ, ಶಿವಸ್ವಾಮಿ, ಕಾಗಲವಾಡಿ ಚಂದ್ರು, ಪ್ರವೀಣ್, ಮರಿಸ್ವಾಮಿ, ಅಂಬೇಡ್ಕರ್ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-37-1017122400</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>